Politics: ಸಂವಿಧಾನ ನನ್ನ ಧರ್ಮ: ಸಚಿವ ಪ್ರಿಯಾಂಕ್
Team Udayavani, Sep 7, 2023, 8:32 PM IST
ಬೆಂಗಳೂರು: ಸಂವಿಧಾನ ನನ್ನ ಧರ್ಮ. ನಾನದನ್ನು ನಂಬುತ್ತೇನೆ. ನಾನು ನಿಮ್ಮ ಧರ್ಮ, ಆಚರಣೆ, ಸಂಸ್ಕೃತಿಗಳನ್ನು ಪ್ರಶ್ನಿಸಿಲ್ಲ. ನನ್ನ ಧರ್ಮವನ್ನೂ ಪ್ರಶ್ನಿಸಬೇಡಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ಖರ್ಗೆ ಹೇಳಿದರು.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಉದಯನಿಧಿ ಸ್ಟಾಲಿನ್ ಹೇಳಿಕೆಗಳನ್ನು ನಾನೇಕೆ ಸಮರ್ಥಿಸಿಕೊಳ್ಳಬೇಕು? ಸನಾತನ ಧರ್ಮವನ್ನು ನೀವು ನಂಬುತ್ತೀರಾ ಎಂದು ಮಾಧ್ಯಮದವರು ಪ್ರಶ್ನಿಸಿದ್ದೀರಿ. ನನಗೆ ಸಮಾನತೆಯಲ್ಲಿ ನಂಬಿಕೆಯಿದೆ ಎಂದಿದ್ದೆ. ಅದಕ್ಕೆ ಬಿಜೆಪಿಯವರು ಏಕೆ ಅಷ್ಟೊಂದು ಕೆಂಡಾಮಂಡಲ ಆಗಬೇಕೆಂದು ಮರುಪ್ರಶ್ನೆ ಹಾಕಿದರು.
ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಅಸ್ಸಾಂ ಎಲ್ಲಿ ಬೇಕಿದ್ದರೂ ಎಫ್ಐಆರ್ ಆಗಲಿ. ಎಫ್ಐಆರ್ ಹಾಕಿದವರು ನನ್ನ ಹೇಳಿಕೆಯಲ್ಲಿ ತಪ್ಪೇನಿದೆ ಎಂಬುದನ್ನೂ ಹೇಳಲಿ. ಸಂವಿಧಾನ ನನ್ನ ಧರ್ಮ, ನಾನದನ್ನು ಗೌರವಿಸುತ್ತೇನೆ, ಪ್ರೀತಿಸುತ್ತೇನೆ ಎಂದಿದ್ದಕ್ಕೆ ಎಫ್ಐಆರ್ ಮಾಡುತ್ತಾರಾ, ಮಾಡಲಿ ಎಂದು ಸಮರ್ಥಿಸಿಕೊಂಡರು.
ತಲೆ ಏಕೆ ಕೆಡಿಸಿಕೊಳ್ಳಬೇಕು?: ಸನಾತನ ಧರ್ಮದ ಹುಟ್ಟಿನ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರಶ್ನಿಸಿದ್ದಾರೆ. ಯಾವುದೇ ಸಂದರ್ಭದ, ಯಾವುದೇ ನಾಗರಿಕತೆ ತೆಗೆದುಕೊಂಡರೂ ಆಧುನಿಕತೆ ಬಂದಿದ್ದೇ ಪ್ರಶ್ನೆ ಕೇಳಿ ಉತ್ತರ ಪಡೆದಿದ್ದರಿಂದ. ಕುತೂಹಲ ಇರಬೇಕು. ಮಾನವಕುಲ ಮುಂದುವರಿಯಬೇಕಿದ್ದರೆ ಆಧ್ಯಾತ್ಮಿಕ, ಧಾರ್ಮಿಕ ಅಥವಾ ವೈಜ್ಞಾನಿಕ, ಸಾಂಸ್ಕೃತಿಕವಾಗಿ ಪ್ರಶ್ನೆಗಳನ್ನು ಕೇಳಬೇಕು. ಅದಕ್ಕೆ ಉತ್ತರಿಸಿ. ಅದಕ್ಯಾಕೆ ಅಷ್ಟು ತಲೆ ಕೆಡಿಸಿಕೊಳ್ಳುತ್ತೀರಿ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.