![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 5, 2023, 4:14 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಸಸ್ಯಹಾರಿ ವ್ಯಕ್ತಿಗೆ ಚಿಕನ್ ಬರ್ಗರ್ ನೀಡಿ ಧಾರ್ಮಿಕ ಆಚರಣೆಗೆ ಧಕ್ಕೆ ತಂದು ಅನಾರೋಗ್ಯಕ್ಕೆ ಕಾರಣವಾದ ಹೊಟೇಲ್ವೊಂದಕ್ಕೆ ಗ್ರಾಹಕ ನ್ಯಾಯಾಲಯ 15 ಸಾವಿರ ದಂಡ ಪರಿಹಾರ ನೀಡುವಂತೆ ತೀರ್ಪು ಹೊರಡಿಸಿದೆ.
ದೊಡ್ಡಬಳ್ಳಾಪುರದ 62 ವರ್ಷದ ವ್ಯಕ್ತಿಯು ತನ್ನ ಮಗನ ಪರವಾಗಿ ಗ್ರಾಹಕ ನ್ಯಾಯಾಲಯಕ್ಕೆ ದೂರು ದಾಖಲಿಸಿದ್ದಾರೆ. ತನ್ನ ಮಗ ನಗರದ ಖಾಸಗಿ ಹೊಟೇಲ್ ಒಂದರಲ್ಲಿ ಕೊಠಡಿಯನ್ನು ಬುಕ್ ಮಾಡಿ ವಾಸ್ತವ್ಯ ಹೂಡಿದ್ದರು. ಈ ವೇಳೆ ವೆಜ್ ಬರ್ಗರ್ ಆರ್ಡಾರ್ ಮಾಡಿದ್ದಾರೆ. ಈ ವೇಳೆ ಹೊಟೇಲ್ನವರು ವೆಜ್ ಬರ್ಗರ್ ಬದಲಾಗಿ ಚಿಕನ್ ಬರ್ಗರ್ ನೀಡಿದ್ದಾರೆ. ಈ ಮಾಹಿತಿ ಗೊತ್ತಿಲ್ಲ ಮಗ ಬರ್ಗರ್ ಸೇವಿಸಿದ್ದಾರೆ. ಮಾಂಸಹಾರವನ್ನೇ ಮುಟ್ಟದವರು ಚಿಕನ್ ಬರ್ಗರ್ ಸೇವಿಸಿರುವುದು ಅಘಾತ ಉಂಟು ಮಾಡಿದೆ. ಈ ವೇಳೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖೀಸಿದ್ದಾರೆ. ಗ್ರಾಹಕ ಸೇವೆಯಲ್ಲಿ ವ್ಯತ್ಯಯದ ಬಗ್ಗೆ ಹೊಟೇಲ್ ಮಾಲೀಕರ ಗಮನಕ್ಕೆ ತರಲಾಗಿದೆ.
ಹೊಟೇಲ್ನಲ್ಲಿ ಆಗಿರುವ ತೊಂದರೆ ಬಗ್ಗೆ ಉಲ್ಲೇಖಿಸಿ, ಹೊಟೇಲ್ ಬಿಲ್ ಮೊತ್ತವನ್ನು ಮರುಕಳಿಸುವಂತೆ ಮನವಿ ಮಾಡಿದರೂ, ಯಾವುದೇ ಪ್ರಯೋಜನವಾಗಿಲ್ಲ. ಈ ವೇಳೆ ಹೊಟೇಲ್ ಮಾಲೀಕ ಪರಿಹಾರವಾಗಿ ಉಚಿತ ತಿಂಡಿ, ಊಟ ವ್ಯವಸ್ಥೆ ನೀಡುವುದಾಗಿ ತಿಳಿಸಿದ್ದಾರೆ. ಇದರಿಂದ ಬೇಸತ್ತ ಗ್ರಾಹಕ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ. ಎರಡು ಕಡೆಯ ವಾದ ವಿವಾದವನ್ನು ಆಲಿಸಿದ ನ್ಯಾಯಾಧೀಶರು, ಸಸ್ಯಹಾರಿಗೆ ಚಿಕನ್ ಬರ್ಗರ್ ನೀಡಿದ ಹೊಟೇಲ್ 15 ಸಾವಿರ ರೂ. ಪರಿಹಾರ ನೀಡುವಂತೆ ಆದೇಶ ಹೊರಡಿಸಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.