ಕೋವಿಡ್‌ ಹಗರಣ ತನಿಖೆಗೆ ವಿಚಾರಣಾ ಆಯೋಗ ರಚನೆ

ಆಯೋಗಕ್ಕೆ ನ್ಯಾ| ಜಾನ್‌ ಮೈಕಲ್‌ ಕುನ್ಹಾ ನೇತೃತ್ವ

Team Udayavani, Aug 27, 2023, 7:15 AM IST

ಕೋವಿಡ್‌ ಹಗರಣ ತನಿಖೆಗೆ ವಿಚಾರಣಾ ಆಯೋಗ ರಚನೆ

ಬೆಂಗಳೂರು: ಕೋವಿಡ್‌ ಪಿಡುಗಿನ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಲ್ಲಿ ನಡೆದ ಅಕ್ರಮ ಆರೋಪಗಳ ತನಿಖೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕಲ್‌ ಡಿ’ಕುನ್ಹಾ ನೇತೃತ್ವದಲ್ಲಿ ವಿಚಾರಣ ಆಯೋಗ ರಚಿಸಿ ರಾಜ್ಯ ಸರಕಾರ ಶನಿವಾರ ಆದೇಶ ಪ್ರಕಟಿಸಿದೆ.

ನ್ಯಾ| ಡಿ’ಕುನ್ಹಾ ಅವರು ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ವಿಚಾರಣೆ ನಡೆಸಿ ಅವರಿಗೆ ಶಿಕ್ಷೆ ನೀಡಿದ ದಿಟ್ಟ ನ್ಯಾಯಾಧೀಶ ಎಂದೇ ಖ್ಯಾತರಾದವರು.

ಸಾರ್ವಜನಿಕ ಲೆಕ್ಕಪತ್ರ ಸಮಿತಿ ವರದಿಯಲ್ಲಿ ವ್ಯಕ್ತವಾದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಈ ನಿರ್ಧಾರ ತೆಗೆದುಕೊಂಡಿದೆ. ಕಮಿಷನ್‌ ಆಫ್ ಎನ್‌ಕ್ವಯರಿ ಆ್ಯಕ್ಟ್ ಅನ್ವಯ ವಿಚಾರಣ ಆಯೋಗ ರಚಿಸಲಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಾಜಿ ಸಚಿವ ಡಾ| ಸುಧಾಕರ್‌ ಅವರನ್ನು ಈ ಮೂಲಕ ಕಾಂಗ್ರೆಸ್‌ ಸರಕಾರ ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿದೆ.

ತನಿಖಾ ಆಯೋಗ ಕಾಯ್ದೆ ಮಾತ್ರವಲ್ಲ, ದಂಡ ಪ್ರಕ್ರಿಯಾ ನಿಯಮಗಳ ಅಡಿಯಲ್ಲೂ ತನಿಖೆಗೆ ಅವಕಾಶ ನೀಡಲಾಗಿದ್ದು, ಮೂರು ತಿಂಗಳೊಳಗಾಗಿ ವಿಚಾರಣೆ ಪೂರ್ಣಗೊಳಿಸಲು ಸರಕಾರ ಅಪೇಕ್ಷಿಸಿದೆ. ಆಯೋಗಕ್ಕೆ ದಾಖಲೆಯನ್ನು ಒದಗಿಸಲು, ವೈದ್ಯರು, ತಾಂತ್ರಿಕ, ಆರ್ಥಿಕ ಹಾಗೂ ಆಡಳಿತಾತ್ಮಕ ಸಲಹೆಗಾರರನ್ನು ಒದಗಿಸಲು ಸಂಬಂಧಪಟ್ಟ ಇಲಾಖೆ ಸಹಕರಿಸಬೇಕು ಎಂದು ಆದೇಶದಲ್ಲಿ ಸೂಚನೆ ನೀಡಲಾಗಿದೆ.

ಅಧಿಕಾರಿಗಳು ಆಯೋಗವು ಅಪೇಕ್ಷಿಸಿದ ಎಲ್ಲ ಕಡತಗಳು, ದಾಖಲೆ ಒದಗಿಸುವ ಜತೆಗೆ ಅಗತ್ಯ ಬಿದ್ದರೆ ಸ್ಥಳ ಮಹಜರು ನಡೆಸಲು ಸಹಕರಿಸಬೇಕು. ಆಯೋಗಕ್ಕೆ ಅಗತ್ಯವಿರುವ ಸಿಬಂದಿ, ಸಾಮಗ್ರಿ, ವಾಹನ, ಸಂಬಳ ವ್ಯವಸ್ಥೆಯನ್ನು ಕಲ್ಪಿಸುವ ಜತೆಗೆ ಆಯೋಗದ ಅಧ್ಯಕ್ಷರು ಅಪೇಕ್ಷೆಪಟ್ಟರೆ 3ನೇ ಸ್ವತಂತ್ರ ಸಂಸ್ಥೆಯ ಮೂಲಕ ಗುಣಮಟ್ಟ ಪರಿಶೀಲನೆಗೂ ಅವಕಾಶ ನೀಡಬಹುದಾಗಿದೆ. ಆಯೋಗಕ್ಕೆ ಬೆಂಗಳೂರು ಕೇಂದ್ರದಲ್ಲಿ ಕಚೇರಿ ಹಾಗೂ ಇನ್ನಿತರ ಸೌಲಭ್ಯ ಕಲ್ಪಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒಳಾಡಳಿತ ಇಲಾಖೆಯಿಂದ ನಿರ್ದೇಶನ ನೀಡಲಾಗಿದೆ.

ಅದೇ ರೀತಿ 40 ಪರ್ಸೆಂಟ್‌ ಕಮಿಷನ್‌ ಆರೋಪದ ವಿರುದ್ಧ ನ್ಯಾ| ನಾಗಮೋಹನ್‌ ದಾಸ್‌ ನೇತೃತ್ವದಲ್ಲಿ ರಚಿಸಿರುವ ತನಿಖಾ ಆಯೋಗಕ್ಕೆ ಸೂಕ್ತ ವ್ಯವಸ್ಥೆ, ಕಚೇರಿ ಸೌಲಭ್ಯ ಕಲ್ಪಿಸುವಂತೆ ಲೋಕೋಪಯೋಗಿ ಇಲಾಖೆಗೆ ಸರಕಾರ ನಿರ್ದೇಶನ ನೀಡಿದೆ.

ಟಾಪ್ ನ್ಯೂಸ್

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.