Mannara Chopra: ಕೆನ್ನೆಗೆ ಮುತ್ತು ಕೊಟ್ಟ ನಿರ್ದೇಶಕ; ಅವರಿಗೆ ನನ್ನ‌.. ನಟಿ ಹೇಳಿದ್ದೇನು?


Team Udayavani, Sep 5, 2023, 10:11 AM IST

Mannara Chopra: ಕೆನ್ನೆಗೆ ಮುತ್ತು ಕೊಟ್ಟ ನಿರ್ದೇಶಕ; ಅವರಿಗೆ ನನ್ನ‌.. ನಟಿ ಹೇಳಿದ್ದೇನು?

ಹೈದರಾಬಾದ್: ಬಹುಭಾಷಾ ನಟಿ ಮನ್ನಾರಾ ಚೋಪ್ರಾ ಅವರು ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿದ್ದಾರೆ. ನಿರ್ದೇಶಕರೊಬ್ಬರು ಅವರಿಗೆ ಏಕಾಏಕಿ ಮುತ್ತು ಕೊಟ್ಟ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಘಟನೆ ಹಿನ್ನೆಲೆ:  ಟಾಲಿವುಡ್‌ ನಲ್ಲಿ ನಂದಮೂರಿ ಬಾಲಕೃಷ್ಣ, ಗೋಪಿಚಂದ್ ಮತ್ತು ಸಾಯಿ ಧರಮ್ ತೇಜ್ ಮುಂತಾದ ಕಲಾವಿದರೊಂದಿಗೆ ಕೆಲಸ ಮಾಡಿರುವ ನಿರ್ದೇಶಕ ರವಿ ಕುಮಾರ್ ಚೌಧರಿ ಇತ್ತೀಚೆಗೆ ತಮ್ಮ ಸಿನಿಮಾದ ಪ್ರಚಾರದ ವೇಳೆ ನಟಿಯನ್ನು ಪೇಚಿಗೆ ಸಿಲುಕುವಂತೆ ಮಾಡಿದ್ದಾರೆ.

ರವಿ ಕುಮಾರ್ ಚೌಧರಿ ನಿರ್ದೇಶನದ ರಾಜ್ ತರುಣ್ ಮತ್ತು ಮನ್ನಾರಾ ಚೋಪ್ರಾ ಅಭಿನಯದ ʼತಿರಗಪದರ ಸಾಮಿʼ ರಿಲೀಸ್‌ ಗೆ ರೆಡಿಯಾಗಿದೆ. ಇತ್ತೀಚೆಗೆ ಸಿನಿಮಾದ ಟೀಸರ್‌ ಕೂಡ ರಿಲೀಸ್‌ ಆಗಿದೆ.

ಸಿನಿಮಾದ ಪ್ರಚಾರದ ಕಾರ್ಯಕ್ರಮದಲ್ಲಿ ನಟಿ ಮನ್ನಾರಾ ಚೋಪ್ರಾ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದಾರೆ. ಪ್ರಚಾರದ ವೇಳೆ ಮಾಧ್ಯಮಗಳ ಮುಂದೆ ಫೋಟೋಗಳಿಗೆ ಪೋಸ್‌ ಕೊಡುವ ವೇಳೆ ನಿರ್ದೇಶಕರು ನಟಿಯನ್ನು ಆತ್ಮೀಯವಾಗಿ ಹಿಡಿದು, ಇದ್ದಕ್ಕಿದ್ದಂತೆ ಅವರ ಕೆನ್ನೆಗೆ ಮುತ್ತು ಕೊಟ್ಟಿದ್ದಾರೆ. ಇದಕ್ಕೆ ತಕ್ಷಣ ಕಸಿವಿಸಿಗೊಂಡ ನಟಿ ಮನ್ನಾರ ಪ್ರತಿಕ್ರಿಯೆ ನೀಡದೆ ಆಶ್ಚರ್ಯಗೊಂಡು ಸ್ಮೈಲ್‌ ಕೊಟ್ಟು ಸಮ್ಮುನ್ನಾಗಿದ್ದಾರೆ.

ಈ ವಿಡಿಯೋ ವೈರಲ್‌ ಆಗಿ ನಿರ್ದೇಶಕರ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಈ ಬಗ್ಗೆ‌ ನಟಿ ಮನ್ನಾರಾ ಮಾಧ್ಯಮಗಳ ಮುಂದೆ ಸ್ಪಷ್ಟನೆ ನೀಡಿದ್ದಾರೆ.

ಏರ್‌ ಪೋರ್ಟ್‌ ನಲ್ಲಿ ಮಾತನಾಡಿರುವ ಅವರು, “ಕಳೆದ ಕೆಲ ದಿನಗಳಿಂದ ವೈರಲ್‌ ಆಗುತ್ತಿರುವ ವಿಡಿಯೋ ಬಗ್ಗೆ ಸ್ಪಷ್ಟನೆ ನೀಡಲು ಬಯಸುತ್ತೇನೆ. ಈ ವಿಚಾರದಲ್ಲಿ ನಿರ್ದೇಶಕರ ಯಾವುದೇ ತಪ್ಪಿಲ್ಲ. ಅವರಿಗೆ ಸಿನಿಮಾದಲ್ಲಿ ನನ್ನ‌ ಕೆಲಸ ತುಂಬಾ ಇಷ್ಟವಾಗಿದೆ. ನಾನು ಶೂಟ್‌ ಗೆ ಹೋಗದಿದ್ದಾಗ ತಂಡದವರು ಕರೆ ಮಾಡಿ ನನ್ನನ್ನು ವಿಚಾರಿಸುತ್ತಿದ್ದರು. ವಿಡಿಯೋ ವೈರಲ್‌ ಬಗ್ಗೆ ನನಗೆ ಅಚ್ಚರಿ ಆಗಿದೆ. ಅದೊಂದು ಅನಿರೀಕ್ಷಿತ ಕ್ಷಣದಲ್ಲಿ ಆಗಿರುವಂಥದ್ದು, ಅವರು ಅತಿಯಾದ ಉತ್ಸಾಹದಲ್ಲಿ ಹೀಗೆ ಮಾಡಿದ್ದಾರೆ ಅಷ್ಟೇ. ಅದು ಬಿಟ್ಟು ಅವರದು ಬೇರೇನು ಉದ್ದೇಶವಿರಲಿಲ್ಲ. ನಾನು ಈ ಬಗ್ಗೆ ಪಾಸಿಟಿವ್‌ ಆಗಿ ಇದ್ದೇನೆ. ಬೇರೇನೂ ಯೋಚನೆ ಮಾಡಿಲ್ಲ. ಇಲ್ಲಿ ನಾನು(ಟಾಲಿವುಡ್)‌ ನಲ್ಲಿ ತುಂಬಾ ಸಿನಿಮಾ ಮಾಡಿದ್ದೇನೆ. ಈ ಸಿನಿಮಾ ಕೂಡ ತುಂಬಾ ಚೆನ್ನಾಗಿದೆ ನೋಡಿ” ಎಂದು ನಟಿ ಸ್ಪಷ್ಟನೆ ಕೊಟ್ಟಿದ್ದಾರೆ.

ಮನ್ನಾರಾ ಚೋಪ್ರಾ ಪ್ರಿಯಾಂಕಾ ಚೋಪ್ರಾ ಮತ್ತು ಪರಿಣಿತಿ ಚೋಪ್ರಾ ಅವರ ಸೋದರಸಂಬಂಧಿ. ನಟಿ 2014 ರ ತೆಲುಗು ಚಿತ್ರ ʼಪ್ರೇಮ ಗೀಮಾ ಜಂತ ನೈʼ ಮೂಲಕ ಪಾದಾರ್ಪಣೆ ಮಾಡಿದರು. ಅವರು ಜಿದ್ ಮತ್ತು ಫಗ್ಲಿ ಮುಂತಾದ ಬಾಲಿವುಡ್ ಚಲನಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ಕೊನೆಯದಾಗಿ 2019 ರ ಚಲನಚಿತ್ರ ʼಸೀತಾ‌ʼದಲ್ಲಿ ಕಾಣಿಸಿಕೊಂಡಿದ್ದರು.‌

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Tumbbad 2: ಪ್ರಳಯ್ ಆಯೇಗಾ..‌ ಹಾರರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Tumbbad 2: ಪ್ರಳಯ್ ಆಯೇಗಾ..‌ ಹಾರಾರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

10

Actor James Hollcroft: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆ

Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.