Politics: ಎಸ್‌.ಟಿ. ಸೋಮಶೇಖರ್‌ ಉಳಿಸಿಕೊಳ್ಳಲು ಬಿಜೆಪಿ ಯತ್ನ

ಯಶವಂತಪುರ ಕ್ಷೇತ್ರಕ್ಕೆ 7.62 ಕೋಟಿ ರೂ. ಬಿಡುಗಡೆ : ಆ. 25ಕ್ಕೆ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲಿರುವ ಶಾಸಕ

Team Udayavani, Aug 23, 2023, 12:16 AM IST

s t somashekhar

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ಯತ್ನದಲ್ಲಿ ವರಿಷ್ಠರು ಇದ್ದರೆ, ರಾಜ್ಯ ನಾಯಕರು ನಿರ್ಲಕ್ಷ್ಯ ತೋರಲಾರಂಭಿಸಿದ್ದಾರೆ. ಇತ್ತ ಈ ಕ್ಷೇತ್ರದ ಕುಡಿಯುವ ನೀರು ಯೋಜನೆಗೆ 7.63 ಕೋಟಿ ರೂ. ಅನುದಾನವನ್ನು ರಾಜ್ಯ ಸರಕಾರ ಬಿಡುಗಡೆ ಮಾಡಿದೆ.

ಎರಡೂ ಪಕ್ಷಗಳ ಹಗ್ಗಜಗ್ಗಾಟದಿಂದ ಅತಂತ್ರ ಸ್ಥಿತಿ ತಲುಪಿರುವ ಮಾಜಿ ಸಚಿವ ಸೋಮಶೇಖರ್‌, ಅತ್ತ ತಮ್ಮ ಬೆಂಬಲಿಗರನ್ನು ಕಾಂಗ್ರೆಸ್‌ಗೆ ಸೇರಿಸಿದ್ದು, ಇತ್ತ ಆ. 25ರಂದು ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲು ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರನ್ನು ಭೇಟಿಯಾಗುವ ಸಾಧ್ಯತೆಗಳಿವೆ. ದಿಲ್ಲಿಗೆ ಬರುವಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ ಕುಮಾರ್‌ ಸುರಾನ ಮೂಲಕ ಬಿ.ಎಲ್‌. ಸಂತೋಷ್‌ ಅವರು ಸೋಮಶೇಖರ್‌ಗೆ ಸಂದೇಶ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೊಂದೆಡೆ ಈಗಾಗಲೇ ತಮ್ಮ ಬೆಂಬಲಿಗರನ್ನು ಕಾಂಗ್ರೆಸ್‌ ಸೇರಿಸಿರುವ ಸೋಮಶೇಖರ್‌ ಬಗ್ಗೆ ರಾಜ್ಯ ಬಿಜೆಪಿ ನಾಯಕರು ನಿರ್ಲಕ್ಷಿಸಿದ್ದಾರೆ. ಪಕ್ಷದಲ್ಲಿ ಸಚಿವ ಸ್ಥಾನ ಕೊಟ್ಟು, ಶಾಸಕರನ್ನಾಗಿಯೂ ಮಾಡಲಾಗಿದೆ. ಅವರ ಮಾತು ಕೇಳಿಕೊಂಡು ಮಂಡಲ ಉಪಾಧ್ಯಕ್ಷ, ಮಾಜಿ ಅಧ್ಯಕ್ಷರನ್ನು ಉಚ್ಚಾಟಿಸಲಾಗಿದೆ. ಆದರೂ ಬೆಂಬಲಿಗರನ್ನು ಕಾಂಗ್ರೆಸ್‌ಗೆ ಕಳುಹಿಸುತ್ತಾರೆ, ಕ್ಷೇತ್ರದ ಅಭಿವೃದ್ಧಿ ನೆಪವೊಡ್ಡಿ ಸಿಎಂ ಜತೆ ಮಾತುಕತೆ ಮಾಡುತ್ತಾರೆ.

ಎರಡು ಆಯ್ಕೆ
ಪ್ರಸ್ತುತ ಪರಿಸ್ಥಿತಿಯಲ್ಲಿ ಸೋಮಶೇಖರ್‌ ತಮ್ಮ ಮುಂದೆ ಎರಡು ಆಯ್ಕೆಗಳನ್ನು ಇಟ್ಟುಕೊಂಡು, ಸಾಧಕ-ಬಾಧಕಗಳ ಚಿಂತೆಯಲ್ಲಿ ಮುಳುಗಿದ್ದಾರೆ. ಬೆಂಬಲಿಗರನ್ನು ಕಾಂಗ್ರೆಸ್‌ನಲ್ಲಿ ದಡ ಮುಟ್ಟಿಸಿ, ತಾವು ಬಿಜೆಪಿಯಲ್ಲೇ ಉಳಿಯುವ ಯೋಚನೆ ಒಂದೆಡೆಯಾದರೆ, ತಾವೂ ಕಾಂಗ್ರೆಸ್‌ ಸೇರುವ ಯೋಚನೆ ಇನ್ನೊಂದೆಡೆ ಇದೆ. ಕಾಂಗ್ರೆಸ್‌ ಸೇರುವುದರಿಂದ ಉಪಚುನಾವಣೆ ಎದುರಿಸಬೇಕಾಗುತ್ತದೆ. ಈಗಾಗಲೇ ಜೆಡಿಎಸ್‌ನ ಜವರಾಯಿ ಗೌಡರೊಂದಿಗೆ ಮಾಜಿ ಸಿಎಂ ಕುಮಾರಸ್ವಾಮಿ ಸಭೆ ನಡೆಸಿದ್ದು, ಸೋಮಶೇಖರ್‌ ಹಾಗೂ ಕಾಂಗ್ರೆಸ್‌ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಉಪ ಚುನಾವಣೆಯಲ್ಲಿ ಸೋತು ಶಾಸಕ ಸ್ಥಾನ ಕಳೆದುಕೊಳ್ಳುವುದಕ್ಕಿಂತ ಬೆಂಬಲಿಗರನ್ನಷ್ಟೇ ಕಾಂಗ್ರೆಸ್‌ ಸೇರಿಸಿ, ತಾವು ಬಿಜೆಪಿಯಲ್ಲಿ ಪದಾಧಿಕಾರ ಗಿಟ್ಟಿಸಿಕೊಂಡು ಶಾಸಕರಾಗಿಯೇ ಉಳಿಯುವ ಯೋಚನೆಯಲ್ಲಿದ್ದಾರೆ.

ಎಸ್‌.ಟಿ. ಸೋಮಶೇಖರ್‌ ಜತೆಗೆ ಮೊನ್ನೆಯಿಂದಲೂ ಮಾತನಾಡುತ್ತಿದ್ದೇನೆ. ಸಚಿವರಾಗಿ ಅಧಿಕಾರ ಅನುಭವಿಸಿದ್ದಾರೆ. ಶಿವರಾಮ್‌ ಹೆಬ್ಟಾರ್‌ ಹಾಗೂ ಸೋಮಶೇಖರ್‌ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದಿದ್ದಾರೆ. ಹಾಗಾಗಿ ಕಾಂಗ್ರೆಸ್‌ಗೆ ಹೋಗುವವರು ಯಾರೂ ಇಲ್ಲ.
– ಆರ್‌. ಅಶೋಕ್‌, ಮಾಜಿ ಸಚಿವ

 

ಟಾಪ್ ನ್ಯೂಸ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.