![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 1, 2023, 8:49 PM IST
ಮಂಗಳೂರು: ನಗರದ ಸೈಂಟ್ ಆ್ಯಗ್ನೆಸ್ ಸಮೀಪದ ದ್ವಿಚಕ್ರ ವಾಹನಗಳ ಶೋರೂಂನಿಂದ ಬೈಕ್ ಮತ್ತು ಸ್ಕೂಟರ್ ಕಳವಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.
ಗುರುವಾರ ಬೆಳಗ್ಗೆ 8 ಗಂಟೆಗೆ ಹೌಸ್ ಕೀಪಿಂಗ್ ಕೆಲಸದ ಮಹಿಳೆ ಬಂದಾಗ ಶೋರೂಂನ ಒಳಗೆ ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿತ್ತು. ಈ ಬಗ್ಗೆ ಆಕೆ ಶೋರೂಂನವರಿಗೆ ತಿಳಿಸಿದ್ದಾರೆ. ಅವರು ಬಂದು ನೋಡುವಾಗ ಶೋರೂಂನ ಹಿಂಬಾಗಿಲಿನ ಚಿಲಕವನ್ನು ಮೀಟಿ ಬಾಗಿಲು ತೆರೆದ ಸ್ಥಿತಿಯಲ್ಲಿತ್ತು. ಡಿಸ್ಪ್ಲೇಗೆ ಇಟ್ಟ ಬೈಕ್ ಮತ್ತು ಸ್ಕೂಟರ್ಗಳ ಪೈಕಿ ಒಂದು ಬೈಕ್ ಮತ್ತು ಬಿಳಿ ಬಣ್ಣದ ಆ್ಯಕ್ಟಿವಾ ಡಿಎಲ್ಎಕ್ಸ್ ಸ್ಕೂಟರ್ನ್ನು ಕಳವು ಮಾಡಿರುವುದು ಕಂಡುಬಂದಿದೆ.
ಬುಧವಾರ ಸಂಜೆ 7ರಿಂದ ಮರುದಿನ ಬೆಳಗ್ಗೆ 8 ಗಂಟೆಯ ನಡುವಿನ ಅವಧಿಯಲ್ಲಿ ಕಳವು ನಡೆದಿದೆ. ಕಳವಾದ ವಾಹನಗಳ ಒಟ್ಟು ಅಂದಾಜು ಮೌಲ್ಯ 1,72,084 ರೂ.ಗಳು ಎಂದು ಕದ್ರಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.