TOBY: ಸೈಲೆಂಟ್‌ ಶೆಟ್ರ ವೈಲೆಂಟ್‌ ಎಂಟ್ರಿ


Team Udayavani, Aug 25, 2023, 8:12 AM IST

TOBY: ಸೈಲೆಂಟ್‌ ಶೆಟ್ರ ವೈಲೆಂಟ್‌ ಎಂಟ್ರಿ

“ಒಂದು ಮೊಟ್ಟೆಯ ಕಥೆ’ ಮೂಲಕ ಸೈಲೆಂಟ್‌ ಆಗಿ ಬಂದ ರಾಜ್‌ ಬಿ ಶೆಟ್ಟಿ ಈಗ ಸಖತ್‌ ವೈಲೆಂಟ್‌ ಆಗಿದ್ದಾರೆ. ಈಗಾಗಲೇ “ಗರುಡ ಗಮನ ವೃಷಭ ವಾಹನ’ ಮೂಲಕ ಕೈಗೆ ರಕ್ತಮೆತ್ತಿಕೊಂಡಿದ್ದ ರಾಜ್‌ ಶೆಟ್ಟಿ ಈ ಬಾರಿ ಇಡೀ ಪೂರ್ತಿ ದೇಹಕ್ಕೆ ರಕ್ತಾಭಿಷೇಕ ಮಾಡಿಕೊಂಡಂತಿದೆ. ಅವರ ಈ ರಕ್ತತರ್ಪಣಕ್ಕೆ ಕಾರಣವಾಗಿರೋದು “ಟೋಬಿ’.  ನಿಮಗೆ ಗೊತ್ತಿರುವಂತೆ ರಾಜ್‌ ಬಿ ಶೆಟ್ಟಿ “ಟೋಬಿ’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದು, ಆ ಚಿತ್ರ ಇಂದು ಬಿಡುಗಡೆ ಯಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಫ‌ಸ್ಟ್‌ಲುಕ್‌, ಟ್ರೇಲರ್‌ ಸಿನಿಮಾ ಮೇಲಿನ ಕುತೂಹಲ ಹೆಚ್ಚಿಸಿದೆ.

ನೈಜ ಘಟನೆ ಸುತ್ತ ಟೋಬಿ: ಬರಹಗಾರ ಟಿ.ಕೆ.ದಯಾನಂದ್‌ ಅವರ ಕಥೆ ಈಗ “ಟೋಬಿ’ ಆಗಿದೆ. ಇದು ಕಾರವಾರದಲ್ಲಿ ಕಂಡ ಒಬ್ಬ ವಿಲಕ್ಷಣ ವ್ಯಕ್ತಿತ್ವದ ವ್ಯಕ್ತಿಯ ಕಥೆಯಂತೆ. ಅದನ್ನು ಈಗ ಸಿನಿಮಾ ಮಾಡಲಾಗಿದೆ. ರಾಜ್‌ ಬಿ ಶೆಟ್ಟಿ ಅವರಿಗೆ ಈ ಸಿನಿಮಾದ ಕಥೆ ತುಂಬಾ ಹೊಸದಾಗಿದೆಯಂತೆ. “ನನಗೆ ಈ ಸಿನಿಮಾದ ಕಥೆ ತುಂಬಾ ಹೊಸದೆನಿಸಿತು. ಮುಖ್ಯವಾಗಿ ನನ್ನ ಪಾತ್ರವೇ ವಿಭಿನ್ನವಾಗಿದೆ. ಅದರ ಜೊತೆಗೆ ನಿರೂಪಣೆ ಕೂಡಾ. ನಾವು ಕಂಫ‌ರ್ಟ್‌ ಝೋನ್‌ನಿಂದ ಆಚೆ ಬಂದು ಮಾಡಿರುವ ಸಿನಿಮಾವಿದು. ಇಲ್ಲಿ ಸಿಟ್ಟು, ಕ್ರೋಧ, ಆಕ್ರೋಶ ಎಲ್ಲವೂ ಇದೆ. ಅವೆಲ್ಲದಕ್ಕೂ ಒಂದು ಕಾರಣವಿದೆ. ಅದನ್ನು ಸಿನಿಮಾದಲ್ಲೇ ನೋಡಬೇಕು’ ಎನ್ನುವುದು ರಾಜ್‌ ಬಿ ಶೆಟ್ಟಿ ಅವರ ಮಾತು.

“ನನಗೆ ಗೊತ್ತಿಲ್ಲದ ವಿಚಾರಗಳನ್ನು ಕಲಿತು ಈ ಸಿನಿಮಾದಲ್ಲಿ ಹೇಳಿದ್ದೇನೆ’ ಎನ್ನಲು ರಾಜ್‌ ಶೆಟ್ಟಿ ಮರೆಯುವುದಿಲ್ಲ.  “ಟೋಬಿ’ ಚಿತ್ರ ಮೇಲ್ನೋಟಕ್ಕೆ ಔಟ್‌ ಅಂಡ್‌ ಔಟ್‌ ಆ್ಯಕ್ಷನ್‌ ಸಿನಿಮಾದಂತೆ ಕಾಣುತ್ತಿದೆ. ಆದರೆ, ರಾಜ್‌ ಬಿ ಶೆಟ್ಟಿ ಹೇಳುವಂತೆ ಇದು ಔಟ್‌ ಅಂಡ್‌ ಔಟ್‌ ಫ್ಯಾಮಿಲಿ ಡ್ರಾಮಾ. ಚಿತ್ರದಲ್ಲಿ ಫ್ಯಾಮಿಲಿ ಎಮೋಶನ್ಸ್‌ಗೆ ಹೆಚ್ಚಿನ ಮಹತ್ವ ನೀಡಲಾಗಿದೆಯಂತೆ. “ಇದು ಕೌಟುಂಬಿಕ ಸಿನಿಮಾ. ಇದರಲ್ಲಿ ಫ್ಯಾಮಿಲಿ ಎಮೋಶನ್ಸ್‌ಗೆ ತುಂಬಾ ಸ್ಕೋಪ್‌ ಇದೆ. ಒಂದು ಕುಟುಂಬದ ನಡುವಿನ ಸಂಬಂಧ, ಅವರ ನಡುವಿನ ಬಂಧ ಯಾವ ರೀತಿಯದ್ದು ಎಂಬ ವಿಷಯವನ್ನು ನಾವು ಟೋಬಿಯ ಮೂಲಕ ಜನರಿಗೆ ಹೇಳಲಿದ್ದೇವೆ’ ಎನ್ನುವ ರಾಜ್‌ ಶೆಟ್ಟಿ,

ಸಿನಿಮಾದ ಪೋಸ್ಟರ್‌ ಬಗೆಗಿನ ಕುತೂಹಲದ ಬಗ್ಗೆಯೂ ಹೇಳುತ್ತಾರೆ. “ಪೋಸ್ಟರ್‌ ಬಿಟ್ಟ ನಂತರ ಸಿನಿಮಾ ಪ್ರೇಮಿಗಳಲ್ಲಿ ಅನೇಕ ಪ್ರಶ್ನೆಗಳು ಹುಟ್ಟಿವೆ. ಮೂಗುತಿ, ಮುಖದ ಮೇಲಿನ ಇಂಟೆನ್ಸ್‌, ಬ್ಯಾಕ್‌ಡ್ರಾಪ್‌… ಹೀಗೆ ಅನೇಕ ಅಂಶಗಳ ಬಗ್ಗೆ ಪ್ರಶ್ನೆ ಎದ್ದಿದೆ. ನಾನು ಹೋದಲ್ಲೆಲ್ಲಾ ಈ ಪ್ರಶ್ನೆಗಳನ್ನು ಜನ ಕೇಳುತ್ತಿದ್ದಾರೆ. ಈ ಮೂಲಕ ನನ್ನ ಉದ್ದೇಶ ಸಫ‌ಲವಾಗಿದೆ’ ಎಂದು ಖುಷಿಯಿಂದ ಹೇಳುತ್ತಾರೆ.

 ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.