Udupi ಬಿಟ್ಟುಬಿಟ್ಟು ಸುರಿಯುತ್ತಿರುವ ಮಳೆ: ಕರಾವಳಿಯಲ್ಲಿ ಡೆಂಗ್ಯೂ, ಮಲೇರಿಯಾ ಉಲ್ಬಣ ಭೀತಿ


Team Udayavani, Aug 23, 2023, 11:10 PM IST

Udupi ಬಿಟ್ಟುಬಿಟ್ಟು ಸುರಿಯುತ್ತಿರುವ ಮಳೆ: ಕರಾವಳಿಯಲ್ಲಿ ಡೆಂಗ್ಯೂ, ಮಲೇರಿಯಾ ಉಲ್ಬಣ ಭೀತಿ

ಉಡುಪಿ: ಕರಾವಳಿಯಲ್ಲಿ ಬಿಟ್ಟುಬಿಟ್ಟು ಸುರಿಯುವ ಮಳೆಯ ಪರಿಣಾಮ ರೋಗಲಕ್ಷಣ ಭೀತಿ ಹೆಚ್ಚಾಗುವ ಸಾಧ್ಯತೆಗಳಿವೆ. ಉಡುಪಿಯಲ್ಲಿ ಪ್ರಸ್ತುತ 22 ಮಲೇರಿಯಾ ಹಾಗೂ 75 ಡೆಂಗ್ಯೂ  ಪ್ರಕರಣಗಳಿದ್ದರೆ ದ.ಕ.ಜಿಲ್ಲೆಯಲ್ಲಿ 47 ಮಂದಿಗೆ ಮಲೇರಿಯಾ ಹಾಗೂ 132 ಮಂದಿಗೆ ಡೆಂಗ್ಯೂ ಬಾಧಿಸಿದೆ.

ಉಡುಪಿ ಜಿಲ್ಲೆಯ ಸಂತೆಕಟ್ಟೆ ಹಾಗೂ ಕಲ್ಸಂಕ ಭಾಗದಲ್ಲಿ ಹೆಚ್ಚಿನವರಿಗೆ ಮಲೇರಿಯಾ ದೃಢಪಟ್ಟಿದೆ. ದ.ಕ. ಜಿಲ್ಲೆಯ ಜಪ್ಪು, ಕುದ್ರೋಳಿ ಭಾಗದಲ್ಲಿ ಈ ಹಿಂದೆ ಮಲೇರಿಯಾ ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿತ್ತಾದರೂ ಪ್ರಸ್ತುತ ಕಡಿಮೆಯಿದೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕೆಲವೊಂದು ಪ್ರಕರಣಗಳು ವರದಿಯಾಗುತ್ತಿವೆ.

ಡೆಂಗ್ಯೂ ಉಲ್ಬಣ
ಉಡುಪಿಯಲ್ಲಿ ಜೂನ್‌ ಅಂತ್ಯಕ್ಕೆ 45 ಡೆಂಗ್ಯೂ ಪ್ರಕರಣಗಳಿದ್ದರೆ ಜುಲೈ ಅಂತ್ಯಕ್ಕೆ 85 ಪ್ರಕರಣಗಳು ಕಂಡುಬಂದಿವೆ. ಆಗಸ್ಟ್‌ನಲ್ಲಿ 75 ಪ್ರಕರಣಗಳು ವರದಿಯಾಗಿವೆ. ದ.ಕ. ಜಿಲ್ಲೆಯಲ್ಲಿಯೂ ಇಳಿಮುಖಗೊಂಡಿದ್ದ ಪ್ರಕರಣ ಆಗಸ್ಟ್‌ನಲ್ಲಿ 132ಕ್ಕೆ ತಲುಪಿದೆ. ಈಗಾಗಲೇ ಸೋಂಕು ಲಕ್ಷಣ ಕಂಡುಬಂದವರಲ್ಲಿ ಹೆಚ್ಚಿನ ಮಂದಿ ವಲಸೆ ಕಾರ್ಮಿಕರೇ ಆಗಿದ್ದಾರೆ. ಝಾರ್ಖಂಡ್‌, ಅಸ್ಸಾಂ, ಉತ್ತರ ಪ್ರದೇಶ ಸಹಿತ ಅನ್ಯ ಜಿಲ್ಲೆಗಳಿಂದ ವಲಸೆ ಬಂದು ಇಲ್ಲಿ ಕೆಲಸ ಮಾಡುತ್ತಿರುವವರಲ್ಲಿ ಈ ರೋಗ ಲಕ್ಷಣಗಳು ಕಂಡುಬಂದಿವೆ.

ವಿವಿಧೆಡೆ ತಪಾಸಣೆ
ಉಡುಪಿ ಜಿಲ್ಲೆಯಲ್ಲಿ ಸುಮಾರು 900ಕ್ಕೂ ಅಧಿಕ ಮಂದಿ ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಹಾಗೂ ದ.ಕ. ಜಿಲ್ಲೆಯಲ್ಲಿ 1,353 ಮಂದಿ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ 45 ಮಂದಿ ಸಿಬಂದಿ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಹೆಚ್ಚು ರೋಗಲಕ್ಷಣ ಕಂಡುಬಂದಿರುವ ಪ್ರದೇಶಗಳಿಗೆ ಭೇಟಿ ನೀಡಿ ಲಾರ್ವ ಸರ್ವೇ, ರಕ್ತದ ಮಾದರಿ ಸಂಗ್ರಹ ನಡೆಸುತ್ತಿದ್ದಾರೆ.

ನಗರ ಭಾಗದಲ್ಲಿ ಬೇಕಿದೆ ಮತ್ತಷ್ಟು ಮುನ್ನೆಚ್ಚರಿಕೆ
ಮಲೇರಿಯಾ, ಡೆಂಗ್ಯೂ ರೋಗಲಕ್ಷಣಗಳು ಗ್ರಾಮೀಣ ಭಾಗಕ್ಕಿಂತಲೂ ನಗರ ಭಾಗದಲ್ಲಿ ಹೆಚ್ಚು ವರದಿಯಾಗುತ್ತಿರುವುದು ಆತಂಕಕಾರಿಯಾಗಿದೆ. ಅತೀ ಹೆಚ್ಚು ಜನರು ಇರುವುದು, ಹೆಚ್ಚಿನ ಕಾರ್ಯಚಟುವಟಿಕೆ, ಅಲ್ಲಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ತಾಣವಾಗುವುದು, ಪಾಳುಬಿದ್ದ ಕಟ್ಟಡಗಳಲ್ಲಿ ನೀರು ನಿಲ್ಲುವುದರಿಂದಲೂ ಸೊಳ್ಳೆಗಳು ಉತ್ಪತ್ತಿಯಾಗಿ ಹರಡಲು ಕಾರಣವಾಗುತ್ತಿದೆ. ಈ ಬಗ್ಗೆ ಆರೋಗ್ಯ ಇಲಾಖೆಯೊಂದಿಗೆ ಸ್ಥಳಿಯಾಡಳಿತ ಕೂಡ ಹೆಚ್ಚಿನ ಗಮನ ಹರಿಸಿ ಶುಚಿತ್ವಕ್ಕೆ ಆದ್ಯತೆ ನೀಡುವ ಆವಶ್ಯಕತೆಯಿದೆ.

ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ರಕ್ತದ ಮಾದರಿಯನ್ನು ಸಂಗ್ರಹಿಸಲಾಗುತ್ತಿದೆ. ನಿರಂತರ ಜ್ವರಲಕ್ಷಣ ಕಂಡುಬಂದರೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರಬಾರದು. ಹಾಗೆಯೇ ಅನ್ಯ ರಾಜ್ಯದಿಂದ ಬರುವವರಲ್ಲಿ ಜ್ವರಲಕ್ಷಣ ಕಂಡುಬಂದರೆ ತಪಾಸಣೆ ಮಾಡುವುದು ಉತ್ತಮ.
-ಡಾ| ಪ್ರಶಾಂತ್‌ ಭಟ್‌, ಡಾ| ನವೀನ್‌ಚಂದ್ರ ಕುಲಾಲ್‌
ಉಡುಪಿ, ದ.ಕ., ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.