Cauvery: “ಸಂಕಷ್ಟ ಸೂತ್ರ ಒಂದೇ ಪರಿಹಾರ”: ಎಂ.ಬಿ. ಪಾಟೀಲ್
Team Udayavani, Aug 30, 2023, 12:04 AM IST
ಬೆಂಗಳೂರು: ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನೀರು ಹಂಚಿಕೆ ಸಂಬಂಧ ಬರಗಾಲದ ವರ್ಷಗಳಿಗೆ ಅನ್ವಯವಾಗುವಂತೆ ಸಂಕಷ್ಟ ಸೂತ್ರವನ್ನು ವಸ್ತುನಿಷ್ಠ ನೆಲೆಯಲ್ಲಿ ರೂಪಿಸಿದರೆ ಅದೊಂದೇ ನಿಜವಾದ ಪರಿಹಾರ ಎಂದು ಕೈಗಾರಿಕ ಸಚಿವ ಎಂ.ಬಿ. ಪಾಟೀಲ್ ಅಭಿಪ್ರಾಯಪಟ್ಟಿ¨ªಾರೆ.
ಸುದ್ದಿಗಾರರ ಜತೆ ಮಾತನಾಡಿ, ಇದು ನನ್ನ ವೈಯಕ್ತಿಕ ಅಭಿಪ್ರಾಯ. ಹಿಂದೆ ನಾನೂ ನೀರಾವರಿ ಸಚಿವನಾಗಿದ್ದ ಅನುಭವದ ಮೇಲೆ ಈ ಸಲಹೆ ನೀಡುತ್ತಿರುವುದಾಗಿ ಹೇಳಿದರು.
ತಮಿಳುನಾಡಿನ ಕೋರಿಕೆ ಪ್ರಕಾರ ಈಗ ನೀರು ಬಿಡುವುದು ಅಸಾಧ್ಯ. ಇದನ್ನು ಮನವರಿಕೆ ಮಾಡುವ ಕೆಲಸವನ್ನು ಸರಕಾರ ಮಾಡುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಯಾವ ರೀತಿಯ ತೀರ್ಮಾನ ಮಾಡಬೇಕು ಎನ್ನುವುದಕ್ಕೆ ಯಾವುದೇ ಆಧಾರ ಇಲ್ಲ. ಹೀಗಾಗಿಯೇ ಎರಡೂ ರಾಜ್ಯಗಳ ತಜ್ಞರು ಸೇರಿಕೊಂಡು ಪರಿಹಾರ ಕಂಡುಕೊಳ್ಳುವ ಅಗತ್ಯ ಇದೆ ಎಂದು ಅವರು ಸಲಹೆ ನೀಡಿದರು.
ರಾಜ್ಯವು ಪ್ರತೀವರ್ಷ ತಮಿಳುನಾಡಿಗೆ 192 ಟಿಎಂಸಿ ನೀರು ಬಿಡುಗಡೆ ಮಾಡಬೇಕಿತ್ತು. ಆದರೆ, ಆಗ ತುಂಬಾ ಕಾನೂನು ಹೋರಾಟ ಮಾಡಿದ್ದರಿಂದ ಇದರಲ್ಲಿ 14 ಟಿಎಂಸಿಯಷ್ಟು ಹೊರೆ ನಮಗೆ ಕಡಿಮೆಯಾಗಿ, ಹೆಚ್ಚುವರಿಯಾಗಿ ಬೆಂಗಳೂರಿಗೆ 4.5 ಟಿಎಂಸಿ ಸಿಕ್ಕಿತು. ಇದರಿಂದಾಗಿ ಮೇಕೆದಾಟು ಯೋಜನೆಯ ವಿಚಾರಕ್ಕೆ ಬಲ ಬಂದಿತು ಎಂದವರು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.