CCB Police: ಶ್ರೀಲಂಕಾದ ಪಾತಕಿಗಳಿಗೆ ನೆರವು; ಇನ್ನಿಬ್ಬರ ಸೆರೆ
Team Udayavani, Aug 26, 2023, 11:39 AM IST
ಬೆಂಗಳೂರು: ಶ್ರೀಲಂಕಾ ಮೂಲದ ಆರೋಪಿಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತ್ತಿಬ್ಬರು ಸಿಸಿಬಿ ಬಲೆಗೆ ಬಿದ್ದಿದ್ದು, ಬಂಧಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಬಂಧಿತರಿಂದ 57 ಲಕ್ಷ ರೂ. ನಗದು ಹಾಗೂ 1.5 ಕೋಟಿ ಡಿಡಿ ಜಪ್ತಿ ಮಾಡಲಾಗಿದೆ.
ಚೆನ್ನೈ ಮೂಲದ ಮನ್ಸೂರ್, ಬೆಂಗಳೂರಿನ ವಿವೇಕ ನಗರದ ಅ ಅನ್ಬು ಅಳಗನ್ ಬಂಧಿತರು.
ಶ್ರೀಲಂಕಾ ಮೂಲದ ಬಂಧಿತ ಆರೋಪಿಗಳಿಗೆ ಬೆಂಗಳೂರಿನಲ್ಲಿ ನೆಲೆಸಲು ಅಗತ್ಯ ಖರ್ಚು ವೆಚ್ಚಕ್ಕಾಗಿ ಆರೋಪಿ ಮಾನ್ಸೂರ್ 57 ಲಕ್ಷ ರೂ. ಹೊಂದಿಸಿ ಆರೋಪಿಗಳಿಗೆ ತಲುಪಿಸಲು ಸಿದ್ಧತೆ ನಡೆಸಿದ್ದ. ದುಡ್ಡು ಕೈ ಸೇರುತ್ತಿದ್ದಂತೆ ಬೆಂಗಳೂರಿನಿಂದ ನೇಪಾಳದಲ್ಲಿರುವ ಸಂಜೀವ್ ಎಂಬಾತನ ಜತೆಗೆ ತೆರಳಲು ಆರೋಪಿಗಳು ತಯಾರಿ ನಡೆಸಿದ್ದರು. ಸಂಜೀವ್ ಜತೆಗೆ ಸಿಂಹಳೀಯ ಭಾಷೆಯಲ್ಲಿ ಆರೋಪಿಗಳು ನಡೆಸಿರುವ ಮೊಬೈಲ್ ಸಂಭಾಷಣೆ ತನಿಖೆ ವೇಳೆ ಪತ್ತೆಯಾಗಿದೆ.
ಒಮನ್ನಲ್ಲಿದ್ದ ಕಿಂಗ್ಪಿನ್ ಜಲಾಲ್ ಬೆಂಗಳೂರಿನಲ್ಲಿರುವ ಆರೋಪಿಗಳಿಗೆ 50 ಲಕ್ಷ ರೂ. ನೀಡುವಂತೆ ಮನ್ಸೂರ್ಗೆ ತಿಳಿಸಿದ್ದ. ಆರೋಪಿಗಳಿಗೆ ಸಮುದ್ರ ಮಾರ್ಗದ ಮೂಲಕ ಬೆಂಗಳೂರಿಗೆ ಬರಲು ನೆರವಾಗಿದ್ದ ಜಲಾಲ್ನ ಮಾರ್ಗದರ್ಶನದಂತೆ ಮನ್ಸೂರ್ ಕಾರ್ಯ ನಿರ್ವಹಿಸುತ್ತಿದ್ದ. ಅನ್ಬು ಬೆಂಗಳೂರಿನಲ್ಲಿ ಪಾಸ್ಪೋರ್ಟ್ ಸಿದ್ಧಪಡಿಸಿ ಆರೋಪಿಗಳಿಗೆ ಕೊಡುವ ಕಾರ್ಯದಲ್ಲಿ ತೊಡಗಿದ್ದ. ಅದಕ್ಕೆ ಬೇಕಾದ ದಾಖಲೆ ಸಿದ್ಧಪಡಿಸುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾನೆ. ಜಲಾಲ್ಗೂ ಈತನೇ ಪಾಸ್ಪೋರ್ಟ್ ವ್ಯವಸ್ಥೆ ಮಾಡಿಕೊಟ್ಟಿರುವ ಆರೋಪ ಕೇಳಿ ಬಂದಿದೆ. ಆರೋಪಿ ಮನ್ಸೂರ್ ಚೆನ್ನೈನಿಂದಲೇ ಅನುºಗೆ ಹಣಕಾಸಿನ ನೆರವು ನೀಡುತ್ತಿದ್ದ.
ಸಂಜೀವ್ ಎಲ್ ಟಿಟಿಇ ಸಂಘಟನೆಯಲ್ಲಿ ಸಕ್ರಿಯನಾಗಿದ್ದ. ಬಂಧಿತ ಶ್ರೀಲಂಕಾ ಆರೋಪಿಗಳು ಎಕೆ -47 ಬಳಸುವುದರ ಕುರಿತು ತರಬೇತಿ ಪಡೆದುಕೊಂಡಿದ್ದರು ಎಂದು ತಿಳಿದು ಬಂದಿದೆ. ಜಲಾಲ್ ಶ್ರೀಲಂಕಾದ ಕುಖ್ಯಾತ ಡ್ರಗ್ಸ್ ದಂಧೆಕೋರನಾಗಿ ಗುರುತಿಸಿಕೊಂಡಿದ್ದ. ಭಾರತದಲ್ಲಿ ಆತನಿಗೆ ಒಂದು ಪ್ರಕರಣದಲ್ಲಿ 10 ವರ್ಷಗಳ ಶಿಕ್ಷೆಯಾಗಿದೆ. ಭಾರತದಲ್ಲಿಯೂ ಆತ ವಾಂಟೆಡ್ ಪಟ್ಟಿಯಲಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್ ಬೇಕು
Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.