ಸಿಎಂ ನೇತೃತ್ವದಲ್ಲಿ ನಾನಾ ಇಲಾಖೆಗಳ ಭೌತಿಕ, ಆರ್ಥಿಕ ಪ್ರಗತಿ ಸಭೆ

54,374 ಕೋ. ರೂ.ಬಂಡವಾಳ ವೆಚ್ಚಕ್ಕೆ ಸೂಚನೆ

Team Udayavani, Sep 4, 2023, 11:53 PM IST

ಸಿಎಂ ನೇತೃತ್ವದಲ್ಲಿ ನಾನಾ ಇಲಾಖೆಗಳ ಭೌತಿಕ, ಆರ್ಥಿಕ ಪ್ರಗತಿ ಸಭೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಾನಾ ಇಲಾಖೆಗಳ ಭೌತಿಕ ಹಾಗೂ ಆರ್ಥಿಕ ಪ್ರಗತಿ ಬಗ್ಗೆ ಮಹತ್ವದ ಸಭೆ ನಡೆದಿದ್ದು, ಈ ವರ್ಷದ ಬಜೆಟ್‌ನಲ್ಲಿ ಬಂಡವಾಳ ವೆಚ್ಚಕ್ಕಾಗಿ ಹಂಚಿಕೆಯಾದ 54,374 ಕೋಟಿ ರೂ. ಅನುದಾನವನ್ನು ಫೆಬ್ರವರಿ ಯೊಳಗೆ ಖರ್ಚು ಮಾಡುವಂತೆ ಸೂಚನೆ ನೀಡಲಾಗಿದೆ.

ಲೋಕೋಪಯೋಗಿ, ಜಲಸಂಪ ನ್ಮೂಲ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಯೋಜನಾ ಇಲಾಖೆ (ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ), ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದರು.

ಕಳೆದ ವರ್ಷದ ಆಯವ್ಯಯದಲ್ಲಿ ಬಂಡವಾಳ ವೆಚ್ಚಕ್ಕೆ 46,955 ಕೋ. ರೂ. ಹಂಚಿಕೆ ಮಾಡಲಾಗಿತ್ತು. ಪ್ರಸಕ್ತ ವರ್ಷದಲ್ಲಿ 54,374 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಇದು ಸರಕಾರದ ಆಸ್ತಿ ಸೃಜನೆಗೂ ಪೂರಕವಾಗಿದ್ದು, ಈ ಅನುದಾನ ಸದ್ಬಳಕೆಯಾಗುವುದನ್ನು ಖಾತರಿಪಡಿಸಿ ಕೊಳ್ಳುವಂತೆ ಸಿಎಂ ಸೂಚಿಸಿದರು.

ಚುನಾವಣೆ ಹಾಗೂ ಆಯವ್ಯಯ ಅನುಮೋದನೆ ವಿಳಂಬವಾದ ಕಾರಣ ಒಟ್ಟಾರೆ ಪ್ರಗತಿಯಲ್ಲಿ ಹಿನ್ನಡೆಯಾಗಿದೆ. ಆದರೆ ಶೀಘ್ರವೇ ನಿಗದಿತ ಗುರಿಯಂತೆ ವೆಚ್ಚ ಮಾಡಬೇಕು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ ಕಳೆದ ವರ್ಷದ 2,000 ಕೋಟಿ ರೂ.ಗಳಿಗೂ ಹೆಚ್ಚು ಅನುದಾನ ಲಭ್ಯವಿದ್ದು, ಪ್ರಸಕ್ತ ಸಾಲಿನಲ್ಲಿ 3,000 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಆದ್ದರಿಂದ ಶೀಘ್ರವೇ ಕ್ರಿಯಾ ಯೋಜನೆ ಅನುಮೋದನೆ ಪಡೆದು ಕಾಮಗಾರಿ ಅನುಷ್ಠಾನಗೊಳಿಸುವಂತೆ ಸೂಚಿಸಿದರು.

ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ 1400 ಕೋ.ರೂ. ಲಭ್ಯವಿದೆ. ಅಗತ್ಯ ಔಷಧ ಮತ್ತು ಉಪಕರಣಗಳ ಖರೀದಿಗೆ ಬಳಕೆ ಮಾಡಿಕೊಳ್ಳಲು ಸೂಚಿಸಲಾಯಿತು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣದ ಮಾದರಿಯನ್ನು ಇಂಡಿಯನ್‌ ಪಬ್ಲಿಕ್‌ ಹೆಲ್ತ… ಸ್ಟಾಂಡರ್ಡ್‌ಗಳ ಅನ್ವಯ ನಿಗದಿ ಪಡಿಸುವ ಕುರಿತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ಆರೋಗ್ಯ ಇಲಾಖೆ ಸಭೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಸತೀಶ್‌ ಜಾರಕಿಹೊಳಿ, ದಿನೇಶ್‌ ಗುಂಡೂರಾವ್‌, ಎನ್‌.ಎಸ್‌. ಬೋಸರಾಜು, ಡಾ| ಡಿ. ಸುಧಾಕರ್‌, ರಹೀಂ ಖಾನ್‌, ಬೈರತಿ ಸುರೇಶ್‌ ಮುಂತಾದವರಿದ್ದರು.

ಜಲಸಂಪನ್ಮೂಲ ಇಲಾಖೆ ಮೇಲೆ ಕಣ್ಣು
ಜಲಸಂಪನ್ಮೂಲ ಇಲಾಖೆಯಲ್ಲಿ ಅನುಮೋದನೆಗೊಂಡು ಆರಂಭವಾಗ ದಿರುವ ಕಾಮಗಾರಿಗಳ ಬಗ್ಗೆ ನೀರಾವರಿ ನಿಗಮಗಳ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿ ಕೈ ಬಿಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಈ ಮೂಲಕ ಈ ಇಲಾಖೆಯ ಚಟುವಟಿಕೆ ಬಗ್ಗೆ ಅವರು ವಿಶೇಷ ದೃಷ್ಟಿ ಬೀರಿದ್ದಾರೆ. ಜಲ ಸಂಪನ್ಮೂಲ ಇಲಾಖೆಯಲ್ಲಿ 1 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಮೊತ್ತದ ಅನುಮೋದಿತ ಕಾಮಗಾರಿಗಳ ಪೈಕಿ ಸುಮಾರು 12,000 ಕೋಟಿ ರೂ. ಅಂದಾಜು ವೆಚ್ಚದ ಕಾಮಗಾರಿಗಳು ಪ್ರಾರಂಭವಾಗಿಲ್ಲ. ಇವುಗಳನ್ನು ಪರಿಶೀಲಿಸಿ, ಕೈಬಿಡುವ ಕುರಿತು ನೀರಾವರಿ ನಿಗಮಗಳ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸುವಂತೆ ಸೂಚನೆ ನೀಡಲಾಗಿದೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.