Isro Scientist: ಚಂದ್ರಯಾನ-3 ಉಡಾವಣೆ ಕೌಂಟ್ಡೌನ್ ಹಿಂದಿನ ಧ್ವನಿಯಾಗಿದ್ದ ವಿಜ್ಞಾನಿ ನಿಧನ
ಕೌಂಟ್ಡೌನ್ ನಿಲ್ಲಿಸಿದ ಇಸ್ರೋ ವಿಜ್ಞಾನಿ
Team Udayavani, Sep 4, 2023, 8:45 AM IST
ಆಂಧ್ರಪ್ರದೇಶ : ಶ್ರೀಹರಿಕೋಟಾದಲ್ಲಿ ರಾಕೆಟ್ ಉಡಾವಣೆ ಕ್ಷಣಗಣನೆ ಸಂದರ್ಭ ಧ್ವನಿ ನೀಡಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿ ವಲರ್ಮತಿ ಅವರು ಹೃದಯ ಸ್ತಂಭನದಿಂದ ನಿಧನರಾದರು. ಅವರಿಗೆ ಐವತ್ತು ವರ್ಷ ವಯಸ್ಸಾಗಿತ್ತು.
ಜುಲೈ 14 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3 ಅನ್ನು ಉಡಾವಣೆ ಮಾಡಲಾಯಿತು. ಈ ವೇಳೆ ವಿಜ್ಞಾನಿ ವಲಮರ್ತಿ ಅವರು ಚಂದ್ರಯಾನ-3 ಉಡಾವಣೆಯ ಸಂದರ್ಭದಲ್ಲಿ ಧ್ವನಿ ನೀಡಿದ್ದರು.
ಇಸ್ರೋದಲ್ಲಿ, ರಾಕೆಟ್ ಉಡಾವಣೆ ಸಮಯದಲ್ಲಿ ಕೌಂಟ್ಡೌನ್ಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಕೌಂಟ್ ಡೌನ್ ಕರ್ತವ್ಯವನ್ನು ತಮ್ಮ ಗಂಭೀರ ಧ್ವನಿಯಿಂದ ನಿರ್ವಹಿಸಿದ ಉದ್ಯೋಗಿ ವಲರ್ಮತಿ ಅವರು ಶನಿವಾರ ರಾತ್ರಿ ಚೆನ್ನೈನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.
ವಲರ್ಮತಿ ಅವರು ಚಂದ್ರಯಾನ-3 ಸೇರಿದಂತೆ ಇಸ್ರೋ ಕೈಗೊಂಡ ಅನೇಕ ಪ್ರಯೋಗಗಳ ಉಸ್ತುವಾರಿ ವಹಿಸಿದ್ದರು. ಆದಾಗ್ಯೂ, ಜುಲೈ 14 ರಂದು ಅತ್ಯಂತ ಯಶಸ್ವಿಯಾದ ಚಂದ್ರಯಾನ-3 ಉಡಾವಣೆಯು ಅವರ ಕೊನೆಯ ಧ್ವನಿಯಾಗಿತ್ತು.
ವಲರ್ಮತಿ ಅವರ ನಿಧಾನಕ್ಕೆ ಇಸ್ರೋ ವಿಜ್ಞಾನಿಗಳು ಕಂಬನಿ ಮಿಡಿದಿದ್ದಾರೆ.
ತಮಿಳುನಾಡಿನ ಅರಿಯಲೂರಿನಲ್ಲಿ 1959 ರಲ್ಲಿ ಜನಿಸಿದ ವಲರ್ಮತಿ ,1984 ರಿಂದ ಇಸ್ರೋ ವಿಜ್ಞಾನಿಯಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದಾರೆ.
ಇಸ್ರೋದಲ್ಲಿ ಉಡಾವಣೆಯಾದ ರಾಕೆಟ್ ಪ್ರಯೋಗಗಳ ಉಡಾವಣೆ ಕ್ಷಣಗಣನೆಯನ್ನು ಅವರು ಹೇಳುತ್ತಿದ್ದರು. ಹೀಗಾಗಿ ಆಕೆಯ ವಿಶಿಷ್ಟ ಧ್ವನಿ ದೇಶದ ಜನತೆಗೆ ಪರಿಚಿತವಾಯಿತು. ಅವರು 2015 ರಲ್ಲಿ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಹೆಸರಿನಲ್ಲಿ ಮೊದಲ ಬಾರಿಗೆ ಪ್ರಶಸ್ತಿಯನ್ನು ಪಡೆದರು. ಇಸ್ರೋದಿಂದ ನಿವೃತ್ತರಾದ ಅವರು ಶನಿವಾರ ಸಂಜೆ ಹೃದಯಾಘಾತದಿಂದ ಚೆನ್ನೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಇದನ್ನೂ ಓದಿ: Chikkamagaluru: ಹಳೇ ವೈಷಮ್ಯದ ಹಿನ್ನೆಲೆ ಕ್ರಿಕೆಟ್ ಆಡುವಾಗ ಕಿರಿಕ್; ಯುವಕನಿಗೆ ಚಾಕು ಇರಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…
Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ
Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…
Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ
Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.