Chandrayaan- 3: ಚಂದ್ರನಲ್ಲಿ ಸೂರ್ಯಾಸ್ತ; ಸುಷುಪ್ತ ಸ್ಥಿತಿಗೆ ಪ್ರಜ್ಞಾನ್‌ ರೋವರ್‌

- ಸೆ.22ರಂದು ಎಚ್ಚರಗೊಳ್ಳುವ ನಿರೀಕ್ಷೆ: ಇಸ್ರೋ

Team Udayavani, Sep 3, 2023, 8:14 PM IST

rover chandrayan

ನವದೆಹಲಿ: ಚಂದಿರನ ಮೇಲ್ಮೈನಲ್ಲಿ ತನಗೆ ವಹಿಸಲಾಗಿದ್ದ ಕೆಲಸವನ್ನು ಪೂರ್ಣಗೊಳಿಸಿರುವ ಪ್ರಜ್ಞಾನ್‌ ರೋವರ್‌ ಭಾನುವಾರ ಸುಷುಪ್ತ ಸ್ಥಿತಿಗೆ ಜಾರಿದೆ. ಶಶಾಂಕನಲ್ಲಿ ಸೂರ್ಯಾಸ್ತವಾಗುತ್ತಿದ್ದಂತೆ ರೋವರ್‌ ಅನ್ನು “ಸ್ಲೀಪ್‌ಮೋಡ್‌”ಗೆ ಹಾಕಲಾಗಿದ್ದು, 14 ದಿನಗಳ ಬಳಿಕ ಅದು ಮತ್ತೆ ಸಚೇತನಗೊಳ್ಳುವ ನಿರೀಕ್ಷೆಯನ್ನು ಇಸ್ರೋ ಇಟ್ಟುಕೊಂಡಿದೆ.

ಪ್ರಜ್ಞಾನ್‌ ರೋವರ್‌ನಲ್ಲಿ ಆಲ್ಫಾ ಪಾರ್ಟಿಕಲ್‌ ಎಕ್ಸ್‌-ರೇ ಸ್ಪೆಕ್ಟ್ರೋಮೀಟರ್‌ ಮತ್ತು ಲೇಸರ್‌ ಇನ್‌ಡ್ಯೂಸ್ಡ್ ಬ್ರೇಕ್‌ಡೌನ್‌ ಸ್ಪೆಕ್ಟ್ರೋಸ್ಕೋಪ್‌ ಎಂಬ ಎರಡು ಪೇಲೋಡ್‌ಗಳಿದ್ದು, ಲ್ಯಾಂಡರ್‌ ಮೂಲಕ ಭೂಮಿಗೆ ದತ್ತಾಂಶಗಳನ್ನು ರವಾನಿಸುತ್ತಿದ್ದ ಈ ಎರಡೂ ಪೇಲೋಡ್‌ಗಳನ್ನು ಭಾನುವಾರ ಆಫ್ ಮಾಡಲಾಗಿದೆ ಎಂದು ಇಸ್ರೋ ತಿಳಿಸಿದೆ.

ಈ ಕುರಿತು ಎಕ್ಸ್‌ನಲ್ಲಿ (ಟ್ವಿಟರ್‌) ಮಾಹಿತಿ ನೀಡಿರುವ ಇಸ್ರೋ, “ರೋವರ್‌ ತನ್ನ ಕೆಲಸವನ್ನು ಪೂರ್ಣಗೊಳಿಸಿದೆ. ಈಗ ಅದನ್ನು ಸುರಕ್ಷಿತವಾಗಿ ನಿಲುಗಡೆ ಮಾಡಲಾಗಿದ್ದು, ಸುಷುಪ್ತಿಗೆ ತರಲಾಗಿದೆ. ಪೇಲೋಡ್‌ನ‌ಲ್ಲಿದ್ದ ದತ್ತಾಂಶಗಳನ್ನು ಲ್ಯಾಂಡರ್‌ ಮೂಲಕ ಭೂಮಿಗೆ ರವಾನಿಸಲಾಗಿದೆ’ ಎಂದು ಹೇಳಿದೆ.

“ಪ್ರಸ್ತುತ, ಅದರ ಬ್ಯಾಟರಿ ಪೂರ್ಣ ಪ್ರಮಾಣದಲ್ಲಿ ಚಾರ್ಜ್‌ ಆಗಿದೆ. ಸೆ.22ರಂದು ಚಂದ್ರನಲ್ಲಿ ಮುಂದಿನ ಸೂರ್ಯೋದಯವಾಗಲಿದೆ. ಅಂದು ಪ್ರಜ್ಞಾನ್‌ನಲ್ಲಿರುವ ಸೌರ ಫ‌ಲಕಗಳು ಸೂರ್ಯನ ಬೆಳಕನ್ನು ಸ್ವೀಕರಿಸಲಿವೆ. 14 ದಿನಗಳ ಬಳಿಕ ಪ್ರಜ್ಞಾನ್‌ ಎಚ್ಚರಗೊಂಡರೆ ಮತ್ತಷ್ಟು ಕಾರ್ಯಾಚರಣೆಗಳನ್ನು ನಡೆಸಲಿದೆ. ಎಚ್ಚರಗೊಳ್ಳುವಲ್ಲಿ ವಿಫ‌ಲವಾದರೆ, ಅದು “ಚಂದ್ರನಲ್ಲಿನ ಭಾರತದ ರಾಯಭಾರಿ’ಯಾಗಿ ಸದಾಕಾಲ ಶಶಾಂಕನ ಮಡಿಲಲ್ಲೇ ಉಳಿಯಲಿದೆ’ ಎಂದೂ ಇಸ್ರೋ ತಿಳಿಸಿದೆ.

ಸ್ಲೀಪ್‌ಮೋಡ್‌ಗೆ ಜಾರಿದ್ದೇಕೆ?
ವಿಕ್ರಮ್‌ ಮತ್ತು ಪ್ರಜ್ಞಾನ್‌ ಎರಡೂ ಸೌರಶಕ್ತಿಯಿಂದಲೇ ಕಾರ್ಯನಿರ್ವಹಿಸುತ್ತಿದ್ದು, ಸೂರ್ಯನ ಬೆಳಕು ಇರುವವರೆಗೆ ಮಾತ್ರ ಅವು ಕೆಲಸ ಮಾಡಬಲ್ಲವು. ಚಂದ್ರನ ಒಂದು ದಿನ ಭೂಮಿಯಲ್ಲಿ 14 ದಿನಗಳಿಗೆ ಸಮಾನ. ಭಾನುವಾರ ಚಂದ್ರನಲ್ಲಿ ಒಂದು ದಿನ ಮುಗಿದು, ಸೂರ್ಯ ಮುಳುಗಿದ್ದಾನೆ. ಹೀಗಾಗಿ, ಲ್ಯಾಂಡರ್‌ ಮತ್ತು ರೋವರ್‌ ಕಾರ್ಯಾಚರಣೆ ಸ್ಥಗಿತಗೊಂಡಿದೆ.

ಆದಿತ್ಯ ಎಲ್‌1 ಕಕ್ಷೆ ಎತ್ತರಿಸುವ ಮೊದಲ ಹಂತದ ಪ್ರಕ್ರಿಯೆ ಯಶಸ್ವಿ
– ನಾಳೆ ನಡೆಯಲಿದೆ ಎರಡನೇ ಹಂತದ ಪ್ರಕ್ರಿಯೆ

ಭಾರತದ ಚೊಚ್ಚಲ ಸೌರಯಾನವಾದ ಆದಿತ್ಯ ಎಲ್‌1ರ ಕಕ್ಷೆ ಎತ್ತರಿಸುವ ಮೊದಲ ಹಂತದ ಪ್ರಕ್ರಿಯೆಯನ್ನು ಭಾನುವಾರ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಉಪಗ್ರಹವು ಸುಸ್ಥಿತಿಯಲಿದ್ದು, ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಇಸ್ರೋ ಮಾಹಿತಿ ನೀಡಿದೆ. ಸೆ.5ರಂದು ಅಂದರೆ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಐಎಸ್‌ಟಿಆರ್‌ಎಸಿ(ಇಸ್ರೋ ಟೆಲಿಮೆಟ್ರಿ, ಟ್ರ್ಯಾಕಿಂಗ್‌ ಆ್ಯಂಡ್‌ ಕಮಾಂಡ್‌ ನೆಟ್‌ವರ್ಕ್‌)ಯಿಂದ 2ನೇ ಹಂತದ ಕಕ್ಷೆ ಎತ್ತರಿಸುವ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ ಎಂದೂ ಎಕ್ಸ್‌ನಲ್ಲಿ(ಟ್ವಿಟರ್‌) ಇಸ್ರೋ ಬರೆದುಕೊಂಡಿದೆ. ಶನಿವಾರವಷ್ಟೇ ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಆದಿತ್ಯ ಎಲ್‌1 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಸೂರ್ಯ ಮತ್ತು ಭೂಮಿಯ ನಡುವಿನ ಲಾಗ್ರೇಂಜ್‌ 1 ಬಿಂದುವಿನಲ್ಲಿ ದೇಶದ ಮೊದಲ ಅಂತರಿಕ್ಷ ವೀಕ್ಷಣಾಲಯವನ್ನು ನಿಲ್ಲಿಸಿ, ಸೂರ್ಯನ ಹೊರ ವಾತಾವರಣವನ್ನು ಅಧ್ಯಯನ ಮಾಡುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಆದಿತ್ಯ ಎಲ್‌1 ಭೂಮಿಯಿಂದ ಸುಮಾರು 15 ಲಕ್ಷ ಕಿ.ಮೀ. ದೂರದಲ್ಲಿ ಸೂರ್ಯನಿಗೆ ಮುಖ ಮಾಡಿಕೊಂಡು ಕಾರ್ಯಾಚರಿಸಲಿದೆ ಎಂದು ಇಸ್ರೋ ಹೇಳಿದೆ.

 

ಟಾಪ್ ನ್ಯೂಸ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.