Sanatan ಧರ್ಮದ ಶುದ್ಧೀಕರಣ ಆಗಬೇಕಿದೆ : ಸಚಿವ ಡಾ|ಎಚ್.ಸಿ. ಮಹದೇವಪ್ಪ
ಭಾರತದ ನೆಲದಲ್ಲಿ ಯಾವುದೇ ಧರ್ಮವೂ ಮೇಲಲ್ಲ...
Team Udayavani, Sep 4, 2023, 8:20 PM IST
ದಾವಣಗೆರೆ: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆ ಕುರಿತು ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ವೇಳೆಯಲ್ಲಿ ‘ಸನಾತನ ಧರ್ಮದ ಶುದ್ಧೀಕರಣ ಆಗಬೇಕಿದೆ’ಎಂದು ಸಮಾಜ ಕಲ್ಯಾಣ ಸಚಿವ ಡಾ|ಎಚ್.ಸಿ. ಮಹ ದೇವಪ್ಪ ಪ್ರತಿಪಾದಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸನಾತನ ಧರ್ಮದಲ್ಲಿ ಶೂದ್ರರಿಗೆ ಓದುವುದನ್ನು ಕಲಿಸಿರಲಿಲ್ಲ. ಲಾರ್ಡ್ ಮೆಕಾಲೆ ಬಂದ ನಂತರ ಎಲ್ಲರೂ ವ್ಯಾಪಕವಾಗಿ ವಿದ್ಯೆ ಕಲಿತರು. ಅಂಬೇಡ್ಕರ್ ಇಲ್ಲದಿದ್ದರೆ ಹೇಗೆ ಇಂಗ್ಲಿಷ್ ಓದಲು ಸಾಧ್ಯವಾಗುತ್ತಿತ್ತು ಎಂದು ಪ್ರಶ್ನಿಸಿದರು.
ಅನೇಕ ವರ್ಷಗಳ ಹಿಂದೆ ಶೂದ್ರರ ಮಕ್ಕಳನ್ನು ಓದಿಸಿದರೆ ಕಾಯಿಸಿದ ಎಣ್ಣೆಯನ್ನು ಬಿಡುತ್ತಿದ್ದರು. ಯಾಕೆ ಹೀಗೆ ಮಾಡುತ್ತಿದ್ದರು.ಅದಕ್ಕಾಗಿಯೇ ಅಂಬೇಡ್ಕರ್ ಅವರು ಮನುವಾದವನ್ನು ಸುಟ್ಟು ಹಾಕಿದ್ದರು. ಭಾರತದ ನೆಲದಲ್ಲಿ ಯಾವುದೇ ಧರ್ಮವೂ ಮೇಲಲ್ಲ. ಎಲ್ಲ ಧರ್ಮಗಳೂ ಸಂವಿಧಾನದಡಿಯೇ ಬರುತ್ತವೆ. ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗಬೇಕೆಂಬ ಉದ್ದೇಶ ಪೀಠಿಕೆಯದ್ದಾಗಿದೆ ಎಂದು ತಿಳಿಸಿದರು.
ಒಂದು ರಾಷ್ಟ್ರ ಒಂದು ಚುನಾವಣೆ… ಪ್ರಜಾಪ್ರಭುತ್ವದ ಕತ್ತು ಹಿಸುಕುವ ಕೆಲಸ. ಒಂದು ರಾಷ್ಟ್ರ ಒಂದು ಚುನಾವಣೆ ಹೇಗೆ ಸಾಧ್ಯವಾಗುತ್ತದೆ. ಕರ್ನಾಟಕದ ವಿಧಾನಸಭೆ ಚುನಾವಣೆ ಆಗಿ ಮೂರು ತಿಂಗಳಷ್ಟೇ ಕಳೆದಿದೆ. ಮತ್ತೆ ಚುನಾವಣೆ ಹೇಗೆ ಎಂದು ಪ್ರಶ್ನಿಸಿದರು.
ಉಚಿತ ಯೋಜನೆಗಳಿಂದ ದೇಶ ದಿವಾಳಿಯಾಗುತ್ತೆ ಎನ್ನುವವರು ಅದಾನಿ, ಅಂಬಾನಿ ಸಾಲ ಮನ್ನಾ ಮಾಡಿದರೆ ದೇಶ ದಿವಾಳಿ ಆಗುವುದಿಲ್ಲವೇ. ಉಚಿತ ಯೋಜನೆಗಳಿಂದ ಬಡವರಿಗೆ, ಕಡು ಬಡುವರಿಗೆ, ಅಸಹಾಯಕರಿಗೆ ಅನುಕೂಲ ಆಗುತ್ತದೆ ಎಂದು ತಿಳಿಸಿದರು.
ಸರ್ಕಾರದ ಐದು ಗ್ಯಾರಂಟಿ ಭರವಸೆಗಳಿಂದಾಗಿ 1.32 ಕೋಟಿ ಬಡ ಜನರಿಗೆ ಯೋಜನೆ ತಲುಪುತ್ತಿವೆ. ಅದರಿಂದ ಅಂತಹ ಜನರು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ.ಮೋದಿ ಸೇರಿದಂತೆ ಬಿಜೆಪಿಯವರೇನು ಎಮ್ಮೆಗಳ ಮೈ ಉಜ್ಜಿದ್ದಾರಾ… ಎಂದು ಖಾರವಾಗಿ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.