Shivarajkumar: ಕೇರಳ ಸ್ಟೋರಿ ನಿರ್ದೇಶಕರ ಜೊತೆ ಶಿವಣ್ಣ ಸಿನಿಮಾ?; ಭೇಟಿ ಫೋಟೋ ವೈರಲ್


Team Udayavani, Aug 29, 2023, 6:13 PM IST

tdy-3

ಬೆಂಗಳೂರು: ʼದಿ ಕೇರಳ ಸ್ಟೋರಿʼ ಸಿನಿಮಾದ ಮೂಲಕ ಸುದ್ದಿಯಾದ ನಿರ್ದೇಶಕ ಸುದೀಪ್ತೋ ಸೇನ್ ಕನ್ನಡದ ಹ್ಯಾಟ್ರಿಕ್‌ ಹೀರೋ ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿರುವುದು ಸದ್ದು ಮಾಡಿದೆ.

ʼಜೈಲರ್‌ʼ ಸಿನಿಮಾದ ಬಳಿಕ ಶಿವರಾಜ್‌ ಕುಮಾರ್‌ ಅವರಿಗೆ ಅನ್ಯಭಾಷೆಯ ಸಿನಿಮಾರಂಗದಿಂದ ಆಫರ್‌ ಗಳು ಬರುತ್ತಿವೆ. ʼಜೈಲರ್‌ʼ ನಲ್ಲಿನ ಅವರ ಅತಿಥಿ ಪಾತ್ರಕ್ಕೆ ಫ್ಯಾನ್ಸ್‌ ಗಳು ಫಿದಾ ಆಗಿದ್ದಾರೆ. ಇದು ಮಾತ್ರವಲ್ಲದೆ ತಮಿಳಿನ  ಧನುಷ್‌ ಅವರ ʼಕ್ಯಾಪ್ಟನ್‌ ಮಿಲ್ಲರ್‌ʼ ನಲ್ಲೂ ಶಿವಣ್ಣ ಕಾಣಿಸಿಕೊಳ್ಳಲಿದ್ದಾರೆ.

ʼದಿ ಕೇರಳ ಸ್ಟೋರಿʼ ಸಿನಿಮಾ ಒಂದಷ್ಟು ವಿವಾದಕ್ಕೆ ಗುರಿಯಾಗಿತ್ತು. ವಿವಾದಕ್ಕೆ ಒಳಗಾದರೂ ಬಾಕ್ಸ್‌ ಆಫೀಸ್‌ ನಲ್ಲಿ ಒಳ್ಳೆಯ ಕಮಾಯಿ ಮಾಡಿತ್ತು. ʼದಿ ಕೇರಳ ಸ್ಟೋರಿʼ ಬಳಿಕ ನಿರ್ದೇಶಕ ಸುದೀಪ್ತೋ ಸೇನ್ ʼಬಸ್ತರ್‌ʼ ಎನ್ನುವ ಸಿನಿಮಾವನ್ನು ಅನೌನ್ಸ್‌ ಮಾಡಿದ್ದಾರೆ. ಈ ಸಿನಿಮಾವನ್ನು ಕೇರಳ ಸ್ಟೋರಿ ನಿರ್ಮಿಸಿದ ಸಂಸ್ಥೆಯೇ ನಿರ್ಮಾಣ ಮಾಡಲಿದೆ.

ಈ ನಡುವೆ ಕೇರಳ ಸ್ಟೋರಿ ನಿರ್ದೇಶಕ ಸುದೀಪ್ತೋ ಸೇನ್ ಅವರು ಸ್ಯಾಂಡಲ್‌ ವುಡ್‌ ನಟ ಶಿವರಾಜ್‌ ಕುಮಾರ್‌ ಅವರನ್ನು ಭೇಟಿ ಆಗಿದ್ದಾರೆ. ರಹಸ್ಯವಾಗಿ ಶಿವರಾಜ್‌ ಕುಮಾರ್‌ ಅವರನ್ನು ಅವರ ನಿವಾಸದಲ್ಲಿ ಅವರು ಭೇಟಿ ಆಗಿದ್ದಾರೆ. ಆದರೆ ಅವರ ಭೇಟಿ ವೇಳೆಗಿನ ಫೋಟೋ ಲೀಕ್‌ ಆಗಿದ್ದು ವೈರಲ್‌ ಆಗಿದೆ.

ಹಿಂದಿ ಸಿನಿಮಾವೊಂದರ ಕುರಿತಾಗಿ ಚರ್ಚಿಸಿಲು ಸುದೀಪ್ತೋ ಸೇನ್ ಅವರು ಶಿವಣ್ಣರನ್ನು ಭೇಟಿ ಆಗಿದ್ದಾರೆ ಎನ್ನಲಾಗಿದೆ. ಅವರ ಭೇಟಿಯ ವೇಳೆ ನಿರ್ದೇಶಕ ಎನ್ ಎಸ್ ರಾಜಕುಮಾರ್ ಅವರು ಕೂಡ ಇದ್ದರು.

ಶಿವರಾಜ್‌ ಕುಮಾರ್‌ ಸುದೀಪ್ತೋ ಅವರ ಆಫರ್‌ ಗೆ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ ಎನ್ನಲಾಗಿದ್ದು, ಮುಂದಿನ ದಿನಗಳಲ್ಲಿ ದಿನಾಂಕ ಮತ್ತಿತರ ವಿಚಾರದ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗಿದೆ.  ಒಂದು ವೇಳೆ ಇದು ಅಧಿಕೃತವಾದರೆ ಶಿವಣ್ಣ ಬಾಲಿವುಡ್‌ ಗೆ ಎಂಟ್ರಿ ಕೊಡಲಿದ್ದಾರೆ.

ಸದ್ಯ ಶಿವರಾಜ್‌ ಕುಮಾರ್‌ ಶ್ರಿನೀ ಅವರ ʼಘೋಸ್ಟ್‌ʼ ʼಕರಟಕ ದಮನಕʼ, ʼ45ʼ,ʼ ಭೈರತಿ ರಣಂಗಲ್‌ʼ ಮುಂತಾದ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದಲ್ಲದೇ ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಅವರೊಂದಿಗೂ ಶಿವಣ್ಣ  ನಟಿಸಲಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.