Theft: ನಿರುದ್ಯೋಗಿ ಪತಿಗೆ ಬುದ್ಧಿ ಕಲಿಸಲು ಪತ್ನಿ ಕಳ್ಳ ಕೃತ್ಯ


Team Udayavani, Aug 26, 2023, 11:31 AM IST

tdy-3

ಬೆಂಗಳೂರು: ಕೆಲಸ ಇಲ್ಲದೆ ಖಾಲಿ ಕುಳಿತಿದ್ದ ಪತಿಗೆ ಬುದ್ಧಿ ಕಲಿಸಲೆಂದು ಸ್ನೇಹಿತರ ಬಳಿಯೇ ಚಿನ್ನ, ಸ್ಕೂಟರ್‌ ಕಳ್ಳತನ ಮಾಡಿಸಿ ಠಾಣೆಗೆ ದೂರು ಕೊಟ್ಟ ಪತ್ನಿಯ ಕಳ್ಳಾಟ ಕೊನೆಗೂ ಬಯಲಾಗಿದೆ.

ಧನರಾಜ್‌, ರಾಕೇಶ್‌ ಬಂಧಿತರು.  109 ಗ್ರಾಂ ಚಿನ್ನ, ಕೃತ್ಯಕ್ಕೆ ಬಳಸಿದ್ದ 2 ಬೈಕ್‌ ವಶಕ್ಕೆ ಪಡೆದುಕೊಂಡಿದ್ದಾರೆ.

ಮಲ್ಲೇಶ್ವರ ನಿವಾಸಿ ಪೊಲೀಸರ ಬಲೆಗೆ ಸಿಕ್ಕಿಬಿದ್ದ ಮಹಿಳೆಯ ಪತಿ ಯಾವುದೇ ಕೆಲಸಕ್ಕೆ ಹೋಗದೇ ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳುತ್ತಿದ್ದ. ಇದರಿಂದ ಬೇಸೆತ್ತ ಮಹಿಳೆ ಮನೆಯಲ್ಲಿರುವ ಚಿನ್ನಾಭರಣ, ದ್ವಿಚಕ್ರವಾಹನ ಕಳವಾಗಿದೆ ಎಂದರೆ ತನ್ನ ಪತಿ ಕೆಲಸಕ್ಕೆ ಹೋಗಬಹುದು ಎಂದು ಭಾವಿಸಿದ್ದಳು. ಈ ವಿಚಾರವನ್ನು ಆರೋಪಿಗಳಾದ ಧನರಾಜ್‌ ಹಾಗೂ ರಾಕೇಶ್‌ಗೆ ತಿಳಿಸಿದ್ದಳು. ತಾನು ರೂಪಿಸಿದ ಸಂಚಿನಂತೆ ಇತ್ತೀಚೆಗೆ ಪತಿಗೆ ತಿಳಿಸಿ ಬ್ಯಾಂಕ್‌ನಲ್ಲಿ ಅಡವಿಟ್ಟಿದ್ದ 109 ಗ್ರಾಂ ಚಿನ್ನ ಬಿಡಿಸಿಕೊಂಡು ದ್ವಿಚಕ್ರವಾಹನದ ಡಿಕ್ಕಿಯಲ್ಲಿ ಇಟ್ಟುಕೊಂಡು ಬಂದಿದ್ದಳು. ಮಲ್ಲೇಶ್ವರ 13ನೇ ಕ್ರಾಸ್‌ನಲ್ಲಿ ಸ್ಕೂಟರ್‌ ಅನ್ನು ನಿಲುಗಡೆ ಮಾಡಿ ಅದರ ಫ‌ುಟ್‌ಮ್ಯಾಟ್‌ನಡಿ ಗಾಡಿ ಕೀ ಇಟ್ಟಿದ್ದಳು. ಇದಾದ ಬಳಿಕ ತನ್ನ ಗೆಳೆಯ ಧನಂಜಯ್‌ಗೆ ಕರೆ ಮಾಡಿ ತಾನು ಸ್ಕೂಟರ್‌ ನಿಲುಗಡೆ ಮಾಡಿರುವ ಪ್ರದೇಶದ ಲೊಕೇಷನ್‌ ಅನ್ನು ವಾಟ್ಸ್‌ಆ್ಯಪ್‌ನಲ್ಲಿ ಕಳುಹಿಸಿದ್ದಳು. ಇತ್ತ ಧನಂಜಯ್‌ ಮಹಿಳೆಯ ಸೂಚನೆ ಮೇರೆಗೆ ತನ್ನ ಸ್ನೇಹಿತ ರಾಕೇಶ್‌ ಜತೆ ಬಂದು ಸ್ಕೂಟರ್‌ ಚಲಾಯಿಸಿಕೊಂಡು ಹೋಗಿದ್ದ.

ಕಳ್ಳತನ ಮಾಡಿಸಿ ದೂರು ಕೊಟ್ಟ ಪತ್ನಿ: ಇತ್ತ ಪತಿಯ ಬಳಿ ಬಂದು ಸ್ಕೂಟರ್‌ ಕಳ್ಳತನವಾಗಿದೆ ಎಂದು ಗಾಬರಿಯಿಂದ ಹೇಳಿದ್ದಾಳೆ. ಇದಾದ ಬಳಿಕ ಮಲ್ಲೇಶ್ವರ ಠಾಣೆಗೆ ಬಂದ ಮಹಿಳೆ ತಾನು ಸ್ಕೂಟರ್‌ ನಿಲುಗಡೆ ಮಾಡಿ ವಾಕಿಂಗ್‌ ಮಾಡಲು ಹೋಗಿ ಬರುವಷ್ಟರಲ್ಲಿ ಸ್ಕೂಟರ್‌ ಕದ್ದಿದ್ದಾರೆ ಎಂದು ದೂರು ನೀಡಿದ್ದಳು. ಸ್ಕೂಟರ್‌ ಡಿಕ್ಕಿಯಲ್ಲಿ ಚಿನ್ನ ಇಟ್ಟಿರುವ ಬಗ್ಗೆಯೂ ಮಾಹಿತಿ ನೀಡಿದ್ದಳು. ಇತ್ತ ಕಾರ್ಯಾಚರಣೆಗೆ ಇಳಿದ ಪೊಲೀಸರು, ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಧನಂಜಯ್‌ ಹಾಗೂ ರಾಕೇಶ್‌ ಸ್ಕೂಟರ್‌ ಚಲಾಯಿಸಿಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂದಿತ್ತು. ಕೂಡಲೇ ತಾಂತ್ರಿಕ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ಠಾಣೆ ಕರೆ ತಂದಾಗ ಮಹಿಳೆಯ ಸೂಚನೆ ಮೇರೆಗೆ ಕಳ್ಳತನ ಮಾಡಿರುವುದಾಗಿ ನಡೆದ ಸಂಗತಿ ವಿವರಿಸಿದ್ದಾರೆ. ಆರೋಪಿಗಳ ಮೊಬೈಲ್‌ ಪರಿಶೀಲಿಸಿದಾಗ‌ ದೂರುದಾರ ಮಹಿಳೆಯ ಜತೆಗೆ ಆರೋಪಿಗಳು ಚಾಟಿಂಗ್‌ ಮಾಡಿರುವುದು, ಮಾತನಾಡಿರುವುದು ಪತ್ತೆಯಾಗಿದೆ.

ಪತಿ ಕೆಲಸಕ್ಕೆ ಹೋಗಬಹುದೆಂದು ಕೃತ್ಯ: 

ಪತಿ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇರುತ್ತಿದ್ದ. ಇದರಿಂದ ಪತ್ನಿ  ಆತಂಕಕ್ಕೀಡಾಗಿದ್ದಳು. ಪದೇ ಪದೆ ಕೆಲಸಕ್ಕೆ ತೆರಳುವಂತೆ ಒತ್ತಾಯ ಮಾಡಿದರೂ ಪತಿ ಮಾತ್ರ ಆಸಕ್ತಿ ತೋರಿಸುತ್ತಿರಲಿಲ್ಲ. ಇದರಿಂದ ನೊಂದು ಮಹಿಳೆ ಕೃತ್ಯ ಎಸಗಿದ್ದಾಳೆ. ಮನೆಯಲ್ಲಿದ್ದ ಮೌಲ್ಯಯುತ ವಸ್ತು ಕಳುವಾದ ಬಳಿಕ ಅರಿವಾಗಿ ಕೆಲಸಕ್ಕೆ ಹೋಗಬಹುದು ಎಂಬ ಭರವಸೆಯ ಲ್ಲಿದ್ದಳು. ಬೇರೆ ಯಾವುದೇ ದುರುದ್ದೇಶ ಇರಲಿಲ್ಲ ಎಂದು ತಿಳಿದು ಬಂದಿದೆ. ಇದೀಗ ಪೊಲೀಸರೂ ಧರ್ಮ ಸಂಕಟಕ್ಕೆ ಸಿಲುಕಿದ್ದು, ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.