Bhatkal: ವಂಶವೃಕ್ಷ ಪಡೆಯುವ ಪದ್ಧತಿ ಸರಳೀಕರಣಗೊಳಿಸಿ
ಹಲವು ಕುಟುಂಬಗಳಲ್ಲಿ ತಮ್ಮ ಹಿರಿಯರ ಮರಣ ದಾಖಲೆಗಳೇ ಇಲ್ಲ
Team Udayavani, Aug 31, 2023, 6:05 PM IST
ಭಟ್ಕಳ: ಕುಟುಂಬದ ವಂಶವೃಕ್ಷ ಪಡೆಯಲು ಮೃತರ ಮರಣ ದಾಖಲೆ ಕೇಳುತ್ತಿರುವುದರಿಂದ ಅನೇಕ ಕುಟುಂಬಗಳಿಗೆ ತೊಂದರೆಯಾಗಿದ್ದು, ಅದನ್ನು ಸರಿಪಡಿಸಬೇಕು ಎಂದು ಕೋರಿ ಉತ್ತರ ಕನ್ನಡ ಜಿಲ್ಲಾ ದಿ. ಡಿ. ದೇವರಾಜು ಅರಸು ವಿಚಾರ ವೇದಿಕೆಯಿಂದ ಸಹಾಯಕ ಆಯುಕ್ತೆ ಡಾ| ನಯನಾ ಎನ್.ಗೆ ಮನವಿ ಸಲ್ಲಿಸಲಾಯಿತು.
ಮನವಿಯನ್ನು ಕಂದಾಯ ಸಚಿವ ಕೃಷ್ಣ ಭೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಜಿಲ್ಲಾಧಿಕಾರಿಗಳಿಗೂ ಕಳುಹಿಸಲಾಗಿದ್ದು, ಮನವಿಯಲ್ಲಿ ಈ ಹಿಂದೆ ಗ್ರಾಮದಲ್ಲಿ ಯಾವುದೇ ಕುಟುಂಬಕ್ಕೆ ಜೀವಂತ ಸದಸ್ಯರ ಪ್ರಮಾಣ ಪತ್ರ ಅಥವಾ ವಂಶವೃಕ್ಷ ಅಗತ್ಯವಿದ್ದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಪಂಚನಾಮೆ ತಯಾರಿಸಿ ಮಾಡಿಕೊಡುತ್ತಿದ್ದರು. ಆದರೆ ಗಣಕೀಕೃತ ಪದ್ಧತಿ ಜಾರಿಯಾದ ಮೇಲೆ ಈ ಪದ್ಧತಿ ನಿಂತು ಹೋಗಿದ್ದು, ಜನಸಾಮಾನ್ಯರು ಪರದಾಡುವಂತಾಗಿದೆ.
ಜಿಲ್ಲೆಯಲ್ಲಿ ಹಲವು ಕುಟುಂಬಗಳಲ್ಲಿ ತಮ್ಮ ಹಿರಿಯರ ಮರಣ ದಾಖಲೆಗಳೇ ಇಲ್ಲವಾಗಿದ್ದು, ಅವರೆಲ್ಲರೂ ವಂಶವೃಕ್ಷಕ್ಕಾಗಿ ಪರದಾಡುವ ಪರಿಸ್ಥಿತಿ ಉಂಟಾಗಿದೆ. ಈ ಹಿಂದೆ ಮರಣ ಹೊಂದಿದವರ ಮರಣ ದಾಖಲೆ ಮಾಡಬೇಕೆನ್ನುವ ಪರಿಕಲ್ಪನೆ ಕೂಡಾ ಇಲ್ಲದ ಜನತೆ ಹಾಲಿ ತಮ್ಮ ಜಮೀನು ವಾರಸಾ ಮಾಡಲು, ಇತರೆ ಕೆಲಸ ಕಾರ್ಯಗಳಿಗೆ ಪರದಾಡುವ ಪರಿಸ್ಥಿತಿ ಉದ್ಭವಿಸಿದೆ ಎಂದು ಹೇಳಲಾಗಿದೆ.
ಈ ಹಿಂದಿನಂತೆಯೇ ಗ್ರಾಮ ಲೆಕ್ಕಾಧಿಕಾರಿಗಳು ಮರಣ ದಾಖಲೆ ಲಭ್ಯವಿಲ್ಲದ ಪ್ರಕರಣಗಳಲ್ಲಿ ಪಂಚರ ಅಭಿಪ್ರಾಯ ಪಡೆದು ಪ್ರಮಾಣ ಪತ್ರ ನೀಡುವಂತಾಗಬೇಕು ಎಂದೂ ಆಗ್ರಹಿಸಲಾಗಿದೆ. ಈ ಸಂದರ್ಭದಲ್ಲಿ ವೇದಿಕೆ ಅಧ್ಯಕ್ಷ ಅನಂತ ನಾಯ್ಕ ಹೆಗ್ಗಾರ್, ಗಣಪತಿ ನಾಯ್ಕ ಜಾಲಿ, ವಿಷ್ಣು ದೇವಾಡಿಗ ಬೆಂಗ್ರೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಬಸ್ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು
Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ
Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ
Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?
Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.