Jammu Kashmir; ಯಾವುದೇ ಕ್ಷಣದಲ್ಲಿ ಚುನಾವಣೆ ನಡೆಸಲು ಸಿದ್ದರಿದ್ದೇವೆ: ಕೇಂದ್ರ ಸರ್ಕಾರ


Team Udayavani, Aug 31, 2023, 12:25 PM IST

jkJammu Kashmir; ಯಾವುದೇ ಕ್ಷಣದಲ್ಲಿ ಚುನಾವಣೆ ನಡೆಸಲು ಸಿದ್ದರಿದ್ದೇವೆ: ಕೇಂದ್ರ ಸರ್ಕಾರ

ಹೊಸದಿಲ್ಲಿ: ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದುವರಿಸಿದೆ. ಸಿಜೆಐ ಚಂದ್ರಚೂಡ್ ಅವರಿರುವ ಐವರು ಸದಸ್ಯರ ಬೆಂಚ್ ಇದರ ವಿಚಾರಣೆ ನಡೆಸುತ್ತಿದ್ದು ಅರ್ಜಿದಾರರ ಪರ ಕಪಿಲ್ ಸಿಬಲ್ ಅವರು ವಾದ ಮಂಡಿಸುತ್ತಿದ್ದಾರೆ. ಸಾಲಿಟರಿ ಜನರಲ್ ತುಷಾರ್ ಮೆಹ್ತಾ ಅವರು ಕೇಂದ್ರ ಸರ್ಕಾರದ ಪರವಾಗಿ ವಾದಿಸುತ್ತಿದ್ದಾರೆ.

ಮಂಗಳವಾರ ವಿಚಾರಣೆ ವೇಳೆ ಹಿಂದಿನ ರಾಜ್ಯವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲು ಸಮಯದ ಚೌಕಟ್ಟನ್ನು ನಿರ್ದಿಷ್ಟಪಡಿಸಲು ಮೊದಲ ಬಾರಿಗೆ ಕೇಂದ್ರವನ್ನು ಕೇಳಿತ್ತು. ಕಣಿವೆಯಲ್ಲಿರುವ ಪ್ರಸ್ತುತ ವ್ಯವಸ್ಥೆಯು ಅಂತ್ಯಕ್ಕೆ ಬರಬೇಕಾಗಿದೆ ಎಂದು ಹೇಳಿತ್ತು. ಇಂದು ಇದಕ್ಕೆ ಉತ್ತರ ನೀಡಿರುವ ತುಷಾರ್ ಮೆಹ್ತಾ, “ಕೇಂದ್ರವು ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಸಮಯದಲ್ಲಿ ಚುನಾವಣೆ ನಡೆಸಲು ಸಿದ್ಧವಾಗಿದೆ” ಎಂದಿದ್ದಾರೆ.

ವೋಟರ್ ಪಟ್ಟಿಯನ್ನು ಸದ್ಯ ನವೀಕರಿಸಲಾಗುತ್ತಿದೆ. ಶೀಘ್ರದಲ್ಲಿ ಅದನ್ನು ಬಿಡುಗಡೆ ಮಾಡಲಾಗುತ್ತದೆ. ಚುನಾವಣಾ ಆಯೋಗವು ಇದರ ಬಗ್ಗೆ ನಿರ್ಧರಿಸುತ್ತದೆ ಎಂದರು.

ಇದನ್ನೂ ಓದಿ:Gangavathi-ಮುಸ್ಟೂರು ಕೆಎಸಾರ್ಟಿಸಿ ಬಸ್ ಗೆ ಕಲ್ಲು: ಪುಡಿ ಪುಡಿಯಾದ ಹಿಂಬದಿ ಗಾಜು

“ಗ್ರಾಮೀಣ ಪ್ರದೇಶಗಳಿಗೆ 2019 ರ ನಂತರ ಮೂರು ಹಂತದ ಪಂಚಾಯತ್ ಚುನಾವಣೆಗಳನ್ನು ಮೊದಲು ನಡೆಸಲಾಗುವುದು” ಎಂದು ಅವರು ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣಾ ಯೋಜನೆಯ ಬಗ್ಗೆ ಹೇಳಿದರು.

ಜಮ್ಮು ಕಾಶ್ಮೀರದ ಎರಡನೇ ಚುನಾವಣೆಯು ಸ್ಥಳೀಯ ನಾಗರಿಕ ಸಂಸ್ಥೆಗಳ ಚುನಾವಣೆ ಎಂದು ಪೀಠಕ್ಕೆ ತಿಳಿಸಿದರು.

ಜಮ್ಮು ಕಾಶ್ಮೀರದ ಸ್ಥಿತಿಗತಿಯ ಬಗ್ಗೆ ಕೋರ್ಟ್ ಗೆ ತಿಳಿಸಿದ ಮೆಹ್ತಾ, ಕಣಿವೆಯಲ್ಲಿ ಅಭಿವೃದ್ಧಿ ಪ್ರಕ್ರಿಯೆಯು ನಡೆಯುತ್ತಿದೆ ಮತ್ತು ಶೀಘ್ರದಲ್ಲೇ ಮುಗಿಯಲಿದೆ ಎಂದು ಹೈಲೈಟ್ ಮಾಡಿದರು. ಕಾರ್ಗಿಲ್ ಮತ್ತು ಲೇಹ್ ಗಾಗಿ ಅಭಿವೃದ್ಧಿ ನಡೆಯಲಿದೆ” ಎಂದು ಅವರು ಹೇಳಿದರು.

2019 ರ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಶೇಕಡಾ 45.2 ರಷ್ಟು ಕಡಿಮೆಯಾಗಿದೆ. ಒಳನುಸುಳುವಿಕೆಯು 90.2ರಷ್ಟು ತಗ್ಗಿದೆ ಎಂದರು.

2018 ರಿಂದ ಕಣಿವೆಯಲ್ಲಿ 1767 ಕಲ್ಲು ತೂರಾಟದ ಘಟನೆಗಳು ದಾಖಲಾಗಿವೆ ಎಂದು ಕೇಂದ್ರವು ಪೀಠಕ್ಕೆ ತಿಳಿಸಿದೆ. “2023 ರಲ್ಲಿ ಅದು ಈಗ ಶೂನ್ಯವಾಗಿದೆ. 2018ರಲ್ಲಿ ಸಂಘಟಿತ ಬಂದ್‌ ಗಳು ಶೇ.52 ರಷ್ಟಿದ್ದವು ಮತ್ತು ಇಂದು ಅದು ಶೂನ್ಯವಾಗಿದೆ ಎಂದು ಅವರು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

ಟಾಪ್ ನ್ಯೂಸ್

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.