Fish: ಕೆರೆಗೆ ವಿಷ :ಮೀನುಗಳ ಮಾರಣಹೋಮ


Team Udayavani, Aug 26, 2023, 2:15 PM IST

tdy-9

ಕನಕಪುರ: ವೈಯಕ್ತಿಕ ದ್ವೇಷಕ್ಕೆ ಕಿಡಿಗೇಡಿಗಳಿಂದ ಕೆರೆಗೆ ವಿಷಪ್ರಾಸನ ಮಾಡಿದ ಪರಿಣಾಮ ಕೆರೆಯಲ್ಲಿದ್ದ ಮೀನುಗಳು ಸಾವಿಗೀಡಾಗಿರುವ ಘಟನೆ ವಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಸಾತನೂರು ಹೋಬಳಿಯ ಚೂಡಹಳ್ಳಿ ಗ್ರಾಪಂ ವ್ಯಾಪ್ತಿಯ ವೀರುಪಸಂದ್ರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೀನು ಸಾಕಾಣಿಕೆ ಮಾಡಿದ್ದ ರೈತನಿಗೆ ಲಕ್ಷಾಂತರ ರೂ. ನಷ್ಟವಾಗಿದೆ ವಡೇರಹಳ್ಳಿ ಗ್ರಾಮದ ವೆಂಕಟೇಶ್‌ ಚೂಡಹಳ್ಳಿ ಗ್ರಾಪಂನಲ್ಲಿ ಹರಾಜು ಮೂಲಕ ವೀರುಪಸಂದ್ರ ಗ್ರಾಮದ ಕೆರೆಗೆ 40 ಸಾವಿರ ಹಣ ಕಟ್ಟಿ ಮೀನು ಪಾಲನೆಗೆ ಹಕ್ಕನ್ನು ಪಡೆದಿದ್ದರು ಒಂದು ವರ್ಷದ ಹಿಂದೆ 80 ಸಾವಿರ ಮೀನಿನ ಮರಿಗಳನ್ನು ಬಿಟ್ಟಿದ್ದರು. ಅವು ಒಂದು ಕೆ.ಜಿ. ತೂಗುವಷ್ಟು ಬೆಳೆದಿದುÌ ಇನ್ನು ಒಂದೆರಡು ತಿಂಗಳಲ್ಲಿ ಒಂದು ಕೆ.ಜಿ.ಗೂ ಮೇಲ್ಪಟ್ಟು ಬೆಳೆದಿದ್ದ ಮೀನನ್ನು ಮಾರಾಟ ಮಾಡುವ ನಿರೀಕ್ಷೆಯಲ್ಲಿ ರೈತ ವೆಂಕಟೇಶ್‌ ಇದ್ದರು. ಆದರೆ, ಕಿಡಿಗೇಡಿಗಳು ಕೃತ್ಯದಿಂದ ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಗುರುವಾರ ರಾತ್ರಿ ಯಾರೋ ಕಿಡಿಗೇಡಿಗಳು ಕೆರೆಗೆ ವಿಷ ಹಾಕಿದ್ದಾರೆ. ಇದರಿಂದ ಕೆರೆಯಲ್ಲಿ ಸುಮಾರು ಒಂದು ಕೆ.ಜಿ. ತೂಗುವಷ್ಟು ಬೆಳೆದಿದ್ದ ಹಾಗೂ ಸಣ್ಣ ಮೀನುಗಳು ಸಾವಿಗಿಡಾಗಿದೆ. ಶುಕ್ರವಾರ ಬೆಳಗ್ಗೆ ಮೃತಪಟ್ಟ ಮೀನುಗಳು ನೀರಿನ ಮೇಲಾºಗದಲ್ಲಿ ತೆಲಾಡುತ್ತಿದ್ದದ್ದನ್ನು ನೋಡಿದ ರೈತ ವೆಂಕಟೇಶ್‌ ಸಾತನೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವಿಷವಾದ ಕೆರೆಯ ನೀರು: ಶುದ್ಧಿಗೊಳಿಸಲು ಆಗ್ರಹ: ಕಿಡಿಗೇಡಿಗಳ ಕೃತ್ಯದಿಂದ ಮೀನುಗಳ ಮಾರಣ ಹೋಮದ ಜತೆಗೆ ಕೆರೆ ನೀರು ವಿಷವಾಗಿ ಪರಿವರ್ತನೆಯಾಗಿದೆ. ಇದು ಗ್ರಾಮಸ್ಥರ ಆತಂಕಕ್ಕೂ ಕಾರಣವಾಗಿದೆ. ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಕೃಷಿಕರು, ರೈತರು ಜಾನುವಾರುಗಳನ್ನು ಈ ಕೆರೆಯನ್ನೇ ಕುಡಿವ ನೀರಿಗೆ ಆಶ್ರಯಿಸಿದ್ದರು. ಈ ಕೆರೆಯ ನೀರನ್ನು ಕುಡಿದರೆ ಪ್ರಾಣಕ್ಕೆ ಆಪತ್ತು ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನೀರಿನಲ್ಲಿ ಮೃತಪಟ್ಟಿರುವ ಸಾವಿರಾರು ಮೀನುಗಳು ನೀರಿನಲ್ಲಿ ಕೊಳೆತು ಕೆರೆಯ ನೀರು ಮತ್ತಷ್ಟು ವಿಷವಾಗುವ ಸಾಧ್ಯತೆ ಇದೆ ಹಾಗಾಗಿ ಸ್ಥಳೀಯ ಗ್ರಾಪಂ ಅಧಿಕಾರಿಗಳು ಅಥವಾ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ನೀರಿನಲ್ಲಿ ಮೃತಪಟ್ಟಿರುವ ಕೆರೆಯ ಮೀನುಗಳನ್ನು ಹೊರ ತೆಗೆದು ವಿಲೇವಾರಿ ಮಾಡುವಂತೆ ಸ್ಥಳೀಯರು ಅಗ್ರಹಿಸಿದ್ದಾರೆ.

ವಿಕೃತ ಮನಸ್ಥಿತಿಯ ಕೃತ್ಯ: ವೈಯಕ್ತಿಕ ದ್ವೇಷದಿಂದ ಯಾರೋ ಕಿಡಿಗೇಡಿ ಗಳು ಬಾಳೆ ಅಥವಾ ಕೃಷಿ ಬೆಳೆಗಳಿಗೆ ಸಿಂಪಡಿ ಸುವ ಕ್ರಿಮಿನಾಶಕವನ್ನು ಕೆರೆಗೆ ಹಾಕಿದ್ದಾರೆ. ಇದರಿಂದ ಮೀನುಗಳು ಮೃತಪಟ್ಟಿವೆ. ಏನೇ ವೈಯಕ್ತಿಕ ದ್ವೇಷಗಳಿದ್ದರೂ ಈ ರೀತಿ ಕೃತ್ಯವೆಸ ಗಬಾರದು. ಇದು ವಿಕೃತ ಮನಸ್ಥಿತಿ. ತಪ್ಪಿತ ಸ್ಥರು ಯಾರೇ ಆಗಿದ್ದರೂ ಅವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಈ ಘಟನೆಯಿಂದ ಸಾಕಷ್ಟು ನಷ್ಟವಾಗಿದೆ ಮೀನು ಗಾರಿಕೆ ಇಲಾಖೆ ಅಥವಾ ಗ್ರಾಪಂ ಅಧಿಕಾರಿ ಗಳು ಆಗಿರುವ ನಷ್ಟಕ್ಕೆ ಪರಿಹಾರ ಕೊಡುವ ಕೆಲಸ ಮಾಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.

ಟಾಪ್ ನ್ಯೂಸ್

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ನೀರಿಲ್ಲದೇ ಜಿಲ್ಲೆಯ ಕೆರೆಗಳು ಖಾಲಿ ಖಾಲಿ!

Ramanagar: ನೀರಿಲ್ಲದೇ ಜಿಲ್ಲೆಯ ಕೆರೆಗಳು ಖಾಲಿ ಖಾಲಿ!

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.