Rahul Gandhi: ರಾಹುಲ್ ಅನರ್ಹತೆ ರದ್ದು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ದಾವೆ ಸಲ್ಲಿಕೆ
Team Udayavani, Sep 5, 2023, 10:29 PM IST
ನವದೆಹಲಿ: ಕಾಂಗ್ರೆಸ್ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯ ಸ್ಥಾನದ ಅನರ್ಹತೆ ರದ್ದುಗೊಳಿಸಿ, ಅವರನ್ನು ಸದಸ್ಯರನ್ನಾಗಿ ಮರುಸ್ಥಾಪಿಸುವ ಲೋಕಸಭೆ ಕಾರ್ಯಾಲಯದ ಅಧಿಸೂಚನೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಮಂಗಳವಾರ ದಾವೆಯೊಂದು ಸಲ್ಲಿಕೆಯಾಗಿದೆ. ಮಾನನಷ್ಟ ಪ್ರಕರಣವೊಂದರಲ್ಲಿ ದೋಷಿ ಎಂದು ಸಾಬೀತಾಗಿ, 2 ವರ್ಷ ಜೈಲು ಶಿಕ್ಷೆಗೆ ಗುರಿಯಾದ ಬಳಿಕ ರಾಹುಲ್ ಅವರು ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದರು.
ಸಂಸದನ ವಿರುದ್ಧ ಇರುವ ಆರೋಪ ಖುಲಾಸೆಯಾಗದ ಹೊರತಾಗಿ ಆತನಿಗೆ ಹುದ್ದೆ ಮರಳಿಸಲು ಸಾಧ್ಯವಿಲ್ಲ. ಹೀಗಿರುವಾಗ ಲೋಕಸಭೆ ಕಾರ್ಯಾಲಯವು ಸದ್ಯಸತ್ವ ಮರುಸ್ಥಾಪಿಸಿದ್ದು ಹೇಗೆ , ಅಲ್ಲದೇ, ನಿಗದಿತ ಸಂಸದರ ಅನರ್ಹತೆಯನ್ನು ರದ್ದುಗೊಳಿಸಿ ಸಂಸತ್ಗೆ ವಾಪಸ್ ಬರಬಹುದು ಎಂದು ನಿರ್ಧರಿಸುವ ಅಧಿಕಾರ ಚುನಾವಣೆ ಆಯೋಗಕ್ಕಗಿದೆಯೋ ಅಥವಾ ಲೋಕಸಭೆಗೆ ಇದೆಯೋ ಎಂದು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ಉತ್ತರ ಪ್ರದೇಶದ ಲಕ್ನೋ ಮೂಲದ ವಕೀಲರೊಬ್ಬರು ಈ ಅರ್ಜಿಯನ್ನು ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.