![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 1, 2023, 1:17 PM IST
ತೀರ್ಥಹಳ್ಳಿ: ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ʼಮಹಾರುದ್ರ ಪುರಶ್ಚರಣ ಹೋಮ ನಡೆಸಲು ಸಂಕಲ್ಪಿಸಲಾಗಿದೆ.
ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರಾದ ಉಭಯ ಜಗದ್ಗುರುಗಳ ಪೂರ್ಣಾನುಗ್ರಹದಿಂದ ಶ್ರೀ ಶೋಭಕೃತ್ನಾಮ ಸಂವತ್ಸರದ ಶ್ರಾವಣ ಬಹುಳ ಏಕಾದಶಿ ಸೇ.10 ರ ಭಾನುವಾರ ಮತ್ತು ದ್ವಾದಶಿ ಸೇ.11 ರ ಸೋಮವಾರ ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ʼಮಹಾರುದ್ರ ಪುರಶ್ಚರಣ ಹೋಮ ನಡೆಸಲಾಗುವುದು.
ಭಕ್ತಾದಿಗಳು ಈ ದೇವತಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ತನು-ಮನ-ಧನದೊಂದಿಗೆ ಸಹಕರಿಸಿ, ಶ್ರೀ ಸ್ವಾಮಿಯ ತೀರ್ಥಪ್ರಸಾದವನ್ನು ಸ್ವೀಕರಿಸಿ,ಶ್ರೀ ರಾಮೇಶ್ವರ ದೇವರ ಕೃಪಾನುಗ್ರಹಕ್ಕೆ ಪಾತ್ರರಾಗಲು ಸೊಪ್ಪುಗುಡ್ಡೆ ರಾಘವೇಂದ್ರ ಕೋರಿದ್ದಾರೆ.
ದೇವಸ್ಥಾನದ ಕಾರ್ಯಕ್ರಮಗಳ ವಿವರ:
ಸೆ.10ರ ಭಾನುವಾರ ಶ್ರಾವಣ ಬಹುಳ ಏಕಾದಶಿ ಬೆಳಗ್ಗೆ ಗಂಟೆ 8-00 ಕ್ಕೆ ʼಫಲನ್ಯಾಸ, ದೇವತಾ ಪ್ರಾರ್ಥನೆ” ತುಂಗಾ ನದಿಯಿಂದ “ಆಕ್ರೋದಕ ಅನಯನ” ಗಣಹೋಮ, “ಮಹಾರುದ್ರ ಪುರಶ್ಚರಣ” ಹೋಮ ಪ್ರಾರಂಭ, ಮಧ್ಯಾಹ್ನ 01.30 ಕ್ಕೆ ʼಮಹಾಮಂಗಳಾರತಿʼ ಆಗಲಿದೆ.
ಸೆ. 11ರ ಸೋಮವಾರ ಶ್ರಾವಣ ಬಹುಳ ದ್ವಾದಶಿ ಬೆಳಗ್ಗೆ ಗಂಟೆ 8 ಗಂಟೆಯಿಂದ “ಪುಣ್ಯಾಹ” “ಮಹಾರುದ್ರ ಪುರಶ್ಚರಣೆ ಹೋಮ” ಹಾಗೂ ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, ಪ್ರಸಾದ ವಿನಿಯೋಗ” ನಂತರ ಸಾರ್ವಜನಿಕ “ಅನ್ನಸಂತರ್ಪಣೆ” ನಡೆಯಲಿದೆ.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.