Bangalore: ಎಲ್ಇಟಿ ಉಗ್ರ ಜುನೈದ್ ಸಹಚರನ ಬಂಧನ
Team Udayavani, Aug 30, 2023, 2:59 PM IST
ಬೆಂಗಳೂರು: ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಲಷ್ಕರ್-ಎ-ತೊಯ್ಬಾ ಸಂಘಟನೆ ಐವರು ಸದಸ್ಯರ ಮಾಸ್ಟರ್ ಮೈಂಡ್, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಜುನೈದ್ನ ಸಹಚರನಾದ ರೌಡಿಶೀಟರ್ ಮೊಹಮ್ಮದ್ ಅರ್ಷದ್ ಖಾನ್ನನ್ನು ಆರ್.ಟಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅರ್ಷದ್ ಖಾನ್ 2017ರಲ್ಲಿ ಜುನೈದ್ ಜತೆ ಸೇರಿ ನೂರ್ ಅಹಮ್ಮದ್ ಎಂಬಾತನ ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ. ಬಳಿಕ ಜಾಮೀನು ಪಡೆದು ಬಿಡುಗಡೆಯಾಗಿದ್ದ. ಆ ಬಳಿ ಕವೂ ಕೊಲೆ, ಕೊಲೆ ಯತ್ನ, ರಾಬರಿ, ಜೀವ ಬೆದರಿಕೆ ಸೇರಿ 17 ಪ್ರಕರಣಗಳಲ್ಲಿ ಆರೋಪಿ ಯಾಗಿದ್ದಾನೆ. ಆರ್.ಟಿ.ನಗರ ಠಾಣೆಯಲ್ಲಿ ಈತನ ವಿರುದ್ಧ ರೌಡಿಪಟ್ಟಿ ತೆರೆಯಲಾಗಿದೆ. ಕೆಲ ಪ್ರಕರಣಗಳಲ್ಲಿ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಕೋರ್ಟ್ ವಾರೆಂಟ್ ಹೊರಡಿಸಿತ್ತು ಎಂದು ಪೊಲೀಸರು ಹೇಳಿದರು.
ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಆರೋಪಿಯ ವಿರುದ್ಧ 8 ವಾರೆಂಟ್ಗಳಿದ್ದ ಕಾರಣ ಈತನ ಬಂಧನಕ್ಕೆ ಕೋರ್ಟ್ ಸೂಚಿಸಿತ್ತು. ಹೀಗಾಗಿ ಆರೋ ಪಿಯ ಮಾಹಿತಿ ಸಂಗ್ರಹಿಸಿ ಆ.27ರಂದು ಮುಂಜಾನೆ 5 ಗಂಟೆ ಸುಮಾರಿಗೆ ಆರ್ .ಟಿ.ನಗರದಲ್ಲಿರುವ ಆತನ ಮನೆ ಮೇಲೆ ದಾಳಿ ಮಾಡಲಾಗಿತ್ತು. ಆಗ ಚಾಕುವನ್ನು ಕುತ್ತಿಗೆಗೆ ಹಿಡಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೈಡ್ರಾಮಾ ಮಾಡಿದ್ದ. ಬಳಿಕ ಅದನ್ನು ತಡೆಯಲು ಹೋದ ಪೊಲೀಸರ ಮೇಲೂ ಚಾಕು ಬೀಸಿದ್ದು, ಪೊಲೀಸರಿಗೆ ಸಣ್ಣ ಪ್ರಮಾಣದ ಗಾಯವಾಗಿತ್ತು. ಆನಂತರ ಪೊಲೀಸರನ್ನು ತಳ್ಳಿ ಎರಡನೇ ಮಹಡಿಯಲ್ಲಿರುವ ತನ್ನ ಮನೆಯಿಂದ ಜಿಗಿದು ಪರಾರಿಯಾಗಲು ಯತ್ನಿಸಿದ್ದ. ಆದರೆ, ಹಿಂಬಾಲಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಈ ಹಿಂದೆ ಇದೇ ಮಾದರಿಯಲ್ಲಿ ಹೈಡ್ರಾಮಾ ಮಾಡಿದ್ದ. ಉಗ್ರ ಲಿಂಕ್ ಸದ್ಯಕ್ಕಿಲ್ಲ: ಆರೋಪಿಯ ವಿಚಾರಣೆಯಲ್ಲಿ 2017ರ ನೂರ್ ಅಹಮದ್ ಅಪಹರಣ ಮತ್ತು ಕೊಲೆ ಪ್ರಕರಣ ದಲ್ಲಿ ಜುನೈದ್ ಜತೆ ಬಂಧನ ಕ್ಕೊಳಗಾಗಿದ್ದ. ಆ ನಂತರ ಆತನ ಸಂಪರ್ಕ ಇಟ್ಟುಕೊಂಡಿಲ್ಲ. ಹೀಗಾಗಿ ಉಗ್ರ ಸಂಘ ಟನೆ ಎಲ್ಇಟಿ ಲಿಂಕ್ ಇಲ್ಲ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Potholes: ಮೆಜೆಸ್ಟಿಕ್ ಬಸ್ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು
Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್ ಬಂಧನ
Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!
Bengaluru: ದುಷ್ಕರ್ಮಿಗಳಿಂದ ಬಸ್ ಡ್ರೈವರ್, ಕಂಡಕ್ಟರ್ಗೆ ಥಳಿತ!
Bengaluru: ಹಲ್ಲೆ ನಡೆದರೆ ಪೌರ ಕಾರ್ಮಿಕರು ತಕ್ಷಣವೇ ದೂರು ನೀಡಿ: ಕಮಿಷನರ್
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.