Gowri; ಇಂದ್ರಜಿತ್ ಲಂಕೇಶ್ ಪುತ್ರನ ಚೊಚ್ಚಲ ಚಿತ್ರಕ್ಕೆ ಮುಹೂರ್ತ
Team Udayavani, Sep 2, 2023, 3:28 PM IST
ನಿರ್ದೇಶಕ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಈಗ ನಾಯಕ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಸಮರ್ಜಿತ್ ಲಂಕೇಶ್ ನಾಯಕ ನಟನಾಗಿ ಅಭಿನಯಿಸುತ್ತಿರುವ ಹೊಸ ಸಿನಿಮಾಕ್ಕೆ “ಗೌರಿ’ ಎಂದು ಟೈಟಲ್ ಇಡಲಾಗಿದ್ದು, ಸಮರ್ಜಿತ್ ಲಂಕೇಶ್ ಚೊಚ್ಚಲ ಸಿನಿಮಾಕ್ಕೆ ಅವರ ತಂದೆ ಇಂದ್ರಜಿತ್ ಲಂಕೇಶ್ ಅವರೇ ನಿರ್ದೇಶನ ಮಾಡುತ್ತಿದ್ದಾರೆ.
ಇತ್ತೀಚೆಗೆ ಈ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ. ಆದಿಚುಂಚನಗಿರಿ ಮಠದ ಶ್ರೀನಿರ್ಮಲಾ ನಂದನಾಥ ಸ್ವಾಮೀಜಿ ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದು, ಚಿತ್ರೀಕರಣಕ್ಕೆ ಚಾಲನೆ ನೀಡಿದರು.
ಮುಹೂರ್ತದ ಬಳಿಕ ಮಾತನಾಡಿದ ನಾಯಕ ನಟ ಸಮರ್ ಜಿತ್ ಲಂಕೇಶ್, “ಹಲವು ವರ್ಷಗಳಿಂದ ನಟನೆ ಮತ್ತು ಸಿನಿಮಾಕ್ಕೆ ಬೇಕಾದ ತರಬೇತಿ ಮಾಡಿಕೊಳ್ಳುತ್ತಿದ್ದೇನೆ. “ರಂಗಶಂಕರ’, “ನ್ಯೂಯಾರ್ಕ್ ಫಿಲಂ ಅಕಾಡೆಮಿ’ಯಲ್ಲಿ ಅಭಿನಯಕ್ಕೆ ಬೇಕಾದ ತರಬೇತಿ ಪಡೆದುಕೊಂಡಿದ್ದೇನೆ. ಸಿನಿಮಾಕ್ಕೆ ಬೇಕಾದ ಫೈಟ್ಸ್, ಡ್ಯಾನ್ಸ್ ಎಲ್ಲ ಥರದ ತಯಾರಿ ಮಾಡಿಕೊಂಡಿದ್ದೇನೆ. ಜೊತೆಗೆ “ಗರಡಿ’, “ಕರಟಕ ಧಮನಕ’ ಸಿನಿಮಾದಲ್ಲಿ ಯೋಗರಾಜ್ ಭಟ್ ಜೊತೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. ಈ ಸಿನಿಮಾದ ಮೂಲಕ ನಾಯಕನಾಗಿ ಪರಿಚಯವಾಗುತ್ತಿದ್ದಾನೆ. ಸಿನಿಮಾ ಪ್ರೇಕ್ಷಕರಿಗೆ ಇಷ್ಟವಾಗಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾತನಾಡಿ, “ಇದೊಂದು ನೈಜ ಘಟನೆಯಿಂದ ಪ್ರೇರಣೆ ಪಡೆದು ಮಾಡುತ್ತಿರುವ ಸಿನಿಮಾ. ಆ ಘಟನೆಯ ಬಗ್ಗೆ ಈಗಲೇ ಹೆಚ್ಚೇನೂ ಹೇಳಲಾಗದು. ನಾವು ಯಾರಿಗೂ ಕಮ್ಮಿಯಿಲ್ಲ ಎಂದು ಬಯಸುವ ಇಂದಿನ ಜನರೇಶನ್ನ ಯುವಕರ ಮನಸ್ಥಿತಿ ಮತ್ತು ಇಂದಿನ ಯವಕರಿಗೆ ಪ್ರೇರಣೆಯಾಗುವಂಥ ಸಿನಿಮಾ ಇದಾಗಲಿದೆ. 2005ರಲ್ಲಿ “ಐಶ್ವರ್ಯ’ ಸಿನಿಮಾ ಮೂಲಕ ದೀಪಿಕಾ ಪಡುಕೋಣೆ ಅವರನ್ನು ನಾಯಕಿಯಾಗಿ ಪರಿಚಯಿಸಲಾಗಿತ್ತು. “ಗೌರಿ’ ಸಿನಿಮಾದ ಮೂಲಕ ಸಮರ್ಜಿತ್ ಮತ್ತು ಸಾನ್ಯಾ ಅಯ್ಯರ್ ಇಬ್ಬರು ನವ ಕಲಾವಿದರನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದೇನೆ. ನನ್ನ ಸೋದರಿ ಗೌರಿ ಲಂಕೇಶ್ ಮೇಲಿನ ಪ್ರೀತಿಯಿಂದ ಈ ಸಿನಿಮಾಕ್ಕೆ “ಗೌರಿ’ ಅಂಥ ಹೆಸರಿಡಲಾಗಿದೆ’ ಎಂದರು.
ಸಿನಿಮಾ ದಲ್ಲಿ ಸಮರ್ಜಿತ್ ಗೆ ನಾಯಕಿಯಾಗಿ ಕಿರುತೆರೆಯ” ಪುಟ್ಟಗೌರಿಯ ಮದುವೆ’ ಧಾರಾವಾಹಿ ಖ್ಯಾತಿಯ ಸಾನ್ಯಾ ಅಯ್ಯರ್ ನಾಯಕಿಯಾಗಿ ಅಭಿನಯಿ ಸುತ್ತಿದ್ದಾರೆ. “ಚಿಕ್ಕ ವಯಸ್ಸಿ ನಿಂದಲೂ ನಟಿಯಾ ಗಬೇಕೆಂಬ ಕನಸಿತ್ತು. ಆ ಕನಸು ಈ ಸಿನಿಮಾದ ಮೂಲಕ ನನಸಾಗುತ್ತಿದೆ. ಇಂದ್ರಜಿತ್ ಲಂಕೇಶ್ ಅವರಂಥ ಸ್ಟಾರ್ ನಿರ್ದೇಶರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿರುವುದಕ್ಕೆ ಖುಷಿಯಾಗುತ್ತಿದೆ. ಪ್ರೇಕ್ಷಕರಿಗೆ ಇಷ್ಟವಾಗುವಂಥ ಸಿನಿಮಾ ಬರಲಿದೆ’ ಎಂಬುದು ನಾಯಕಿ ಸಾನ್ಯಾ ಅಯ್ಯರ್ ಮಾತು.
ಮುಹೂರ್ತದ ವೇಳೆ ಹಾಜರಿದ್ದ ನಟಿ ಮಾನಸಿ ಸುಧೀರ್, ಸಂಭಾಷಣೆಕಾರ ಬಿ. ಎ. ಮಧು, ಮಾಸ್ತಿ, ಚಿತ್ರ ಸಾಹಿತಿ ಕವಿರಾಜ್, ನಿರ್ಮಾಪಕಿ ಅರ್ಪಿತಾ ಲಂಕೇಶ್, ವಕೀಲ ಶ್ಯಾಮ್ ಸುಂದರ್, ಆನಂದ್ ಆಡಿಯೋ ಶ್ಯಾಮ್ ಮೊದಲಾದವರು ಸಿನಿಮಾದ ಬಗ್ಗೆ ಮಾತನಾಡಿದರು.
“ಗೌರಿ’ ಸಿನಿಮಾಕ್ಕೆ ಎ. ಜೆ ಶೆಟ್ಟಿ ಛಾಯಾಗ್ರಹಣ, ಕೆ. ಎಂ. ಪ್ರಕಾಶ್ ಸಂಕಲನವಿದೆ. ಇದೇ ಸೆಪ್ಟೆಂಬರ್ನಿಂದ “ಗೌರಿ’ ಸಿನಿಮಾದ ಶೂಟಿಂಗ್ ಆರಂಭವಾಗಲಿದ್ದು, ಮುಂದಿನ ಮಾರ್ಚ್ ವೇಳೆಗೆ ಸಿನಿಮಾ ತೆರೆಗೆ ತರುವ ಯೋಜನೆಯಿದೆ. ಕರ್ನಾಟಕದ ಹಲವು ಭಾಗಗಳಲ್ಲಿ ಸಿನಿಮಾದ ಚಿತ್ರೀಕರಣ ನಡೆಯಲಿದೆ ಎಂಬುದು ಚಿತ್ರತಂಡ ಮಾಹಿತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.