Black And White ಮನಿ ದಂಧೆ: 20 ಲಕ್ಷ ರೂ. ವಂಚನೆ, ಬೆಳಗಾವಿ ಮಹಿಳೆ ಸೇರಿ ನಾಲ್ವರ ಬಂಧನ


Team Udayavani, Sep 5, 2023, 7:36 PM IST

Black And White ಮನಿ ದಂಧೆ: 20 ಲಕ್ಷ ರೂ. ವಂಚನೆ, ಬೆಳಗಾವಿ ಮಹಿಳೆ ಸೇರಿ ನಾಲ್ವರ ಬಂಧನ
ವಿಜಯಪುರ: ಬ್ಲ್ಯಾಕ್ ಆ್ಯಂಡ್ ವೈಟ್ ಹಣದ ದಂಧೆಯಲ್ಲಿ ವಿಜಯಪುರ ಜಿಲ್ಲೆಯ ವ್ಯಕ್ತಿಗೆ 20 ಲಕ್ಷ ರೂ. ವಂಚಿಸಿದ ಪ್ರಕರಣದಲ್ಲಿ ಬೆಳಗಾವಿ ಜಿಲ್ಲೆಯ ಮಹಿಳೆ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಇಡೀ ಪ್ರಕರಣ ವಿವರ ನೀಡಿದ ಎಸ್ಪಿ ಆನಂದಕುಮಾರ, ಕಪ್ಪುಹಣವನ್ನು ಬಿಳಿಯಾಗಿ ಮಾಡಿಕೊಡುವ ದಂಧೆಯ ಹೆಸರಿನಲ್ಲಿ ವಂಚನೆಗೊಳಗಾದ ವ್ಯಕ್ತಿ ಬಬಲೇಶ್ವರ ಮೂಲದ ಚಂದ್ರಶೇಖರ ಬಸಪ್ಪ ಕನ್ನೂರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು ಎಂದರು.

ಬಂಧಿತ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ಗೋಗಾಕ ತಾಲೂಕಿನ ಸಂಗಣಕೇರಿ ಗ್ರಾಮದ ಮಹಿಳೆ ಲಕ್ಷ್ಮೀ ರಾಮಪ್ಪ ಕಂಕಣವಾಡಿ (22), ಬೈಲಹೊಂಗಲ ತಾಲೂಕಿನ ಕೊಳದೂರಿನ ಈರಣ್ಣ ರುದ್ರಪ್ಪ ಕೌಜಲಗಿ (46), ಹಲಗಾ ಬಸ್ತಿಗಲ್ಲಿಯ ಅಪ್ಪಾಸಾಹೇಬ್ ಬಾಬು ಇಂಚಲ್ (66) ಹಾಗೂ ಚಿಕ್ಕೋಡಿ ಮಾತಂಗಿಕೇರಿಯ ಸುನೀಲ ಕಾಶಿನಾಥ ದೊಡಮನಿ (37) ಎಂದು ಗುರುತಿಸಲಾಗಿದೆ.

20 ಲಕ್ಷ ರೂ. ನೀಡಿದರೆ 1 ಕೋಟಿ ರೂ. ನಗದು ಹಣವನ್ನು ನೀಡುವುದಾಗಿ ಹೇಳಿ ಚಂದ್ರಶೇಖರ ಅವರಿಂದ 20 ಲಕ್ಷ ರೂ. ಪಡೆದಿದ್ದರು. ಬಳಿಕ ಬಂಡಲ್‍ನಲ್ಲಿ ಮೇಲೆ ಮೇಲೆ ಮಾತ್ರ ಒಂದು ಸುತ್ತು ಅಸಲಿ ನೋಟುಗಳ್ನು ಇರಿಸಿ, ಉಳಿದಂತೆ ಖಾಲಿ ಪೇಪರ್, ನೋಟ್‍ಬುಕ್ ಹಾಕಿ ರಟ್ಟಿನ ಡಬ್ಬದಲ್ಲಿ ಪ್ಯಾಕ್ ಮಾಡಿ ನೀಡಿದ್ದರು.

ತಾವು ವಂಚನೆಗೊಳಗಾದ ವಿಷಯ ತಿಳಿಯುತ್ತಲೇ ಚಂದ್ರಶೇಖರ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಇನ್ಸ್‍ಪೆಕ್ಟರ್ ರಮೇಶ ಅವಜಿ ನೇತೃತ್ವದ ತನಿಖಾ ತಂಡ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ವಿವರಿಸಿದರು.

ಬಂಧಿತರಿಂದ 19 ಲಕ್ಷ ರೂ. ನಗದು, ಕೃತ್ಯಕ್ಕೆ ಬಳಸಿದ 9 ಮೊಬೈಲ್, 10 ಸಿಮ್ ಹಾಗೂ ಒಂದು ಕಾರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಇಡೀ ಪ್ರಕರಣವನ್ನು ಚಾಣಾಕ್ಷತನದಿಂದ ಬೇದಿಸುವಲ್ಲಿ ಯಶಸ್ವಿಯಾದ ತನಿಖಾ ತಂಡದ ಪೊಲೀಸರಿಗೆ ಶ್ಲಾಘನೀಯ ಪತ್ರ ನೀಡಲಾಗಿದೆ ಎಂದು ವಿವರಿಸಿದರು.

ಎಎಸ್ಪಿ ಶಂಕರ ಮಾರಿಹಾಳ, ಸದರಿ ಪ್ರಕರಣ ತನಿಖಾಧಿಕಾರಿ ರಮೇಶ ಅವಜಿ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Realme C-51: ಫೋನ್‌ ಬಿಡುಗಡೆ- 1 ಗಂಟೆಯಲ್ಲಿ ಶೇ.100 ಚಾರ್ಜಿಂಗ್‌ ಖಾತರಿ

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

Exam

PG NEET-2024: ನೋಂದಣಿ ವಿಸ್ತರಣೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.