West Bengal ಮಹಿಳೆಯರನ್ನು ರಕ್ಷಿಸಬೇಕಾದರೆ ಎನ್ ಕೌಂಟರ್ ಮಾಡಬೇಕು: ಸುವೇಂದು ಅಧಿಕಾರಿ
Team Udayavani, Aug 24, 2023, 6:32 PM IST
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮಹಿಳೆಯರನ್ನು ರಕ್ಷಿಸಬೇಕಾದರೆ ಪೊಲೀಸರು ಎನ್ ಕೌಂಟರ್ ಗಳನ್ನು ಮಾಡಬೇಕಾಗುತ್ತದೆ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ. ಅಲ್ಲದೆ ಉತ್ತರ ಪ್ರದೇಶ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರೀತಿಯ ವ್ಯಕ್ತಿಯಿಂದ ಮಾತ್ರ ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ನಿಭಾಯಿಸಲು ಸಾಧ್ಯ ಎಂದರು.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಆರೋಪಿಸಿದರು.
“ಕಾಲೇಜು ದಾಟದ ಹೆಣ್ಣು ಮಕ್ಕಳು ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ. ಪಶ್ಚಿಮ ಬಂಗಾಳ ಕೊಲೆಗಾರರ ತಾಣವಾಗಿ ಮಾರ್ಪಟ್ಟಿದೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಂತಹ ಒಬ್ಬರಿಂದ ಮಾತ್ರ ಪರಿಸ್ಥಿತಿಯನ್ನು ನಿಯಂತ್ರಿಸಬಹುದು” ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ.
“ಅಗತ್ಯವಿದ್ದರೆ, ಈ ಅಪರಾಧಿಗಳನ್ನು ಎನ್ ಕೌಂಟರ್ ಮಾಡಬೇಕು. ಈ ಅಪರಾಧಿಗಳಿಗೆ ಮನುಷ್ಯರೊಂದಿಗೆ ವಾಸಿಸುವ ಯಾವುದೇ ಹಕ್ಕಿಲ್ಲ” ಎಂದು ಅವರು ಹೇಳಿದರು.
ಸುವೇಂದು ಅಧಿಕಾರಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶಾಸಕ ತಪಸ್ ರಾಯ್, ” ಬಂಗಾಳವನ್ನು ಯೋಗಿ ರಾಜ್ಯ ಆಗಿ ಪರಿವರ್ತಿಸಲು ಸುವೇಂದು ಎಷ್ಟು ಬಯಸಿದರೂ ಅದು ಎಂದಿಗೂ ಆಗುವುದಿಲ್ಲ” ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal ಕೋರ್ಟ್ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Supreme court ಯೂಟ್ಯೂಬ್ ಲೈವ್ ಸ್ಟ್ರೀಮ್ ಚಾನೆಲ್ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.