![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 3, 2023, 12:13 AM IST
ಮಂಡ್ಯ: ತಮಿಳುನಾಡಿಗೆ ನಿರಂತರ ನೀರು ಹರಿಸುತ್ತಿರುವ ಪರಿಣಾಮ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 99.70 ಅಡಿಗೆ ಇಳಿದಿದೆ. ಅಲ್ಲದೆ ಇನ್ನೂ ನೀರು ಹರಿಸುತ್ತಿರು ವುದರಿಂದ ಮತ್ತಷ್ಟು ಕಡಿಮೆಯಾಗುವ ಭೀತಿ ತಲೆದೋರಿದ್ದು, ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಕೃಷಿ ಹಾಗೂ ಕುಡಿಯುವ ನೀರಿನ ಅಭಾವ ಉಂಟಾಗುವ ಆತಂಕ ತಲೆದೋರಿದೆ.
ಶನಿವಾರ ರಾತ್ರಿ 8 ಗಂಟೆಯವರೆಗಿನ ಮಾಹಿತಿ ಯಂತೆ, ನದಿ ಹಾಗೂ ನಾಲೆಗೆ 6,218 ಕ್ಯುಸೆಕ್ ನೀರಿನ ಹೊರಹರಿವು ಹಾಗೂ ಅಣೆಕಟ್ಟೆಗೆ 3,421 ಕ್ಯುಸೆಕ್ ಒಳಹರಿವು ದಾಖಲಾಗಿತ್ತು. 124.80 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ ಕಳೆದ ಜು. 3ರಂದು 78.30 ಅಡಿ ಇದ್ದ ನೀರಿನ ಮಟ್ಟ ಕೊಡಗಿನಲ್ಲಿ ಉತ್ತಮ ಮಳೆಯಾಗಿ 113 ಅಡಿಗಳಿಗೆ ಅಂದರೆ 35 ಅಡಿಗಳಷ್ಟು ಏರಿಕೆ ಕಂಡಿತ್ತು. ಬಳಿಕ ತಮಿಳು ನಾಡಿಗೆ ಹೆಚ್ಚು ನೀರುಹರಿಸಿದ ಪರಿಣಾಮ ವಾಗಿ ನೀರಿನ ಮಟ್ಟ 14 ಅಡಿಗಳಷ್ಟು ಕುಸಿದಿದೆ. ಕಳೆದ ವರ್ಷ ಇದೇ ದಿನ 124.56 ಅಡಿ ನೀರಿನ ಮಟ್ಟ, 26,814 ಕ್ಯುಸೆಕ್ ಒಳಹರಿವು ಹಾಗೂ 18,529 ಕ್ಯುಸೆಕ್ ಹೊರಹರಿವು ದಾಖ ಲಾಗಿತ್ತು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.