Puttur: ಗೌರಿ ಕೊಲೆ ಪ್ರಕರಣ; ಬಗೆದಷ್ಟು ಆಳ

ಗೌರಿ ಹೈಸ್ಕೂಲಿನಲ್ಲಿ ಕಲಿಯುವಾಗಲೇ ಆರೋಪಿ ಪರಿಚಯ

Team Udayavani, Aug 26, 2023, 12:46 AM IST

Puttur: ಗೌರಿ ಕೊಲೆ ಪ್ರಕರಣ; ಬಗೆದಷ್ಟು ಆಳ

ಪುತ್ತೂರು: ನಗರದ ಮಹಿಳಾ ಪೊಲೀಸ್‌ ಠಾಣೆಯ ಬಳಿಯಲ್ಲಿ ಗುರುವಾರ ಹಾಡಹಗಲೇ ಯುವಕನೋರ್ವ ಯುವತಿಯನ್ನು ಚೂರಿಯಿಂದ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪದ್ಮರಾಜ್‌ನನ್ನು ಶುಕ್ರವಾರ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಕರಣವು ಬಗೆದಷ್ಟು ಆಳವಾಗುತ್ತಿದ್ದು, ಕೆದಕಿದಷ್ಟು ಮತ್ತಷ್ಟು ಸಂಗತಿಗಳು ಹೊರ ಬರುತ್ತಿವೆ. ಆರೋಪಿಗೆ ಗೌರಿ ಹಲವು ವರ್ಷಗಳಿಂದಲೇ ಪರಿಚಯದಲ್ಲಿದ್ದು, ಯುವತಿಯು ಪ್ರೀತಿಯ ವಿಚಾರದಲ್ಲಿ ತನ್ನ ಬಗ್ಗೆ ನಿರ್ಲಕ್ಷ್ಯ ತೋರುತ್ತಿದ್ದಾಳೆ ಎಂಬ ಕಾರಣಕ್ಕೆ ಆತ ಕೃತ್ಯ ಎಸಗಿರುವುದು ವಿಚಾರಣೆಯ ವೇಳೆ ದೃಢಪಟ್ಟಿದೆ.

ಶಾಲೆಯಲ್ಲೇ ಪರಿಚಯ ಮಾಡಿಕೊಂಡಿದ್ದ
ವಿಟ್ಲದ ಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ಕಲಿಯುತ್ತಿದ್ದ ಗೌರಿಯನ್ನು ಪದ್ಮರಾಜ್‌ ಪರಿಚಯ ಮಾಡಿಕೊಂಡಿದ್ದ. ಪರಿಚಯ ಕ್ರಮೇಣ ಪ್ರೀತಿಗೆ ತಿರುಗಿತ್ತು. ಕೆಲವು ವರ್ಷಗಳಲ್ಲಿ ಇವರಿಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ಆತನ ವಿರುದ್ಧವೇ ಆಕೆ ವಿಟ್ಲ ಠಾಣೆಗೆ ದೂರು ನೀಡಿದ್ದಳು. ಪೊಲೀಸರು ಇಬ್ಬರನ್ನೂ ಠಾಣೆಗೆ ಕರೆಯಿಸಿ ಮುಂದಕ್ಕೆ ಪರಸ್ಪರ ಮಾತುಕತೆ ಇಲ್ಲ ಎಂಬುದಾಗಿ ಮುಚ್ಚಳಿಕೆ ಬರೆಯಿಸಿ ಕಳುಹಿಸಲಾಗಿತ್ತು. ಆದರೆ ಆ ಬಳಿಕವೂ ಇಬ್ಬರ ನಡುವೆ ಮಾತುಕತೆ ಮುಂದುವರಿದಿತ್ತು ಎನ್ನುವ ಅಂಶ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಮೊಬೈಲ್‌ ಗಿಫ್ಟ್ ಕೊಟ್ಟಿದ್ದ?
ಆ. 24ರಂದು ಪದ್ಮರಾಜ್‌ ಗೌರಿ ಕೈಯಿಂದ ಕಸಿದುಕೊಂಡು ಹೋಗಿದ್ದ ಮೊಬೈಲ್‌ ಆತ ಈ ಹಿಂದೆ ಗಿಫ್ಟ್ ರೂಪದಲ್ಲಿ ನೀಡಿರುವುದು ಎನ್ನಲಾಗಿದೆ. ಈ ಮಧ್ಯೆ ಬೇರೊಬ್ಬ ಯುವಕನ ವಿಚಾರದಲ್ಲಿ ಗೌರಿ ಜತೆ ಮನಸ್ತಾಪ ಹೊಂದಿದ್ದ ಪದ್ಮರಾಜ್‌ ಅದೇ ಕಾರಣಕ್ಕೆ ಆತ, ಗೌರಿ ಕೆಲಸ ಮಾಡುತ್ತಿದ್ದ ಪುತ್ತೂರಿನ ಫ್ಯಾನ್ಸಿ ಅಂಗಡಿ ಸನಿಹ ಬಂದು ಆಕೆಯನ್ನು ಕರೆದು ಮೊಬೈಲ್‌ ಕಿತ್ತುಕೊಂಡಿದ್ದ ಎನ್ನಲಾಗಿದೆ.

ಠಾಣೆಯ ಬಳಿಯೇ ಬೆದರಿಕೆ
ಆರೋಪಿಯು ಪೊಲೀಸ್‌ ಠಾಣೆಯಿಂದ ಏಳೆಂಟು ಹೆಜ್ಜೆ ದೂರದಲ್ಲಿಯೇ ಯುವತಿಗೆ ಚಾಕುವಿನಿಂದ ಇರಿದಿರುವ ವಿಚಾರ ಇಡೀ ನಗರವನ್ನೇ ಬೆಚ್ಚಿ ಬೀಳಿಸಿದೆ. ಘಟನೆ ನಡೆದ ಆಸುಪಾಸಿನಲ್ಲೇ ಒಟ್ಟು ಮೂರು ಪೊಲೀಸ್‌ ಠಾಣೆಗಳಿದ್ದರೂ, ಆತ ಕೃತ್ಯಕ್ಕೆ ಮುಂದಾಗಿರುವುದು ಆಶ್ಚರ್ಯ ಮೂಡಿಸಿದೆ. ಯುವತಿಯ ಮೇಲೆ ದಾಳಿ ಮಾಡುತ್ತಿದ್ದ ವೇಳೆ ತಡೆಯಲು ಬಂದ ಕೆಲವರಿಗೆ ಆರೋಪಿಯು ಚೂರಿಯಿಂದ ಬೆದರಿಕೆಯನ್ನೂ ಒಡ್ಡಿದ್ದ ಎನ್ನಲಾಗಿದೆ.

ಕೃತ್ಯಕ್ಕೆ ಬಳಸಿದ್ದ ಬೈಕ್‌ ವಶ
ಆರೋಪಿಯು ತಾನು ಕೆಲಸ ನಿರ್ವಹಿಸುತ್ತಿದ್ದ ಸಂಸ್ಥೆಯ ಓರ್ವರ ಬೈಕ್‌ನಲ್ಲಿ ಬಂದಿದ್ದು, ಆ ಬೈಕ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜತೆಗೆ ಫ್ಯಾನ್ಸಿ ಅಂಗಡಿ ಬಳಿ ಆತ ಜಗಳ ಮಾಡಿರುವ ಕುರಿತಂತೆ ಸಿಸಿ ಕೆಮರಾ ದೃಶ್ಯಾವಳಿಯನ್ನು ಪಡೆದುಕೊಂಡಿದ್ದಾರೆ. ಆರೋಪಿ ಕೃತ್ಯಕ್ಕೆ ಬಳಸಿದ ಚಾಕು ಅನ್ನು ವಶಕ್ಕೆ ಪಡೆದಿರುವ ಮಾಹಿತಿ ಲಭ್ಯವಾಗಿದೆ.

ಪಿಯುಸಿ ಓದಿ ಕೆಲಸಕ್ಕೆ ಸೇರಿದ್ದಳು
ಗೌರಿ ಪದವಿ ಪೂರ್ವ ಶಿಕ್ಷಣ ಪಡೆದು ಮೂರು ವಾರಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿದ್ದಳು. ಮಧ್ಯಾಹ್ನ ಮನೆಗೆ ತೆರಳುವುದಾಗಿ ಹೇಳಿ ಅಂಗಡಿಯಿಂದ ಬಂದಿದ್ದಳು ಎನ್ನುವ ಮಾಹಿತಿ ಲಭಿಸಿದೆ.

ಅಂಗಡಿ ಮಾಲಕ ನೀಡಿದ ಮಾಹಿತಿ ಪ್ರಕಾರ, ಆಕೆ ಕೆಲಸಕ್ಕೆ ಬರುವುದಿಲ್ಲ ಎಂದು ತಿಳಿಸಿ ಗುರುವಾರ ಮಧ್ಯಾಹ್ನ 12.30ರ ವೇಳೆಯಲ್ಲಿ ಸಂಬಳ ಪಡೆದು ಹೋಗಿದ್ದಾಳೆ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.