Mangaluru ಪಾರ್ಟ್ಟೈಂ ಉದ್ಯೋಗ ಆಮಿಷ: 10.88 ಲಕ್ಷ ರೂ. ವಂಚನೆ
Team Udayavani, Aug 30, 2023, 9:29 PM IST
ಮಂಗಳೂರು: ಆನ್ಲೈನ್ನಲ್ಲಿ ಪಾರ್ಟ್ಟೈಂ ಉದ್ಯೋಗದ ಆಮಿಷವೊಡ್ಡಿ ಒಟ್ಟು 10.88 ಲಕ್ಷ ರೂ. ಹೂಡಿಕೆ ಮಾಡಿಸಿ ವಂಚಿಸಿದ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಯುಯೇಟ್ ಮೀಡಿಯಾ ಕಂಪೆನಿಯ ಪ್ರತಿನಿಧಿಯೆಂದು ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿ ದೂರುದಾರರಿಗೆ ಆ. 26ರಂದು ವಾಟ್ಸ್ಆ್ಯಪ್ ಸಂದೇಶ ಕಳುಹಿಸಿದ್ದ. ಆನ್ಲೈನ್ನಲ್ಲಿ ಟಾಸ್ಕ್ ಗಳ ಮೂಲಕ ಪ್ರತಿದಿನ 2-3 ಸಾವಿರ ರೂ. ಸಂಪಾದನೆ ಮಾಡಬಹುದು ಎಂದು ಸಂದೇಶದಲ್ಲಿ ತಿಳಿಸಿದ್ದ. ಇದನ್ನು ನಂಬಿದ ದೂರುದಾರರು ಹಂತ ಹಂತವಾಗಿ ಹಣವನ್ನು ಹೂಡಿಕೆ ಮಾಡಿದ್ದಾರೆ.
ಆರಂಭದಲ್ಲಿ 1,000 ರೂ.ಗಳಿಂದ 3,000 ರೂ.ಗಳನ್ನು ತೊಡಗಿಸಿದಾಗ ಅವರ ಖಾತೆಗೆ ಅಷ್ಟೇ ಹಣ ಜಮೆಯಾಗಿತ್ತು. ಆದರೆ ಅನಂತರವೂ ಹಣ ಹೂಡಿಕೆಗೆ ಅಪರಿಚಿತ ಒತ್ತಾಯಿಸಿದ್ದ. ಅದರಂತೆ ದೂರುದಾರರಿಂದ ಹಂತಹಂತವಾಗಿ ಆ.28ರ ವರೆಗೆ ಒಟ್ಟು 10.88 ಲಕ್ಷ ರೂ. ವರ್ಗಾಯಿಸಿಕೊಂಡು ಯಾವುದೇ ಮೊತ್ತ ಮರುಪಾವತಿಸದೆ ವಂಚಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.