Covid: ಕೋವಿಡ್‌ ಅಕ್ರಮಕ್ಕೆ ತಾರ್ಕಿಕ ಅಂತ್ಯ: ಗುಂಡೂರಾವ್‌

ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ

Team Udayavani, Aug 27, 2023, 11:33 PM IST

dinesh gunduroa

ಗದಗ: ಕೋವಿಡ್‌ ಸಂದರ್ಭ ನಡೆದ ಅಕ್ರಮವನ್ನು ತಾರ್ಕಿಕ ಅಂತ್ಯಗೊಳಿಸಲು ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಸರಕಾರ ಆದೇಶ ಮಾಡಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆಗೆ ಆದೇಶ ಮಾಡದಿದ್ದರೆ ಸುಮ್ಮನೆ ಆರೋಪ ಮಾಡಿದರು ಅಂತ ಬಿಜೆಪಿಯವರು ದೂರುತ್ತಾರೆ. ತನಿಖೆ ಮಾಡಿಸಿದರೆ, ಇದು ದ್ವೇಷದ ರಾಜಕಾರಣ ಎನ್ನುತ್ತಾರೆ. ನಾವು ವಿಪಕ್ಷದಲ್ಲಿದ್ದಾಗ ಸ್ಪಷ್ಟವಾಗಿ ಆರೋಪ ಮಾಡಿದ್ದೆವು. ಬೇರೆ ಬೇರೆ ದೂರು, ಮಾಹಿತಿಯಾಧಾರದ ಮೇಲೆ ಪಾರದರ್ಶಕವಾಗಿ ನಿಷ್ಪಕ್ಷಪಾತ ತನಿಖೆ ಮಾಡುತ್ತಿದ್ದೇವೆ ಎಂದರು.

ತನಿಖೆಗೆ ಬಿಜೆಪಿಯವರಿಗೆ ಭಯ ಯಾಕೆ, ಅದನ್ನು ಸ್ವೀಕಾರ ಮಾಡಬೇಕು. ಯಾರು ತಪ್ಪು ಮಾಡಿದ್ದಾರೋ ಅವರ ಮೇಲೆ ಕ್ರಮ ಆಗಬೇಕು ಅಲ್ವಾ? ಎಂದರು. ಆಡಳಿತಕ್ಕೆ ಬಂದ ಮೇಲೆ ಏನೂ ಮಾಡೋದಿಲ್ಲ ಅನ್ನೋದು ಸರಿಯಲ್ಲ. ನಾವು ಹೇಳಿದ್ದನ್ನೇ ಮಾಡಬೇಕು, ಮಾಡುತ್ತಿದ್ದೇವೆ. ಕೋವಿಡ್‌ ಅಕ್ರಮ ತನಿಖೆಯೊಂದೇ ಅಲ್ಲ, ಶೇ. 40 ಕಮಿಷನ್‌ ವಿಚಾರ, ಬಿಬಿಎಂಪಿಯಲ್ಲಿ ಆಗಿರುವ ಅವ್ಯವಹಾರ ಬಗ್ಗೆಯೂ ತನಿಖೆ ಮಾಡಲಾಗುತ್ತಿದೆ ಎಂದರು.

ತಿರುಗಿಯೂ ನೋಡದ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರ ಇಸ್ರೋ ಭೇಟಿ ವೇಳೆ ರಸ್ತೆ ಬದಿ ನಿಂತಿದ್ದ ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯವಾಡಿದ ಸಚಿವ ದಿನೇಶ್‌, ಮೋದಿ ಅವರು ನೋಡಲಿ ಅಂತಾ ಬಿಜೆಪಿ ರಾಜ್ಯಾಧ್ಯಕ್ಷರು ಬೀದಿಯಲ್ಲಿ ನಿಂತಿದ್ದರು. ಆದರೆ ಮೋದಿ ಅವರನ್ನು ತಿರುಗಿಯೂ ನೋಡಲಿಲ್ಲ. ಬಿಜೆಪಿ ರಾಜ್ಯ ಮುಖಂಡರನ್ನು ನೋಡೋಕೆ ಅವರಿಗೆ ಅಸಡ್ಡೆ ಎಂದರು.
ಚುನಾವಣೆ ಪ್ರಚಾರಕ್ಕೆ ಮೋದಿಯವರನ್ನು ಕರೆಯಿಸಿ ಬೀದಿ ಬೀದಿ ಓಡಾಡಿಸಿ ಅವರ ಮಾನ, ಮರ್ಯಾದೆ ತೆಗೆದರು. ಅವರ ಹೆಸರಿನಲ್ಲಿ ವೋಟ್‌ ಕೇಳಿದರು. ಆದರೆ ಬಂದಿದ್ದು 60 ಸೀಟ್‌ ಮಾತ್ರ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಅವರು ವ್ಯಂಗ್ಯ ವಾ ಡಿದರು.

ಹಗರಣದ ತನಿಖೆ ಖಚಿತ: ಜಾರಕಿಹೊಳಿ
ಬೆಳಗಾವಿ: ಈ ಹಿಂದಿನ ಬಿಜೆಪಿ ಸರಕಾರದ ಅವ ಧಿಯ ಕೋವಿಡ್‌ ಹಾಗೂ 40 ಪರ್ಸೆಂಟ್‌ ಕಮಿಷನ್‌ ಹಗರಣವನ್ನು ತನಿಖೆಗೆ ಒಳಪಡಿಸುವುದು ಸೂಕ್ತ. ಇದರಲ್ಲಿ ಸಂಬಂ ಧಿಸಿದ ಸಚಿವರು ಹಾಗೂ ಅ ಧಿಕಾರಿಗಳು ಭಾಗಿಯಾಗಿದ್ದಾರೆ. ತನಿಖೆ ಆಗುವುದಂತೂ ಖಚಿತ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 40 ಪರ್ಸೆಂಟ್‌ ಕಮಿಷನ್‌, ಕೊರೊನಾ ವೇಳೆ ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ, ನೀರಾವರಿ ಕಾಮಗಾರಿಗಳಲ್ಲಿ ಹಗರಣದ ಬಗ್ಗೆ ನಾವೇ ಆಗ ಆರೋಪ ಮಾಡಿದ್ದೇವೆ. ಈಗ ನಮ್ಮ ಸರಕಾರ ಬಂದಿರುವುದರಿಂದ ತನಿಖೆ ನಡೆಸಲಾಗುವುದು. ಇದರ ಬಗ್ಗೆ ಸೂಕ್ತ ತನಿಖೆ ನಡೆಸಿದಾಗ ಎಲ್ಲವೂ ಬಹಿರಂಗವಾಗಲಿದೆ ಎಂದರು. ಬಿಜೆಪಿ ಆಡಳಿತದಲ್ಲಿಯ ಆರೋಗ್ಯ ಸಚಿವರು ಕಾಂಗ್ರೆಸ್‌ ಸೇರ್ಪಡೆ ಆಗುತ್ತಾರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸತೀ ಶ, ಈಗ ಅವರು ಬರುವುದು, ಬಿಡುವುದು ಎರಡನೇ ಮಾತು. ಆದರೆ ಕೋವಿಡ್‌ ಹಗರಣ ಕುರಿತು ಸಂಪೂರ್ಣ ಪರಿಶೀಲನೆ ನಡೆಸಲಾಗುವುದು. ಈಗ ಅವರು ಮಾಜಿಯಾಗಿದ್ದಾರೆ. ಅವರಿಗೆ ಏನೂ ಕೆಲಸವಿಲ್ಲ. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿ ಕಾರ ಇದೆ. ಕೋವಿಡ್‌ ಹಗರಣ ಕುರಿತು ಸಂಪೂರ್ಣ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

20

J. B. Shruti Sagar: ಏಕಾಗ್ರತೆಗೆ ಭಂಗ ತರುವ ಏನನ್ನೂ  ಬಳಸಿದರೂ ಸಾಧನೆಗೆ ತೊಡಕೇ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.