Uppinangady ವಲಯ ಅರಣ್ಯ ವ್ಯಾಪ್ತಿಯ ಶಿರಾಡಿ; ರಕ್ಷಿತಾರಣ್ಯದಲ್ಲಿ ಮರಗಳ ಮಾರಣ ಹೋಮ


Team Udayavani, Aug 29, 2023, 10:00 AM IST

8-uppinangady

ಉಪ್ಪಿನಂಗಡಿ: ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಉಪ್ಪಿನಂಗಡಿ ಅರಣ್ಯವಲಯ ವ್ಯಾಪ್ತಿಯಲ್ಲಿ ಬರುವ ಶಿರಾಡಿ, ಶಿಬಾಜೆ ಮೊದಲಾದ ಪ್ರದೇಶಗಳ ಅರಣ್ಯ ಸಂಪತ್ತು ಕಳ್ಳರ ಪಾಲಾಗುತ್ತಿದ್ದು, ಉತ್ತಮ ಜಾತಿಯ ಬೃಹತ್‌ ಮರಗಳ ಮಾರಣ ಹೋಮ ನಡೆಯುತ್ತಿದೆ.

ಶಿಬಾಜೆ ವಿಭಾಗದ ನೀರಾನದಿಂದ ಕುರುಂಬು, ಅರಂಪಾದೆ ಭೂತಮಜಲಿನಿಂದ ಮೇಲಿನ ಕುರುಂಜ ತನಕ, ಪೆರ್ಲದ ಕಲ್ಲಾಜೆಯಿಂದ ಕೊಳಕೆ ಬೈಲು ತನಕ ನಿರಂತರವಾಗಿ ಬಣು³, ಬೇಂಗ, ಹೆಬ್ಬಲಸು ಮೊದಲಾದ ಬೃಹತ್‌ ಮರಗಳನ್ನು ರಾತ್ರಿ ಬೆಳಗಾಗುವುದರ ಒಳಗೆ ಕಡಿದುರುಳಿಸಿ ದಿಮ್ಮಿಗಳನ್ನಾಗಿಸಿ ಸಾಗಿಸುತ್ತಿರುವ ಬಗ್ಗೆ ಸ್ಥಳೀಯರು ದೂರುತ್ತಿದ್ದಾರೆ.

ರಾತ್ರಿ ವೇಳೆ ಟೆಂಪೋ ಮತ್ತು ಮರ ಕೊಯ್ಯುವ ಯಂತ್ರದೊಂದಿಗೆ ಬರುವ ಮರಗಳ್ಳರು ಮರವನ್ನು ಬುಡದಿಂದಲೇ ಉರುಳಿಸಿ ಅಲ್ಲಿಯೇ ತುಂಡುಗಳನ್ನಾಗಿಸಿ ಟೆಂಪೋದಲ್ಲಿ ಸಾಗಿಸುತ್ತಾರೆ. ರಾತ್ರಿ ಬೆಳಗಾಗುವುದರ ಒಳಗಾಗಿ ಕಾಡಿನೊಳಗಿದ್ದ ಮರ ಮಾಯವಾಗಿರುತ್ತದೆ. ರೆಂಬೆ ಕೊಂಬೆಗಳನ್ನು ಅಲ್ಲೇ ಬಿಟ್ಟು ಹೋಗಿ 4 ದಿನಗಳ ಬಳಿಕ ಕಟ್ಟಿಗೆಯಾಗಿ ಮಾಡಿ ಸಾಗಿಸಲಾಗುತ್ತದೆ. ಬಳಿಕ ಬುಡಕ್ಕೆ ಪೆಟ್ರೋಲ್‌ ಸುರಿದು ಸುಟ್ಟು ಹಾಕಿ ಕುರುಹು ನಾಶ ಮಾಡಲಾಗುತ್ತದೆ.

ನೀರಾನದಿಂದ ಕುರುಂಬು, ಅರಂಪಾದೆ ಭೂತಮಜಲಿನಿಂದ ಮೇಲಿನ ಕುರುಂಜ ತನಕ, ಪೆರ್ಲದ ಕಲ್ಲಾಜೆಯಿಂದ ಕೊಳಕೆ ಬೈಲು ತನಕ 5 ಕಿ.ಮೀ. ವ್ಯಾಪ್ತಿಯ ಅರಣ್ಯದ ಒಳಗಡೆ ಮರಗಳ ಲೂಟಿ ಆಗಿದ್ದು, ಈ ಪ್ರದೇಶ ಬಯಲಿನಂತಾಗಿದೆ. ಸದ್ಯ ರಸ್ತೆ ಬದಿಯ ಅರಣ್ಯದಲ್ಲಿ ಮಾತ್ರ ಕೆಲವು ಮರಗಳು ಕಾಣಿಸುತ್ತವೆ.

ಅರಣ್ಯ ಅಧಿಕಾರಿಯ ಮನೆಯೆದುರಿನ 2 ಮರಗಳೇ ಮಾಯ!

ನೀರಾನ ಮತ್ತು ಕುರುಂಬು ಮಧ್ಯೆ ಮುಖ್ಯ ರಸ್ತೆಗೆ ಕಾಣುವಂತೆ ಮತ್ತು ಅರಣ್ಯ ಇಲಾಖೆಯ ಅಧಿಕಾರಿಯೋರ್ವರ ಮನೆಯಿಂದ ಕೂಗಳತೆ ದೂರದಲ್ಲಿದ್ದ ಬೃಹತ್‌ ಗಾತ್ರದ 2 ಬೇಂಗದ ಮರಗಳನ್ನು ವಾರದ ಹಿಂದೆ ಕಡಿದು ಸಾಗಿಸಲಾಗಿದೆ.

ಅರಣ್ಯ ಸಿಬಂದಿಯ ಮನೆಯ ಬಳಿಯಿಂದಲೇ ಮರಗಳನ್ನು ಕಡಿದು ಸಾಗಿಸಿದ್ದಾರೆ. ವನಪಾಲಕರು, ಅರಣ್ಯ ಅಧಿಕಾರಿಗಳು ಮರಗಳ್ಳರ ಜತೆ ಕೈಜೋಡಿಸಿದ್ದಾರೋ ಎಂಬ ಸಂಶಯ ಬರುವಂತೆ ಮಾಡಿದ ಈ ಪ್ರಕರಣ. ಇನ್ನಾದರೂ ಹಿರಿಯ ಅಧಿಕಾರಿಗಳು ಕೂಡಲೇ ಸಮಗ್ರ ತನಿಖೆ ನಡೆಸಿ ಕಾಡಿನ ಲೂಟಿಯನ್ನು ತಡೆಯಬೇಕಾಗಿದೆ. ವನಮಹೋತ್ಸವ ಆಚರಣೆಯ ಜತೆಗೆ ಇರುವ ಅರಣ್ಯ ಸಂಪತ್ತಿನ ಸಂರಕ್ಷಣೆಯು ಈಗಿನ ತುರ್ತು ಅಗತ್ಯವಾಗಿದೆ. – ಕುರಿಯಕೋಸ್‌, ಗ್ರಾಮಸ್ಥ

ಟಾಪ್ ನ್ಯೂಸ್

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.