![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 4, 2023, 11:26 PM IST
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸೆ.8ರಿಂದ ಅಸಹಕಾರ ಚಳವಳಿಗೆ ಕರೆ ನೀಡಿದ್ದ ಬೆನ್ನಲ್ಲೇ 99 ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳನ್ನು ವರ್ಗಾಯಿಸಿ ಪಂಚಾಯತ್ರಾಜ್ ಇಲಾಖೆ ಆದೇಶಿಸಿದೆ.
ಪಿಡಿಒ ಹುದ್ದೆಗಳು ಸೃಷ್ಟಿಯಾಗಿ 13 ವರ್ಷ ಕಳೆದರೂ ಕ್ರಮಬದ್ಧವಾಗಿ ಜ್ಯೇಷ್ಠತಾ ಪಟ್ಟಿ ಅಂತಿಮಗೊಳ್ಳದೆ ಇರುವುದರಿಂದ ಭಡ್ತಿ ಮತ್ತು ವರ್ಗಾವಣೆ ಪ್ರಕ್ರಿಯೆಯಲ್ಲಿ ಗೊಂದಲಗಳಾಗುತ್ತಿವೆ.
ಪಿಡಿಒ ಹುದ್ದೆಗಳನ್ನು ಗ್ರೂಪ್ ಬಿ ಶ್ರೇಣಿಗೆ ಉನ್ನತೀಕರಿ ಸಬೇಕೆಂಬ ಬೇಡಿಕೆಯೂ ಇದ್ದು, ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯ ದರ್ಶಿ ಉಮಾ ಮಹದೇವನ್ಗೆ ಪಿಡಿಒ ಕ್ಷೇಮಾಭಿವೃದ್ಧಿ ಸಂಘ ಬೇಡಿಕೆ ಪತ್ರ ಸಲ್ಲಿಸಿತ್ತು.
ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಸೆ.8ರಂದು ಇಲಾಖೆಯ ವಾಟ್ಸ್ಆಪ್ ಗ್ರೂಪ್ಗ್ಳಿಂದ ಹೊರಬರುವ ಮೂಲಕ ಅಸಹಕಾರ ಚಳವಳಿ ಆರಂಭಿಸಲು ಚಿಂತನೆ ನಡೆದಿತ್ತಲ್ಲದೆ, ಹಿರಿಯ ಅಧಿಕಾರಿಗಳ ಸಭೆಗೆ ಗೈರಾಗುವುದು, ಆನ್ಲೈನ್ ಸೇವೆ ಸ್ಥಗಿತಗೊಳಿಸುವ ಯೋಚನೆಯೂ ಇತ್ತು. ಇಷ್ಟಾದರೂ ಸರಕಾರ ಮಣಿಯದಿದ್ದರೆ, ಸೆ.14ರಿಂದ ಪಂಚಾಯತ್ರಾಜ್ ಆಯುಕ್ತಾಲಯದ ಎದುರು ಅನಿರ್ದಿಷ್ಟಾವಧಿ ಮುಷ್ಕರ ಹೂಡುವ ಎಚ್ಚರಿಕೆಯನ್ನೂ ನೀಡಿತ್ತು.
ಇದರ ಬೆನ್ನಲ್ಲೇ ರಾಜ್ಯಾದ್ಯಂತ 99 ಪಿಡಿಒಗಳನ್ನು ಎತ್ತಂಗಡಿ ಮಾಡಲಾಗಿದ್ದು, ವರ್ಗಾವಣೆ ಆದೇಶದಿಂದ ಬಾಧಿತರಾಗುವ ಪಿಡಿಒಗಳು ಮುಂದಿನ ಸ್ಥಳ ನಿಯುಕ್ತಿಗಾಗಿ ಆಯಾ ಜಿಲ್ಲಾ ಪಂಚಾಯತ್ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವರದಿ ಮಾಡಿಕೊಳ್ಳಬೇಕು. ಮುಂದಿನ ಸ್ಥಳ ನಿಯುಕ್ತಿಗಾಗಿ ಪಂಚಾಯತ್ರಾಜ್ ಆಯುಕ್ತಾಲಯಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಪಂ ಸಿಇಒಗಳಿಗೆ ಆದೇಶದಲ್ಲಿ ನಿರ್ದೇಶನ ನೀಡಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.