Roadside shop: ಪೊಲೀಸ್ ಭದ್ರತೆಯಲ್ಲಿ ರಸ್ತೆ ಬದಿ ಅಂಗಡಿಗಳ ತೆರವು
Team Udayavani, Sep 5, 2023, 4:31 PM IST
ದೊಡ್ಡಬಳ್ಳಾಪುರ: ಸಂಚಾರ ದಟ್ಟಣೆ, ಅಪಘಾತಗಳು ಹಾಗೂ ಪಾದಚಾರಿಗಳಿಗೆ ಆಗುತ್ತಿದ್ದ ತೊಂದರೆಗಳ ಹಿನ್ನೆಲೆಯಲ್ಲಿ ರಸ್ತೆ ಬದಿ ಅಂಗಡಿಗಳನ್ನು ತೆರವು ಮಾಡಬೇಕೆಂಬ ತೀವ್ರ ಒತ್ತಾಯಕ್ಕೆ ಮಣಿದ, ನಗರಸಭೆ ಹಾಗು ಪೊಲೀಸ್ ಇಲಾಖೆ ರಸ್ತೆ ಬದಿ ಅಂಗಡಿಗಳ ತೆರವಿಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ನಗರಸಭೆ ಪೌರಾಯುಕ್ತ ಪರಮೇಶ್ ನೇತೃತ್ವದಲ್ಲಿ ಪೊಲೀಸ್ ಭದ್ರತೆಯೊಂದಿಗೆ ತೆರವು ಕಾಚರಣೆ ಆರಂಭಿಸಿರುವ ಅಧಿಕಾರಿಗಳು ಪ್ರವಾಸಿ ಮಂದಿರದವರೆಗೂ ತೆರವು ಕಾರ್ಯಾಚರಣೆ ನಡೆಸಲು ಮುಂದಾದರು. ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಪಂ ವ್ಯಾಪ್ತಿಯಲ್ಲಿ ಅಪಘಾತ ಸಂಖ್ಯೆ ಹೆಚ್ಚಳವಾಗಿ, ಸಾವು- ನೋವುಗಳು ತೀವ್ರವಾದ ಹಿನ್ನೆಲೆಯಲ್ಲಿ ರಸ್ತೆ ಬದಿ ಅಂಗಡಿಗಳನ್ನು ತೆರವು ಮಾಡಬೇಕೆಂಬ ಒತ್ತಾಯ ತೀವ್ರಗೊಂಡಿದ್ದು, ನ್ಯಾಯಾಧೀಶರಾದ ಸಂದೀಪ್ ಸಾಲಿಯಾನ ಅವರು ಆದೇಶ ನೀಡಿದ್ದರು. ಅದೇ ರೀತಿ ಕರವೇ ಪ್ರವೀಣ್ ಶೆಟ್ಟಿ ಬಣದ ಸದಸ್ಯರು ಅಧಿಕಾರಿಗಳ ಕರ್ತವ್ಯ ಲೋಪದ ಕುರಿತಂತೆ ಲೋಕಾಯುಕ್ತರಿಗೆ ದೂರು, ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಮುಂದಾಗಿದ್ದರು.
ನಗರಸಭೆ ಪೌರಾಯುಕ್ತ ಕೆ.ಪರಮೇಶ್, ಎಇಇ ಪರಿಸರ ಈರಣ್ಣ ಸೇರಿದಂತೆ ನಗರ ಠಾಣೆ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.