800 Movie: ದಿಗ್ಗಜ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಜೀವನಗಾಥೆಯ ʼ800ʼ ಟ್ರೇಲರ್ ಔಟ್
Team Udayavani, Sep 5, 2023, 6:04 PM IST
ಚೆನ್ನೈ: ಶ್ರೀಲಂಕಾದ ದಿಗ್ಗಜ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅವರ ಜೀವನದ ಕಥೆಯನ್ನು ಆಧಾರಿಸಿರುವ ʼ800ʼ ಸಿನಿಮಾದ ಟ್ರೇಲರ್ ಮಂಗಳವಾರ (ಸೆ.5 ರಂದು) ರಿಲೀಸ್ ಆಗಿದೆ.
ಮುಂಬಯಿಯಲ್ಲಿ ನಡೆದ ಸಮಾರಂಭದಲ್ಲಿ ಭಾರತದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸಿನಿಮಾದ ಟ್ರೇಲರ್ ನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಮುರಳೀಧರನ್ ಹುಟ್ಟಿನಿಂದ ತಮಿಳಿನವರಾಗಿದ್ದು, ಚೆನ್ನೈ ನಿವಾಸಿಯನ್ನು ವಿವಾಹವಾಗಿದ್ದಾರೆ. ಸಿನಿಮಾದಲ್ಲಿ ಮುರುಳೀಧರನ್ ಅವರ ಬಾಲ್ಯದ ದಿನಗಳು ಹಾಗೂ ಕ್ರಿಕೆಟ್ ಜೀವನದಲ್ಲಿನ ಸಾಧನೆಯ ದಿನಗಳು ಹಾಗೂ ವೃತ್ತಿ ಬದುಕಿನಲ್ಲಾದ ಪ್ರಮುಖ ಘಟನಾವಳಿಗಳ ಅಂಶಗಳನ್ನು ತೋರಿಸಲಾಗಿದೆ. ಸಂಕಷ್ಟ ಹಾಗೂ ಸವಾಲನ್ನು ಮೀರಿ ಕ್ರಿಕೆಟ್ ಲೋಕದಲ್ಲಿ ದಿಗ್ಗಜರಾಗಿ ಬೆಳೆದ ಮುರುಳೀಧರನ್ ಅವರ ಪಾತ್ರದ ಝಲಕ್ ನ್ನು ಸಿನಿಮಾದ ಟ್ರೇಲರ್ ನಲ್ಲಿ ತೋರಿಸಲಾಗಿದೆ.
ಆಸ್ಕರ್ ಪ್ರಶಸ್ತಿ ವಿಜೇತ ಚಿತ್ರ ‘ಸ್ಲಮ್ಡಾಗ್ ಮಿಲಿಯನೇರ್’ನಲ್ಲಿನ ಪಾತ್ರಕ್ಕೆ ಹೆಸರುವಾಸಿಯಾದ ನಟ ಮಧುರ್ ಮಿತ್ತಲ್ ಅವರು ಮುರುಳೀಧರನ್ ಅವರ ಪಾತ್ರಕ್ಕೆ ಜೀವ ತುಂಬಿದ್ದಾರೆ.
ಮಹಿಮಾ ನಂಬಿಯಾರ್ ,ನರೇನ್, ನಾಸರ್, ವೇಲಾ ರಾಮಮೂರ್ತಿ, ಋತ್ವಿಕಾ, ವಡಿವುಕ್ಕರಸಿ, ಅರುಲ್ ದಾಸ್ ಮತ್ತು ಇತರರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಎಂ ಎಸ್ ಶ್ರೀಪತಿ ಬರೆದು ನಿರ್ದೇಶಿಸಿರುವ ಈ ಚಿತ್ರ ತಮಿಳು, ಹಿಂದಿ ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಮುರಳೀಧರನ್ 133 ಟೆಸ್ಟ್, 350 ಏಕದಿನ ಮತ್ತು 12 T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಶ್ರೀಲಂಕಾವನ್ನು ಪ್ರತಿನಿಧಿಸಿದ್ದಾರೆ. ಅವರು ಒಟ್ಟು ಟೆಸ್ಟ್ ಕ್ರಿಕೆಟ್ ನಲ್ಲಿ 800 ವಿಕೆಟ್ಗಳನ್ನು ಪಡೆದಿದ್ದಾರೆ. ಏಕದಿನದಲ್ಲಿ 534 ಮತ್ತು T20 ಗಳಲ್ಲಿ 13 ವಿಕೆಟ್ಗಳನ್ನು ಪಡೆದಿದ್ದಾರೆ. 1996 ರಲ್ಲಿ ಶ್ರೀಲಂಕಾದ ಏಕದಿನ ವಿಶ್ವಕಪ್ ವಿಜಯದ ಭಾಗವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Japan ಆ್ಯನಿಮೇಟೆಡ್ ರಾಮಾಯಣ ಅ.18ಕ್ಕೆ ಮರು ಬಿಡುಗಡೆ
Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್ ಬಾಸ್ʼ ಖ್ಯಾತಿಯ ಅಬ್ದು ವಿವಾಹ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.