Himachal: ಭಾರೀ ಮಳೆಯ ಪರಿಣಾಮ ಕುಸಿದ 8 ಕಟ್ಟಡಗಳು
Team Udayavani, Aug 24, 2023, 9:20 PM IST
ಶಿಮ್ಲಾ: ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಅನ್ನಿ ಪ್ರದೇಶದಲ್ಲಿ ಇತ್ತೀಚಿನ ಭಾರೀ ಮಳೆಯ ಪರಿಣಾಮವಾಗಿ ಎಂಟು ಕಟ್ಟಡಗಳು ಗುರುವಾರ ಕುಸಿದಿವೆ. ಇದರಿಂದ ಪ್ರದೇಶದಲ್ಲಿ ಧೂಳು ಆವರಿಸಿದ್ದು, ದೊಡ್ಡ ಪ್ರಮಾಣದ ಅವಶೇಷಗಳು ಉಂಟಾಗಿದೆ. ನಾಲ್ಕು-ಐದು ದಿನಗಳ ಹಿಂದೆ ಅಂಗಡಿಗಳು, ಬ್ಯಾಂಕುಗಳು ಹಾಗೂ ಇತರೆ ವಾಣಿಜ್ಯ ಕಟ್ಟಡಗಳನ್ನು ಒಳಗೊಂಡ ಎಂಟು ಕಟ್ಟಡಗಳ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಈ ಕಟ್ಟಡಗಳನ್ನು ಅಸುರುಕ್ಷಿತ ಎಂದು ಘೋಷಿಸಿದ ಜಿಲ್ಲಾಡಳಿತ, ಮುಂಜಾಗ್ರತಾ ಕ್ರಮವಾಗಿ ಅಲ್ಲಿದ್ದ ಎಲ್ಲರನ್ನು ಸ್ಥಳಾಂತರಿಸಿತ್ತು. ಈ ಹಿನ್ನೆಲೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ನಷ್ಟದ ಅಂದಾಜು ಕಾರ್ಯ ಪ್ರಗತಿಯಲ್ಲಿದೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ-305ರ ಅನ್ನಿ ಪ್ರದೇಶದ ಕಟ್ಟಡಗಳಲ್ಲಿರುವ ಜನರ ಸ್ಥಳಾಂತರ ಕಾರ್ಯ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿಮಾಚಲ ಪ್ರದೇಶದ ಹಲವು ಭಾಗಗಳಲ್ಲಿ ಗುರುವಾರವೂ ಭಾರೀ ಮಳೆ ಮುಂದುವರಿದಿದೆ. ಪಲಂಪುರ್ದಲ್ಲಿ 137 ಮಿಮೀ, ನಹಾನ್ನಲ್ಲಿ 93 ಮಿಮೀ, ಶಿಮ್ಲಾದಲ್ಲಿ 79 ಮಿಮೀ, ಧರ್ಮಶಾಲಾ 70 ಮಿಮೀ ಹಾಗೂ ಮಂಡಿಯಲ್ಲಿ 57 ಮಿಮೀ ಮಳೆಯಾಗಿದೆ. ಮಳೆ ಪರಿಣಾಮವಾಗಿ ಜೂ.24ರಿಂದ ಇಲ್ಲಿಯವರೆಗೆ ಒಟ್ಟು 238 ಮಂದಿ ಮೃತಪಟ್ಟಿದ್ದು, 40 ಮಂದಿ ಕಾಣೆಯಾಗಿದ್ದಾರೆ.
ತಮಿಳುನಾಡಿನಿಂದ 10 ಕೋಟಿ ರೂ.:
ಭಾರಿ ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ನಲಗುತ್ತಿರುವ ಹಿಮಾಚಲ ಪ್ರದೇಶದ ವಿಪತ್ತು ಪರಿಹಾರ ನಿಧಿಗೆ ತಮಿಳುನಾಡು ಸರ್ಕಾರ 10 ಕೋಟಿ ರೂ.ಗಳನ್ನು ನೀಡಿದೆ. ಈ ಹಿಂದೆ ಕರ್ನಾಟಕ, ರಾಜಸ್ಥಾನ ಮತ್ತು ಛತ್ತೀಸಗಢ ಸರ್ಕಾರಗಳು ಕೂಡ ದೇಣಿಗೆ ನೀಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್ಗೆ ಹೋಗುತ್ತಿಲ್ಲ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.