Threat To Writers: ಒಬ್ಬನಿಂದಲೇ ಸಾಹಿತಿಗಳಿಗೆ ಬೆದರಿಕೆ
Team Udayavani, Aug 30, 2023, 3:18 PM IST
ಬೆಂಗಳೂರು: ಸಾಹಿತಿಗಳಾದ ಕುಂ. ವೀರಭದ್ರಪ್ಪ, ಮಾಜಿ ಸಚಿವೆ, ಸಾಹಿತಿ ಬಿ.ಟಿ.ಲಲಿತಾ ನಾಯಕ್ ಸೇರಿ ಹಿರಿಯ ಸಾಹಿತಿಗಳಿಗೆ ಕೊಲೆ ಬೆದರಿಕೆ ಪತ್ರ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರಿಗೆ, ಎಲ್ಲ ಸಾಹಿತಿ ಗಳಿಗೆ ಒಬ್ಬನೇ ಪತ್ರ ಬರೆದಿರುವುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.
ದಾವಣಗೆರೆ, ಚಿತ್ರದುರ್ಗ ಅಥವಾ ಉತ್ತರ ಕರ್ನಾಟಕ ಮೂಲದ ಒಬ್ಬನೇ ವ್ಯಕ್ತಿ ಆರೇಳು ಮಂದಿ ಸಾಹಿತಿಗಳಿಗೆ ಕೊಲೆ ಬೆದರಿಕೆ ಪತ್ರ ಬರೆದಿದ್ದಾನೆ ಎಂಬುದು ಪತ್ರಗಳಲ್ಲಿರುವ ಕೈ ಬರಹ ದಿಂದ ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಒಂದು ತಂಡ ದಾವಣಗೆರೆಯಲ್ಲಿ ಬೀಡುಬಿಟ್ಟಿದ್ದು, ಆರೋಪಿಯ ಪತ್ತೆಗಾಗಿ ಕಾರ್ಯ ನಡೆಸುತ್ತಿದೆ. ಅನಾಮಧೇಯ ವ್ಯಕ್ತಿ ಬೆದರಿಕೆ ಪತ್ರಗಳನ್ನು ಪೋಸ್ಟ್ ಬಾಕ್ಸ್ಗಳಿಂದ ಪೋಸ್ಟ್ ಮಾಡಿದ್ದಾನೆ. ದಾವಣಗೆರೆ ಮಾತ್ರವಲ್ಲದೆ, ಬೇರೆ ಬೇರೆ ಜಿಲ್ಲೆ, ತಾಲೂಕುಗಳಿಗೆ ತೆರಳಿ ಪೋಸ್ಟ್ ಮಾಡಿರುವುದು ಪತ್ತೆಯಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ದಾಖಲಾಗಿರುವ ಎಲ್ಲ ಬೆದರಿಕೆ ಪತ್ರ ಪ್ರಕರಣಗಳ ತನಿಖೆಗೆ ಬೆಂಗಳೂರು ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಿಸಿಬಿ ಮುಖ್ಯಸ್ಥರು ನಡೆಸಬೇಕು ಎಂದು ಡಿಜಿಪಿ ಅಲೋಕ್ ಮೋಹನ್ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Potholes: ಮೆಜೆಸ್ಟಿಕ್ ಬಸ್ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು
Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್ ಬಂಧನ
Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!
Bengaluru: ದುಷ್ಕರ್ಮಿಗಳಿಂದ ಬಸ್ ಡ್ರೈವರ್, ಕಂಡಕ್ಟರ್ಗೆ ಥಳಿತ!
Bengaluru: ಹಲ್ಲೆ ನಡೆದರೆ ಪೌರ ಕಾರ್ಮಿಕರು ತಕ್ಷಣವೇ ದೂರು ನೀಡಿ: ಕಮಿಷನರ್
MUST WATCH
ಹೊಸ ಸೇರ್ಪಡೆ
Potholes: ಮೆಜೆಸ್ಟಿಕ್ ಬಸ್ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು
Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್ ಬಂಧನ
Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್
Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!
Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.