![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
NUH; ಟ್ರಕ್ ಗೆ ಡಿಕ್ಕಿ ಹೊಡೆದ ರೋಲ್ಸ್ ರಾಯ್ಸ್ ಕಾರು: ಟ್ರಕ್ ನಲ್ಲಿದ್ದ ಇಬ್ಬರು ಸಾವು
Team Udayavani, Aug 23, 2023, 7:05 PM IST
![NUH; ಟ್ರಕ್ ಗೆ ಡಿಕ್ಕಿ ಹೊಡೆದ ರೋಲ್ಸ್ ರಾಯ್ಸ್ ಕಾರು: ಟ್ರಕ್ ನಲ್ಲಿದ್ದ ಇಬ್ಬರು ಸಾವು](https://www.udayavani.com/wp-content/uploads/2023/08/roys-620x342.jpg)
ನುಹ್ (ಹರಿಯಾಣ): ರೋಲ್ಸ್ ರಾಯ್ಸ್ ಕಾರು ಮತ್ತು ಟ್ಯಾಂಕರ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಟ್ಯಾಂಕರ್ ನಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ದೆಹಲಿ-ಮುಂಬೈ-ಬರೋಡಾ ಎಕ್ಸ್ಪ್ರೆಸ್ ವೇಯಲ್ಲಿ ನಡೆದಿದೆ.
ರೋಲ್ಸ್ ರಾಯ್ಸ್ ನಲ್ಲಿದ್ದ ಮೂವರು ಗಾಯಗೊಂಡಿದ್ದು, ಆಯಿಲ್ ಟ್ಯಾಂಕರ್ ಟ್ರಕ್ ಚಾಲಕ ಮತ್ತು ಅವರ ಸಹಾಯಕ ಸಾವನ್ನಪ್ಪಿದ್ದಾರೆ ಎಂದು ಹರಿಯಾಣದ ನುಹ್ ನಲ್ಲಿ ಇಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಮಧ್ಯಾಹ್ನ ನಗೀನಾ ಪೊಲೀಸ್ ಠಾಣಾ ವ್ಯಾಪ್ತಿಯ ಉಮ್ರಿ ಗ್ರಾಮದ ಬಳಿ ರಾಂಗ್ ಸೈಡ್ನಲ್ಲಿ ಚಲಿಸುತ್ತಿದ್ದ ಟ್ಯಾಂಕರ್ ಟ್ರಕ್ ಐಷಾರಾಮಿ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.
ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ರೋಲ್ಸ್ ರಾಯ್ಸ್ ಲಿಮೋಸಿನ್ ಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿತು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಅದರಲ್ಲಿರುವ ಎಲ್ಲಾ ಐವರು ಪ್ರಯಾಣಿಕರನ್ನು ಮತ್ತೊಂದು ಕಾರಿನಲ್ಲಿ ಹಿಂದೆಯೇ ಇದ್ದ ಅವರ ಸಂಬಂಧಿಕರು ಸೂಕ್ತ ಸಮಯದಲ್ಲೇ ರಕ್ಷಿಸಿದರು.
ಇದನ್ನೂ ಓದಿ:Chandrayaan 3 ಸೂಪರ್ ಸಕ್ಸಸ್ ; ಪ್ರಧಾನಿ ಮೋದಿ ಸಂಭ್ರಮದ ಮಾತುಗಳು
ಅಪಘಾತದಲ್ಲಿ ಮೃತಪಟ್ಟವರನ್ನು ಟ್ಯಾಂಕರ್ ಟ್ರಕ್ ಚಾಲಕ ರಾಮಪ್ರೀತ್ ಮತ್ತು ಆತನ ಸಹಾಯಕ ಕುಲದೀಪ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಉತ್ತರ ಪ್ರದೇಶದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡಿರುವ ರೋಲ್ಸ್ ರಾಯ್ಸ್ ಕಾರಿನಲ್ಲಿದ್ದ ಮೂವರನ್ನು ಚಂಡೀಗಢದ ನಿವಾಸಿಗಳಾದ ದಿವ್ಯಾ ಮತ್ತು ತಸ್ಬೀರ್ ಮತ್ತು ದೆಹಲಿಯ ವಿಕಾಸ್ ಎಂದು ಗುರುತಿಸಲಾಗಿದ್ದು, ಅವರನ್ನು ಗುರುಗ್ರಾಮ್ ನ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-150x89.jpg)
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
![Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ](https://www.udayavani.com/wp-content/uploads/2024/07/satyendra-jaon-150x103.jpg)
Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ
![Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…](https://www.udayavani.com/wp-content/uploads/2024/07/baba-150x84.jpg)
Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…
![Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್](https://www.udayavani.com/wp-content/uploads/2024/07/cheeta-150x87.jpg)
Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್
![army](https://www.udayavani.com/wp-content/uploads/2024/07/army-3-150x88.jpg)
Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.