![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 3, 2023, 1:05 PM IST
ಮುಂಬಯಿ: ʼಕಾಂತಾರʼ ಮೂಲಕ ಪ್ಯಾನ್ ಇಂಡಿಯಾದಲ್ಲಿ ಮೋಡಿ ಮಾಡಿದ ನಟ- ನಿರ್ದೇಶಕ ರಿಷಬ್ ಶೆಟ್ಟಿ ಸದ್ಯ ʼಕಾಂತಾರ-2ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಕಾಂತಾರ ಸಿನಿಮಾದ ಬಳಿಕ ರಿಷಬ್ ಶೆಟ್ಟಿ ಅವರ ಬೇಡಿಕೆ ಹೆಚ್ಚಾಗಿದೆ. ಅನ್ಯ ಭಾಷೆಯಿಂದಲೂ ಅವರಿಗೆ ಆಫರ್ ಗಳು ಬರುತ್ತಿದೆ.
ರಿಷಬ್ ಶೆಟ್ಟಿ ಅವರು ಬಾಲಿವುಡ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಬಗ್ಗೆ ʼಪಿಂಕ್ ವಿಲ್ಲಾʼದ ವರದಿಯೊದು ತಿಳಿಸಿದೆ.
ಬಾಲಿವುಡ್ ನಲ್ಲಿ ʼಲಗಾನ್ʼ ʼಸ್ವದೇಸ್ʼ, ʼಜೋಧಾ ಅಕ್ಬರ್ʼ, ಹಾಗೂ ʼಖೇಲಿನ್ ಹಮ್ ಜೀ ಜಾನ್ ಸೆʼ ಮುಂತಾದ ಸಿನಿಮಾಗಳನ್ನು ಮಾಡಿರುವ ಖ್ಯಾತ ನಿರ್ದೇಶಕ ಅಶುತೋಷ್ ಗೋವಾರಿಕರ್ ಅವರು ಕನ್ನಡದ ʼಡಿವೈನ್ ಸ್ಟಾರ್ʼ ರಿಷಬ್ ಶೆಟ್ಟಿ ಅವರೊಂದಿಗೆ ಪ್ಯಾನ್ ಇಂಡಿಯಾ ಸಿನಿಮಾ ಮಾಡಲಿದ್ದಾರೆ ಎಂದು ʼಪಿಂಕ್ ವಿಲ್ಲಾʼ ವರದಿ ಮಾಡಿದೆ.
ಇದನ್ನೂ ಓದಿ: Zimbabwe; ಕ್ಯಾನ್ಸರ್ ಹೋರಾಟದಲ್ಲಿ ಕೊನೆಯುಸಿರೆಳೆದ ದಿಗ್ಗಜ ಆಲ್ ರೌಂಡರ್ ಹೀತ್ ಸ್ಟ್ರೀಕ್
“ಅಶುತೋಷ್ ಸ್ಥಳೀಯ ಬೇರಿನ ಕಥೆಯೊಂದನ್ನು ತೆರೆ ಮೇಲೆ ತರುವ ತಯಾರಿಯಲ್ಲಿದ್ದಾರೆ. ಈ ಕಥೆಗೆ ರಿಷಬ್ ಅವರು ಸೂಕ್ತವೆನ್ನುವ ಕಾರಣಕ್ಕೆ ಅವರೊಂದಿಗೆ ಅಶುತೋಷ್ ಮಾತನಾಡಿದ್ದಾರೆ. ಈ ಕಾರಣದಿಂದ ಹಲವು ಬಾರಿ ರಿಷಬ್ ಅವರನ್ನು ಅಶುತೋಷ್ ಭೇಟಿಯಾಗಿದ್ದಾರೆ. ಈ ಭೇಟಿಯಲ್ಲಿ ಇಬ್ಬರು ಅತ್ಯುತ್ತಮವಾಗಿ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಬರಹಗಾರರಾಗಿರುವ ರಿಷಬ್ ಅಶುತೋಷ್ ಅವರೊಂದಿಗೆ ಸ್ಕ್ರಿಪ್ಟ್ನಲ್ಲಿ ಉತ್ತಮವಾಗಿ ಸಹಕರಿಸಿದ್ದಾರೆ ಮತ್ತು ಇಬ್ಬರೂ ಈಗ ಮೊದಲ ಬಾರಿಗೆ ಒಟ್ಟಿಗೆ ಕೆಲಸ ಮಾಡಲು ರೆಡಿಯಾಗಿದ್ದಾರೆ” ಎಂದು ಮೂಲವೊಂದು ತಿಳಿಸಿರುವುದಾಗಿ ವರದಿ ತಿಳಿಸಿದೆ.
ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಲಿದೆ. ಸ್ಕ್ರಿಪ್ಟ್ ಲಾಕ್ ಅಂತಿಮವಾಗಿದ್ದು, ಮುಂದಿನ ಎರಡು ತಿಂಗಳಲ್ಲಿ ಅಶುತೋಷ್ ಚಿತ್ರವನ್ನು ಪ್ರಿ-ಪ್ರೊಡಕ್ಷನ್ ಹಂತ ಆರಂಭವಾಗಲಿದೆ. 2024 ರ ಮಧ್ಯದ ವೇಳೆಗೆ ಈ ಯೋಜನೆ ಆರಂಭವಾಗಲಿದೆ. ʼಕಾಂತಾರ-2ʼ ಶೂಟಿಂಗ್ ಮುಗಿದ ಬಳಿಕ ಈ ಸಿನಿಮಾದ ಕೆಲಸ ಆರಂಭವಾಗಲಿದೆ” ಎಂದು ವರದಿ ತಿಳಿಸಿದೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.