![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 27, 2023, 12:36 AM IST
ಉಡುಪಿ: ಜಿಲ್ಲಾಸ್ಪತ್ರೆಯ ಕಾರಿಡಾರ್ನಲ್ಲಿ ಗಲಾಟೆ ಮಾಡುತ್ತಿದ್ದ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ನಗರ ಠಾಣೆಯ ಎಎಸ್ಐ ತಾರಾನಾಥ ಅವರು ಹೊಯ್ಸಳ ವಾಹನದಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಬಂದ ಮಾಹಿತಿಯಂತೆ ಸಿಬಂದಿಯೊಂದಿಗೆ ಜಿಲ್ಲಾಸ್ಪತ್ರೆಗೆ ಹೋಗಿ ಪರಿಶೀಲಿಸಿದಾಗ ಆಸ್ಪತ್ರೆಯ ಪುರುಷರ ಸರ್ಜಿಕಲ್ ವಾರ್ಡ್ನ ಹತ್ತಿರದ ಕಾರಿಡಾರ್ನಲ್ಲಿ ಆರೋಪಿಗಳಾದ ಮಲ್ಲಾರಿನ ಮಹಮ್ಮದ್ ಅಬ್ದುಲ್ ಅಜೀಜ್ (29), ಮಹಮ್ಮದ್ ನಾಜೀಮ್ (36), ಇಮ್ತಿಯಾಜ್(40) ಅವರು ತಮ್ಮೊಳಗೆ ಪರಸ್ಪರ ಜಗಳ ಮಾಡಿಕೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗಳಿಗೆ ಭಯದ ವಾತಾವರಣ ಉಂಟುಮಾಡುತ್ತಿದ್ದರು.
ಈ ವೇಳೆ ಅಬ್ದುಲ್ ಅಜೀಜ್ನನ್ನು ಪೊಲೀಸರು ವಶಕ್ಕೆ ಪಡೆದರು. ಆಗ ಇಮ್ತಿಯಾಜ್ ಅಲ್ಲಿಂದ ತಪ್ಪಿಸಿಕೊಂಡಿದ್ದು, ಮತ್ತೋರ್ವ ಆರೋಪಿ ಮಹಮ್ಮದ್ ನಾಜೀಮ್ನನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಠಾಣೆಗೆ ಹಾಜರಾಗುವಂತೆ ಪೊಲೀಸರು ತಿಳಿಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.