Drought: ರಾಜ್ಯದಲ್ಲಿ ತೀವ್ರ ಮಳೆ ಕೊರತೆ: 4ರಂದು ಬರ ತಾಲೂಕುಗಳ ಘೋಷಣೆ
-ಸತತ ಮಳೆ ಕೊರತೆಯಿಂದ ಒಣಗುತ್ತಿವೆ ಬೆಳೆಗಳು
Team Udayavani, Aug 31, 2023, 8:19 PM IST
ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದಾದ ಬೆಳೆಹಾನಿ ಲೆಕ್ಕಾಚಾರ ನಡೆದಿದ್ದು, ಹತ್ತು ದಿನಗಳಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಬೆಂಗಳೂರು ಪ್ರಸ್ಕ್ಲಬ್ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ತೀವ್ರ ಬರಪೀಡಿತ ತಾಲೂಕುಗಳ ಆಯ್ದ ಗ್ರಾಮಗಳಲ್ಲಿ ಬೆಳೆ ಪರಿಸ್ಥಿತಿ ಸಮೀಕ್ಷೆ ಪೂರ್ಣಗೊಂಡಿದ್ದು, ಒಂದು ದಿನದ ಹಿಂದಷ್ಟೇ ವರದಿ ಸಲ್ಲಿಕೆಯಾಗಿದೆ. ಇದೇ ಸೆ.4ರಂದು ರಾಜ್ಯದಲ್ಲಿನ ಬರ ತಾಲೂಕುಗಳ ಘೋಷಣೆ ಮಾಡಲಾಗುವುದು. ಇದಾದ ನಂತರದ ಒಂದು ವಾರದಲ್ಲಿ ಬೆಳೆಹಾನಿಯ ನಿಖರ ಮಾಹಿತಿಯೂ ಗೊತ್ತಾಗಲಿದೆ’ ಎಂದು ಹೇಳಿದರು.
ರಾಜ್ಯದ ಬಹುತೇಕ ಕಡೆ ಶೇ.70ರಿಂದ 80ರಷ್ಟು ಬಿತ್ತನೆಯಾಗಿದೆ. ಹಾವೇರಿಯಲ್ಲಿ ಶೇ.85ರಷ್ಟು ಬಿತ್ತನೆ ಮಾಡಲಾಗಿದೆ. ಆದರೆ, ಸತತ ಮಳೆಯ ಕೊರತೆಯಿಂದ ಬೆಳೆಗಳು ಒಣಗುತ್ತಿವೆ. ಹೀಗೆ ಹಾನಿಗೊಳಗಾದ ಬೆಳೆಯ ಪ್ರಮಾಣ ಎಷ್ಟು ಎಂದು ತಕ್ಷಣಕ್ಕೆ ಹೇಳಲಾಗದು. ಸಮೀಕ್ಷೆ ಜತೆಗೆ ಮತ್ತಿತರ ಪ್ರಕ್ರಿಯೆಗಳ ನಂತರ ಅದು ಗೊತ್ತಾಗಲಿದೆ. ಈ ಮಧ್ಯೆ ಸೆ.4ರಂದು ಸಚಿವ ಸಂಪುಟದ ಉಪಸಮಿತಿ ಸಭೆ ಇದ್ದು, ಅಂದೇ ಬರ ತಾಲೂಕುಗಳ ಘೋಷಿಸಲು ಉದ್ದೇಶಿಸಲಾಗಿದೆ ಎಂದರು.
ರಾಜ್ಯ ಮತ್ತು ಕೇಂದ್ರದ ಮಾರ್ಗಸೂಚಿಗಳ ಪ್ರಕಾರ ಬರ ಘೋಷಣೆಯಾಗುವುದರಿಂದ ಬೆಳೆ ವಿಮೆಗೆ ನೋಂದಣಿ ಮಾಡಿಸಿಕೊಳ್ಳದ ರೈತರಿಗೂ ಪರಿಹಾರ ಸಿಗುವ ಸಾಧ್ಯತೆ ಇರುತ್ತದೆ ಎಂದ ಅವರು, ಪ್ರಸಕ್ತ ಸಾಲಿಗೆ 16.23 ಲಕ್ಷ ರೈತರು ಬೆಳೆ ವಿಮೆಗೆ ಹೆಸರು ನೋಂದಾಯಿಸಿಕೊಂಡಿದ್ದು, 15.31 ಲಕ್ಷ ಹೆಕ್ಟೇರ್ ಬೆಳೆವಿಮೆ ವ್ಯಾಪ್ತಿಗೆ ಒಳಪಟ್ಟಿದೆ. 2022-23ನೇ ಸಾಲಿನಲ್ಲಿ 12.64 ಲಕ್ಷ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡು, 1,114.17 ಕೋಟಿ ರೂ. ಪರಿಹಾರ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಜಲಾಶಯಗಳ ಹೂಳು; ಯೋಜನೆಗೆ ಚಿಂತನೆ
ಕಾವೇರಿ ಸೇರಿ ರಾಜ್ಯದ ಪ್ರಮುಖ ಜಲಾಶಯಗಳಲ್ಲಿರುವ ಹೂಳು ತೆಗೆಯುವ ಅವಶ್ಯಕತೆ ಇದೆ. ಇದರಿಂದ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಲಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ, ಪ್ರತಿ ಸಲ ಈ ಸಂಬಂಧದ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎನ್ನುವಷ್ಟರಲ್ಲಿ ಮಳೆ ಬರುತ್ತದೆ. ಹಾಗಾಗಿ, ಮುಂಬರುವ ದಿನಗಳಲ್ಲಿ ಅವಕಾಶ ಸಿಕ್ಕರೆ ಹೂಳು ತೆಗೆಯಲು ಯೋಜನೆ ರೂಪಿಸುವ ಆಲೋಚನೆ ಸರ್ಕಾರದ ಮುಂದಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ತಿಂಗಳಲ್ಲಿ ಬೆಲೆ ಆಯೋಗ ಅಸ್ತಿತ್ವಕ್ಕೆ
ರಾಜ್ಯ ಕೃಷಿ ಬೆಲೆ ಆಯೋಗ ರಚಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ತಿಂಗಳಲ್ಲಿ ಅಸ್ತಿತ್ವಕ್ಕೆ ಬರಲಿದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.
ಆಯೋಗ ರಚನೆಯಾದರೆ, ಮಾರುಕಟ್ಟೆ ಬೆಲೆ ಏರಿಳಿತದ ಮುನ್ಸೂಚನೆ, ಬೆಳೆಗಳ ರಚನೆ, ರೈತರಿಗೆ ಸಕಾಲದಲ್ಲಿ ಯಾವ ಬೆಳೆಗೆ ಎಷ್ಟು ಬೆಂಬಲ ಬೆಲೆ ಘೋಷಣೆ ಮಾಡಬೇಕು ಎನ್ನುವುದು ಸೇರಿ ಹಲವು ರೀತಿಯ ಕ್ರಮಗಳಿಗೆ ಅನುಕೂಲ ಆಗಲಿದೆ. ಈ ಸಂಬಂಧಿಸಿದ ಪ್ರಕ್ರಿಯೆಗಳು ನಡೆದಿದ್ದು, ತಿಂಗಳಲ್ಲಿ ರಚನೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕುಲಾಂತರಿ ಸಾಸಿವೆ; ಪ್ರಯೋಗ ಮಾಡಲ್ಲ
ಕುಲಾಂತರಿ ಸಾಸಿವೆ ಪ್ರಯೋಗದ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.
ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಕುಲಾಂತರಿ ಸಾಸಿವೆ ವಿಚಾರದಲ್ಲಿ ವಿಜ್ಞಾನಿಗಳಿಂದ ನಕಾರಾತ್ಮಕ ವರದಿಗಳು ಬಂದಿವೆ. ಈ ಪ್ರಯೋಗದಿಂದ ಹಾನಿಯಾಗುವಂತಹ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಯೋಗ ಮಾಡುವ ಆಲೋಚನೆಯೂ ಇಲ್ಲ; ಇದಕ್ಕೆ ಸಂಬಂಧಿಸಿದ ಯಾವುದೇ ಪ್ರಸ್ತಾವನೆಗಳೂ ಸರ್ಕಾರದ ಮುಂದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.