Congress:ಲೋಕಾ ಚುನಾವಣೆ ಮುನ್ನ ಕರ್ನಾಟಕ ಮಾಡೆಲ್: “ಗ್ಯಾರಂಟಿ” ಕೈ ಹಿಡಿಯಬಹುದೆಂಬ ಆಶಾವಾದ
Team Udayavani, Aug 30, 2023, 11:19 PM IST
ಬೆಂಗಳೂರು: ಅಧಿಕಾರಕ್ಕೆ ಬಂದ ನೂರು ದಿನಗಳಲ್ಲೇ ಪ್ರಣಾಳಿಕೆಯ ಪಂಚ ಗ್ಯಾರಂಟಿಗಳ ಪೈಕಿ ನಾಲ್ಕನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವ ರಾಜ್ಯ ಸರಕಾರ, ವರ್ಷಾಂತ್ಯದ ವೇಳೆಗೆ ಯುವನಿಧಿ ಯೋಜನೆಯನ್ನು ಅನುಷ್ಠಾನಗೊಳಿಸಲು ಸಿದ್ಧತೆ ನಡೆಸಿದೆ. ಈ ಮೂಲಕ ಗ್ಯಾರಂಟಿ ಯೋಜನೆಗಳನ್ನು ಲೋಕಸಭಾ ಚುನಾವಣೆ ದೃಷ್ಟಿಯಿಂದ ಚಿಮ್ಮು ಹಲಗೆಯಾಗಿಸಿಕೊಳ್ಳುವ ಲೆಕ್ಕಾಚಾರ ಹೆಣೆಯುತ್ತಿದೆ.
ಮೊದಲ ಕ್ಯಾಬಿನೆಟ್ನಲ್ಲೇ ಒಪ್ಪಿಗೆ
ರಾಜ್ಯ ವಿಧಾನಸಭಾ ಚುನಾವಣ ಪೂರ್ವದಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆಗಳನ್ನು ಮತದಾರರ ಮುಂದೆ ಇಟ್ಟಿತ್ತು. ಕೊಟ್ಟ ಮಾತಿನ ಪ್ರಕಾರ ಅಧಿಕಾರಕ್ಕೆ ಬಂದ ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಇವುಗಳಿಗೆ ತಾತ್ವಿಕ ಒಪ್ಪಿಗೆ ನೀಡಲಾಗಿತ್ತು. ಸಾರಿಗೆ ಸಂಸ್ಥೆಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುವ “ಶಕ್ತಿ’, ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರದಾರರಿಗೆ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿ ಬದಲು ಅಷ್ಟೇ ಮೊತ್ತದ ಹಣವನ್ನು ಖಾತೆಗೆ ಹಾಕುವ “ಅನ್ನಭಾಗ್ಯ”, 200 ಯುನಿಟ್ವರೆಗೆ ಉಚಿತ ವಿದ್ಯುತ್ ನೀಡುವ “ಗೃಹಜ್ಯೋತಿ’ ಹಾಗೂ ಮೈಸೂರಿನಲ್ಲಿ ಚಾಲನೆ ಪಡೆದ “ಗೃಹಲಕ್ಷ್ಮಿ’ ಯೋಜನೆಯನ್ನು ಸರಕಾರ ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಇದೆಲ್ಲವೂ ಸಾರ್ವಜನಿಕರಲ್ಲಿ ಕಾಂಗ್ರೆಸ್ ಪರವಾಗಿ ಸಕಾರಾತ್ಮಕ ಭಾವನೆಯನ್ನು ಸೃಷ್ಟಿಸುತ್ತಿವೆ.
ಪಂಚ ಗ್ಯಾರಂಟಿಗಳೇ ಕಾಂಗ್ರೆಸ್ಗೆ “ಅಸ್ತ್ರ’
ನಗರ ಪ್ರದೇಶದ ಬಡವರು ಹಾಗೂ ದುಡಿಯುವ ವರ್ಗವನ್ನು ಲಕ್ಷ್ಯದಲ್ಲಿಟ್ಟುಕೊಂಡು “ಇಂದಿರಾ ಕ್ಯಾಂಟೀನ್’ ಯೋಜನೆಯನ್ನು ಮರಳಿ ಜಾರಿಗೆ ತರಲಾಗಿದೆ. ಸರಕಾರದ ಮೂಲಗಳ ಪ್ರಕಾರ ಪದವೀಧರ ಹಾಗೂ ಡಿಪ್ಲೋಮಾ ಪಾಸ್ ಮಾಡಿದ ನಿರುದ್ಯೋಗಿ ಯುವಕರಿಗಾಗಿ ರೂಪಿಸಿರುವ “ಯುವನಿಧಿ’ ಯೋಜನೆ ಡಿಸೆಂಬರ್ ತಿಂಗಳಿನಲ್ಲಿ ಜಾರಿಯಾಗಲಿದೆ. ಅಲ್ಲಿಗೆ ಸರಕಾರ ನೀಡಿದ ಪ್ರಮುಖ ಭರವಸೆಗಳೆಲ್ಲವೂ ವರ್ಷ ಕಳೆಯುವಷ್ಟರಲ್ಲಿ ಪೂರ್ಣಗೊಂಡಂತಾಗುತ್ತದೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಲೋಕಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ನುಡಿದಂತೆ ನಡೆದಿದ್ದೇವೆ ಎಂಬುದು ಜಾಹಿರಾತಿಗೆ ಸೀಮಿತವಾದ ಘೋಷವಾಕ್ಯವಲ್ಲ. ಅಕ್ಷರಶಃ ಅದಕ್ಕೆ ಪೂರಕವಾಗಿ ನಡೆದುಕೊಂಡಿದ್ದೇವೆ ಎಂದು ಹೇಳುವುದಕ್ಕೆ ಪಂಚ ಗ್ಯಾರಂಟಿಗಳ ಜಾರಿಯನ್ನೇ ಸಾಕ್ಷಿಯಾಗಿ ಬಳಸಿಕೊಳ್ಳಬೇಕೆಂಬುದು ಕಾಂಗ್ರೆಸ್ ಚಿಂತಕರ ಚಾವಡಿಯ ಲೆಕ್ಕಾಚಾರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.