Shimoga; ಆಪರೇಷನ್ ಕಮಲ ಗ್ಯಾರಂಟಿ; ಎಲ್ಲಾ ಶಾಸಕರು ಬಿಜೆಪಿಗೆ ಬರುತ್ತಾರೆ: ಕೆ.ಎಸ್.ಈಶ್ವರಪ್ಪ


Team Udayavani, Sep 2, 2023, 1:07 PM IST

Shimoga; ಆಪರೇಷನ್ ಕಮಲ ಗ್ಯಾರಂಟಿ; ಎಲ್ಲಾ ಶಾಸಕರು ಬಿಜೆಪಿಗೆ ಬರುತ್ತಾರೆ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ನೂರಕ್ಕೆ ನೂರು ಆಪರೇಷನ್ ಕಮಲ ಆಗುತ್ತದೆ. ಈ ದೇಶದಲ್ಲಿ ಕಾಂಗ್ರೆಸ್ ಗೆ ಭವಿಷ್ಯ ಇಲ್ಲ. ಈಗಾಗಿ ಎಲ್ಲಾ ನಾಯಕರು ಬಿಜೆಪಿಗೆ ಬರುತ್ತಾರೆ ಎಂದು ಮಾಜಿ‌ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಭಾರಿ ದೊಡ್ಡ ಸುದ್ದಿ ಮಾಡುತ್ತಿದೆ. ಬಿಜೆಪಿ ಒಪ್ಪಿಗೆ ಕೊಟ್ಟರೆ ಅರ್ಧ ಶಾಸಕರು ನಮ್ಮ ಪಕ್ಷಕ್ಕೆ ಬರುತ್ತಾರೆ ಎನ್ನುತ್ತಿದ್ದಾರೆ. ಆದರೆ ಒಬ್ಬನೇ ಒಬ್ಬ ಶಾಸಕ ಕಾಂಗ್ರೆಸ್ ಗೆ ಹೋಗಿಲ್ಲ. ಪಾರ್ಲಿಮೆಂಟ್ ಚುನಾವಣೆ ಹಿಂದೆ ಅಥವಾ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವೇ ಇರಲ್ಲ ಎಂದರು.

17 ಜನ ಶಾಸಕರು ಸಮಾಧಾನ ಇಲ್ಲವೆಂದು ನಮ್ಮ ಪಕ್ಷಕ್ಕೆ ‌ಬಂದರು. ರಾಯರೆಡ್ಡಿ ಅವರು ಯಾರೋ ಪಕ್ಷ ಕಟ್ಟಿದ್ದರು, ಯಾರೋ ಅಧಿಕಾರಕ್ಕೆ ಬಂದರು ಅಂದಿದ್ದಾರೆ. ಮುನಿಯಪ್ಪನವರು ಎಲ್ಲಾ ಹಿರಿಯರು ರಾಜೀನಾಮೆ ಕೊಡಬೇಕು ಎಂದಿದ್ದಾರೆ. ಹೀಗಾದ್ರೆ ಸರಕಾರ ಉಳಿಯುತ್ತದಾ. ಎಂ.ಬಿ.ಪಾಟೀಲ್ ಅವರು‌ ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ ಎನ್ನುತ್ತಾರೆ. ಸರಕಾರದ ಬಗ್ಗೆ ಕೆಲವು ಶಾಸಕರ ಅಸಮಾಧಾನವಿದೆ ಎನ್ನುತ್ತಾರೆ. ಡಿಕೆಶಿ ಹೌದು ಅಸಮಾಧಾನ ಇದೆ ನಾವು ಸರಿ ಮಾಡಿಕೊಳ್ಳುತ್ತೇವೆ ಎನ್ನುತ್ತಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಾತಿಗೆ ಒಂದಕ್ಕೊಂದು ಅರ್ಥವೇ ಇಲ್ಲ ಎಂದರು.

ಪ್ರಿಯಾಂಕ ಖರ್ಗೆ ಅಭಿವೃದ್ಧಿ ಮಾಡಲು ಆಗುತ್ತಿಲ್ಲ ಎಂದಿದ್ದಾರೆ. ಅಭಿವೃದ್ಧಿ ‌ಮಾಡಲಾಗದಿದ್ದರೆ ಯಾಕಿದ್ದೀರಿ? ರಾಜೀನಾಮೆ ಕೊಟ್ಟು ಹೋಗಿ. ಒಂದೇ ಒಂದು ಇಲಾಖೆಗೆ ಅಭಿವೃದ್ಧಿಗೆ ಹಣ ಕೊಟ್ಟಿಲ್ಲ. ಇದನ್ನು ಸರಕಾರ ಎಂದು ಕರೆಯಬೇಕೆ ಎಂದು ಪ್ರಶ್ನಿಸಿದರು.

ಕಳೆದ ಸರಕಾರದಲ್ಲಿ ನಡೆದ ಕಾಮಗಾರಿಗೆ ಇನ್ನೂ ‌ಹಣ ಬಿಡುಗಡೆ ಆಗಿಲ್ಲ. ಕೆಲಸ ಪೂರ್ಣವಾಗಿದೆ ಆದರೂ ಹಣ ಬಿಡುಗಡೆಯಾಗಿಲ್ಲ. ಈ ಸರಕಾರ ಪೂರ್ಣ ಭ್ರಷ್ಟಾಚಾರದಿಂದ ಕೂಡಿದೆ. ಬಡವರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದು ಲೋಡ್ ಶೆಡ್ಡಿಂಗ್ ಮಾಡುತ್ತಿದ್ದಾರೆ ಎಂದರು.

ವಿಶೇಷವಾಗಿ ಡಿಕೆಶಿ‌ ಅವರು ಭಂಡತನದ ಸರಕಾರ ನಡೆಸುತ್ತಿದ್ದಾರೆ. ಸಿಕ್ಕಾಪಟ್ಟೆ ಆಸ್ತಿ‌ ಲೂಟಿ ಮಾಡಿ ತಿಹಾರ್ ಜೈಲಿನಲ್ಲಿದ್ದು ಬಂದ ಡಿಕೆ ಶಿವಕುಮಾರ್ ಜನಪ್ರತಿನಿಧಿಗಳಿಗೆ ವೇದಾಂತ ಹೇಳುತ್ತಾರೆ ಎಂದು ಈಶ್ವರಪ್ಪ ತಿವಿದರು.

ಲಾಲ್ ಪ್ರಸಾದ್ ಯಾದವ್ ನಾನು ಸಾಯುವುದರೊಳಗೆ ಮೋದಿ ಇಳಿಯುವುದನ್ನು ನೋಡಬೇಕು ಅಂದಿದ್ದಾರೆ. ನಾನು ಭಗವಂತನಲ್ಲಿ‌ ಪ್ರಾರ್ಥನೆ ಮಾಡ್ತೇನೆ ಲಾಲ್ ಪ್ರಸಾದ್ ಯಾದವ್ ಸಾಯಬಾರದು. ಸೂರ್ಯ ಚಂದ್ರ ಇರೋದು ಎಷ್ಟು ಸತ್ಯವೋ ಮೋದಿ‌ ಮತ್ತೆ ಪ್ರಧಾನಿಯಾಗುವುದು ಅಷ್ಟೇ ಸತ್ಯ. ದೇಶದಲ್ಲಿ I.N.D.I.A ಒಟ್ಟಾಗಲು ಸಾಧ್ಯವಿಲ್ಲ. ಅವರು‌ ಒಮ್ಮತದ ಪ್ರಧಾನಿ ಅಭ್ಯರ್ಥಿ ಘೋಷಿಸಲು ಸಾಧ್ಯವಿಲ್ಲ ಎಂದರು.

ವಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಯಾವಾಗ ಮಾಡಬೇಕು ಎಂಬುದು ನಮಗೆ ಗೊತ್ತಿದೆ. ನಾವು ಮಾಡಿಕೊಳ್ಳುತ್ತೇವೆ. ನಿಮ್ಮ ಪಕ್ಷಕ್ಕೆ ಎರಡು ವರ್ಷ ಎಐಸಿಸಿಗೆ ಅಧ್ಯಕ್ಷರೇ ಇರಲಿಲ್ಲ. ಇನ್ನು ಸರಕಾರ ಬಂದು ಮೂರು ತಿಂಗಳಾಗಿದೆ. ವಿಪಕ್ಷ ನಾಯಕ, ಅಧ್ಯಕ್ಷರಾಗಿ ಮಾಡುತ್ತೇವೆ. ನಮ್ಮ ಎಲ್ಲಾ ಶಾಸಕರು ವಿಪಕ್ಷದ ನಾಯಕರೇ, ಯಾರು ಯಾರಿಗೂ ಕಡಿಮೆಯಿಲ್ಲ ಎಂದರು.

ಟಾಪ್ ನ್ಯೂಸ್

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kb

Land; ಬಗರ್‌ ಹುಕುಂ ಅರ್ಜಿ: ಎರಡು ತಿಂಗಳು ಗಡುವು

Kharge (2)

Karnataka Politics; ದಲಿತ ಸಿಎಂ ಚರ್ಚೆಗೆ ಮತ್ತೆ ರೆಕ್ಕೆಪುಕ್ಕ

1-vara

Dowry; ವರದಕ್ಷಿಣೆ ಕಿರುಕುಳ: ಕುಂದಾಪುರ ಮೂಲದ ಮಹಿಳಾ ಟೆಕಿ ಆತ್ಮಹ *ತ್ಯೆ

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.