Mangaluru 27ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Team Udayavani, Aug 28, 2023, 5:33 PM IST
ಮಂಗಳೂರು: ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 27 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೇರಳ ಕಲ್ಲಿಕೋಟೆ ಪಾರೋಪಡಿ ಚೇವಾಯೂರು ನಿವಾಸಿ ಪಿ. ಮನೋಜ್ (52) ಎಂಬುವನನ್ನು ಉರ್ವಠಾಣೆ ಪೊಲೀಸರು ಕಲ್ಲಿಕೋಟೆಯಲ್ಲಿ ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಕರಣದ ವಿವರ: 1996ರ ಡಿಸೆಂಬರ್ 24ರ ರಾತ್ರಿ ದೇರೆಬೈಲ್ ನಿವಾಸಿ ವಿನ್ಸೆಂಟ್ ಪಿರೇರಾ ಎನ್ನುವವರಿಗೆ ಸೇರಿದ ಆಮ್ನಿ ಕಾರನ್ನು ಅದರ ಚಾಲಕ ದಾಮೋದರ್ ಎನ್ನುವವರು ತಮ್ಮ ಕೊಟ್ಟಾರದ ಮನೆಯ ಪಕ್ಕದ ರಸ್ತೆಯಲ್ಲಿ ಪಾರ್ಕ್ ಮಾಡಿದ್ದರು. 25ರಂದು ಬೆಳಗ್ಗೆ 5 ಗಂಟೆಎ ಕಾರು ಪಾರ್ಕ್ ಮಾಡಿದ ಸ್ಥಳದಲ್ಲಿ ಇರದೆ ಕಳ್ಳತನವಾಗಿತ್ತು. ಈ ಬಗ್ಗೆ ಉರ್ವ ಠಾಣೆಗೆ ದೂರು ನೀಡಲಾಗಿತ್ತು. ತನಿಖೆ ವೇಳೆ ಕಾರನ್ನು ಮನೋಜ್ ಎಂಬಾತ ಕಳವು ಮಾಡಿರುದಾಗಿ ತಿಳಿದು ಬಂದಿದ್ದು, ಆರೋಪಿ ತಲೆಮರೆಸಿಕೊಂಡಿದ್ದ. ಇದೀಗ 27 ವರ್ಷಗಳ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ.
ಪೊಲೀಸ್ ಆಯುಕ್ತ ಕುಲಪದೀಪ್ ಕುಮಾರ್ ಜೈನ್ ಅವರ ಆದೇಶದಂತೆ ಉಪ ಆಯುಕ್ತರ ಸೂಚನೆಯಂತೆ ಕೇಂದ್ರ ವಿಭಾಗದ ಎಸಿಪಿ ಮಹೇಶ್ ಕುಮಾರ್ ನೇತೃತ್ವದಲ್ಲಿ ಉರ್ವ ಠಾಣೆ ಪೊಲೀಸ್ ನಿರೀಕ್ಷಕರಾದ ಭಾರತಿ ಮತ್ತು ಪಿಎಸ್ಐ ಹರೀಶ್, ಎಎಸ್ಐ ವಿನಯ್ ಕುಮಾರ್, ಉಲ್ಲಾಸ್ ಮೊಹಾಲೆ, ಸಿಬಂದಿಯವರಾದ ಪ್ರಜ್ವಲ್, ಸಫ್ರೀನಾ ಆವರು ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.