KR Pete: ದೂಳುಪೇಟೆಯಾದ ಕೆ.ಆರ್‌.ಪೇಟೆ!


Team Udayavani, Aug 23, 2023, 3:52 PM IST

TDY-12

ಕೆ.ಆರ್‌.ಪೇಟೆ: ಮಂಡ್ಯ ಜಿಲ್ಲೆಯ ಲ್ಲಿಯೇ ಕೆ.ಆರ್‌.ಪೇಟೆ ಪಟ್ಟಣ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಟ್ಟಣವಾಗಿದೆ. ಕ್ಷೇತ್ರದ ಹಿಂದಿನ ಶಾಸಕರಾಗಿದ್ದ ಸಚಿವ ನಾರಾಯಣ ಗೌಡರ ವಿಶೇಷ ಪ್ರಯತ್ನದ ಫಲವಾಗಿ ನೂರಾರು ಕೋಟಿ ರೂ. ವಿಶೇಷ ಅನುದಾನವು ಪಟ್ಟಣದ ಅಭಿವೃದ್ಧಿಗೆ ಹರಿದು ಬಂದಿದ್ದರೂ ಪಟ್ಟಣದ ರಸ್ತೆಗಳು, ಚರಂಡಿಗಳು, ಕಲ್ವರ್ಟ್‌ಗಳು ಸೇರಿದಂತೆ ಒಳಚರಂಡಿ ಯೋಜನೆ ಕಾಮಗಾರಿಗಳು ಕುಂಟುತ್ತಾ ಸಾಗಿವೆ.

ಪಟ್ಟಣವು ಅಭಿವೃದ್ಧಿಯ ಪಥದತ್ತ ಸಾಗದೇ, ಅಭಿವೃದ್ಧಿ ಕೆಲಸ-ಕಾರ್ಯಗಳು ಕುಂಟುತ್ತಾ ಆಮೆ ವೇಗದಲ್ಲಿ ಸಾಗಿರುವುದರಿಂದ ಕೆ.ಆರ್‌.ಪೇಟೆಯು ಧೂಳುಪೇಟೆಯಾಗಿ ಬದಲಾಗಿದ್ದು ರೋಗ- ರುಜಿನಗಳನ್ನು ಹರಡುವ ತಾಣವಾಗಿದೆ.

ಮಳೆ ಬಂದ್ರೆ ಕೆರೆಯಂತಾಗುವ ಬಸ್‌ ನಿಲ್ದಾಣ: ಸಣ್ಣ ಮಳೆಬಂದರೆ ಸಾಕು ಕೆರೆಯಾಗಿ ಬದಲಾಗುವ ಬಸ್‌ ನಿಲ್ದಾಣ, ತ್ಯಾಜ್ಯವು ತುಂಬಿ ಉಕ್ಕಿ ಹರಿಯುತ್ತಿರುವ ಒಳಚರಂಡಿ ಯೋಜನೆಯ ಮ್ಯಾನ್‌ ಹೋಲ್‌ಗ‌ಳು, ನಾಯಿಗಳಿಂದ ತುಂಬಿ ತುಳುಕುತ್ತಿರುವ ವಿವಿಧ ಬಡಾವಣೆಯ ಬೀದಿಗಳು. ಹಾಳು ಬಿದ್ದಿರುವ ಖಾಸಗಿ ಬಸ್‌ ನಿಲ್ದಾಣ, ಅರ್ಧಂಬರ್ಧ ಕಾಮಗಾರಿಯಿಂದಾಗಿ ದೂಳುಮಯವಾದ ರಸ್ತೆಗಳಿಂದ ಪಟ್ಟಣದ ಜನತೆ ಹಾಗೂ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ರೋಗ-ರುಜಿನಗಳಿಂದ ಬಳಲುತ್ತಿದ್ದಾರೆ.

ಪುರಸಭೆಗೆ ಹಿಡಿಶಾಪ:  ಕೆ.ಆರ್‌.ಪೇಟೆ ಪಟ್ಟಣದ ಪ್ರಮುಖವಾದ ಅಡ್ಡ ರಸ್ತೆಗಳಾಗಿರುವ ಹಳೇ ಕಿಕ್ಕೇರಿ ರಸ್ತೆ (ಡಾ.ಬಿ.ಆರ್‌.ಅಂಬೇಡ್ಕರ್‌) ಹಾಗೂ ಹೊಸ ಕಿಕ್ಕೇರಿ ರಸ್ತೆ (ಡಾ.ಪುನೀತ್‌ರಾಜ್‌ಕುಮಾರ್‌) ದೂಳುಮಯವಾದ ರಸ್ತೆಗಳಾಗಿ ಬದಲಾಗಿದ್ದು ಈ ಬಡಾವಣೆಯಲ್ಲಿ ವಾಸಮಾಡುತ್ತಿರುವ ನಿವಾಸಿಗಳು ಹಾಗೂ ಸಾರ್ವಜನಿಕರು ಪುರಸಭೆ ಆಡಳಿತ ಮಂಡಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

6 ತಿಂಗಳು ಕಳೆದ್ರೂ ಪೂರ್ಣಗೊಳ್ಳದ ಕಾಮ ಗಾರಿ: ನಗರೋತ್ಥಾನ ಯೋಜನೆಯ ವಿಶೇಷ ಅನು ದಾನ 3 ಕೋಟಿ ಹಣದಲ್ಲಿ ನಡೆಯುತ್ತಿರುವ ಎರಡೂ ರಸ್ತೆಗಳ ಚರಂಡಿ ಹಾಗೂ ಡಾಂಬರೀಕರಣ ಕಾಮಗಾರಿಗಳು ಕುಂಟುತ್ತಾ ಸಾಗಿವೆ. ಗುತ್ತಿಗೆದಾರ ಕಳಪೆ ಕೆಲಸ ನಡೆಸಿ ಸರ್ಕಾರದ ಹಣವನ್ನು ಕೊಳ್ಳೆ ಹೊಡೆಯುತ್ತಿದ್ದರೂ ಹೇಳುವವರು ಕೇಳುವವರು ಯಾರೂ ಇಲ್ಲದಂತಾ ಗಿದೆ. ಕಳೆದ ಫೆಬ್ರವರಿಯಲ್ಲಿ ಆರಂಭ ವಾದ ಕಾಮ ಗಾರಿಯು 6 ತಿಂಗಳು ಕಳೆಯುತ್ತಿ ದ್ದರೂ ಕಾಮಗಾರಿ ಸಂಪೂರ್ಣವಾಗುವ ಸೂಚನೆಯೇ ಕಾಣುತ್ತಿಲ್ಲ.

ಗುಂಡಿಮಯವಾದ ರಸ್ತೆಗಳು: ಕೆ.ಆರ್‌.ಪೇಟೆ ಪಟ್ಟಣದ ಪ್ರಮುಖ ಅಡ್ಡ ರಸ್ತೆಗಳಾಗಿರುವ ಹಳೇ ಮತ್ತು ಹೊಸ ಕಿಕ್ಕೇರಿ ರಸ್ತೆಗಳು ಸಂಪೂರ್ಣವಾಗಿ ಗುಂಡಿ ಬಿದ್ದು ಹಾಳಾಗಿರುವುದರಿಂದ ಗುಂಡಿ ಮಯ ವಾದ ರಸ್ತೆಗಳಲ್ಲಿ ವಾಹನಗಳು ಧೂಳೆಬ್ಬಿಸಿ ಕೊಂಡು ಓಡಾಡುತ್ತಿರುವುದರಿಂದ ಸಾರ್ವ ಜನಿಕರು ಹಾಗೂ ರಸ್ತೆ ಅಕ್ಕಪಕ್ಕದ ನಿವಾಸಿಗಳು ಅನಿವಾರ್ಯವಾಗಿ ಧೂಳು ಕುಡಿದು ಹಲವು ರೋಗ ಗಳಿಗೆ ತುತ್ತಾಗಿ ನರಳುತ್ತಿದ್ದಾರೆ. ಜನ ಸಾಮಾ ನ್ಯರ ಆರೋಗ್ಯದ ಜೊತೆ ಚೆಲ್ಲಾಟ ವಾಡಿ ಕೊಂಡು ಕಳಪೆ ಕಾಮಗಾರಿ ನಡೆಸಿ ಕೆಲಸ ಸಂಪೂ ರ್ಣ ಗೊಳಿಸದೇ ಬೇಜವಾಬ್ದಾರಿಯಿಂದ ವರ್ತಿ ಸುತ್ತಿರುವ ಗುತ್ತಿಗೆದಾರನ ವಿರುದ್ಧ ಕಾನೂನು ಕ್ರಮ ಕೈಗೊಂಡು ಕಪ್ಪುಪಟ್ಟಿಗೆ ಸೇರಿಸಬೇಕು ಎಂಬುದು ಪಟ್ಟಣದ ನಾಗರಿಕರ ಒತ್ತಾಯವಾಗಿದೆ.

ಪುರಸಭೆಯಲ್ಲಿ ಅಧ್ಯಕ್ಷರು ರಾಜೀನಾಮೆ ನೀಡಿದ್ದಾರೆ, ಮುಖ್ಯಾಧಿಕಾರಿಗಳ ಹುದ್ದೆ ಖಾಲಿ ಇದ್ದು, ಪ್ರಭಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಯಾರೂ ಕೂಡಾ ನಗರ ಅಭಿವೃದ್ಧಿಯ ಕಡೆ ಗಮನ  ಹರಿಸುತ್ತಿಲ್ಲ ಎಂಬುದು  ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.

ನಗರೋತ್ಥಾನ ಯೋಜನೆ ಅಡಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳ ಟೆಂಡರ್‌ ಪ್ರಕ್ರಿಯೆ ಮುಗಿದು. ಅರ್ಧಂಬರ್ಧ ಕಾಮಗಾರಿ ನಡೆಸಿ ಕೈಚೆಲ್ಲಿ ಕುಳಿತಿರುವ ಗುತ್ತಿಗೆದಾರನಿಂದ ಕಾಮಗಾರಿಯನ್ನು ಸಂಪೂರ್ಣಗೊಳಿಸಿ ದೂಳಿನ ವಾತಾವರಣ ಹೋಗಲಾಡಿಸಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು.ಕೆ.ಎಸ್‌.ಸುರೇಶ್‌ಕುಮಾರ್‌, ಹಿರಿಯ ನಾಗರಿಕರ ವೇದಿಕೆ  ಪ್ರಧಾನ ಕಾರ್ಯದರ್ಶಿ

ಹಳೆ ಹಾಗೂ ಹೊಸ ಕಿಕ್ಕೇರಿ ರಸ್ತೆಗಳು ಕೆ.ಆರ್‌.ಪೇಟೆ ಪಟ್ಟಣದ ಜನದಟ್ಟಣೆಯ ಪ್ರಮುಖ ರಸ್ತೆಗಳಾಗಿವೆ. ಪುರಸಭೆಯ ಅಧ್ಯಕ್ಷರು ಹಾಗೂ ಮುಖ್ಯಾಧಿಕಾರಿಗಳು ಗುತ್ತಿಗೆದಾರನಿಗೆ ಎಚ್ಚರಿಕೆ ನೀಡಿ ಆದಷ್ಟು ಜಾಗ್ರತೆಯಾಗಿ ರಸ್ತೆ ಕೆಲಸವನ್ನು ಸಂಪೂರ್ಣಗೊಳಿಸಿ ಶ್ರೀಸಾಮಾನ್ಯರು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು.ಡಿ.ಪ್ರೇಮಕುಮಾರ, ಪುರಸಭಾ ಸದಸ್ಯ 

-ಅರುಣ್‌ ಕುಮಾರ್‌

 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.