CM ಸಲಹೆಗಾರರ ನೇಮಕ ಪ್ರಶ್ನಿಸಿದ್ದ ಅರ್ಜಿ ವಜಾ


Team Udayavani, Sep 7, 2023, 10:08 PM IST

SIDDARAMAYYA 1

ಬೆಂಗಳೂರು: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರ ಮತ್ತು ಮುಖ್ಯ ಸಲಹೆಗಾರರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಈ ಬಗ್ಗೆ ವಕೀಲ ಎಸ್‌. ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ| ಪ್ರಸನ್ನ ಬಿ. ವರಾಲೆ ಹಾಗೂ ನ್ಯಾ| ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.

ಅರ್ಜಿದಾರ ವಕೀಲರು ಈ ಹಿಂದೆ ಅನೇಕ ಸಾರ್ವಜನಿಕ ಮಹತ್ವದ ವಿಷಯಗಳ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಅವುಗಳ ಪೈಕಿ ಬಹುತೇಕ ಅರ್ಜಿಗಳನ್ನು ನ್ಯಾಯಲಯ ಪ್ರಶಂಸಿಸಿದೆ. ಹಾಗಂತ ಪ್ರತಿ ಬಾರಿಯೂ ಅವರ ಅರ್ಜಿಗಳನ್ನು ಪರಿಗಣಿಸಬೇಕೆಂದಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.

ಜತೆಗೆ, ರಾಜ್ಯದ ಈಗಿನ ಶಾಸಕರ ಸಂಖ್ಯಾಬಲದ ಆಧಾರದಲ್ಲಿ 34 ಮಂದಿಗೆ ಸಚಿವ ಸಂಪುಟದಲ್ಲಿ ಅವಕಾಶ ಇರಬಹುದು. ಆದರೆ 34 ಮಂದಿಯನ್ನು ಹೊರತುಪಡಿಸಿ ಇತರರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಬಾರದು ಎಂಬ ನಿರ್ಬಂಧವೆಲ್ಲಿದೆ? ಒಂದೊಮ್ಮೆ ಕೊಟ್ಟರೂ ಅದರಲ್ಲಿ ತಪ್ಪೇನಿದೆ? ಸಂಪುಟದ ಸಚಿವರಲ್ಲದವರನ್ನು ಸಂಪುಟ ದರ್ಜೆ ಕೊಟ್ಟರೂ ನಿರ್ದಿಷ್ಟವಾಗಿ ಸಚಿವರಿಗೆ ಇರುವ ಅಧಿಕಾರ ಅವರಿಗೆ ಇರುವುದಿಲ್ಲ, ಅವರಿಗೆ ಸಚಿವರ ಹುದ್ದೆ ಅಥವಾ ಅಧಿಕಾರ ನೀಡುವುದಿಲ್ಲ. ಮೇಲಾಗಿ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನೇಮಕಗೊಂಡವರು ಸಂವಿಧಾನದಡಿ ನೇಮಕ ಆಗಿರುವುದಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಅರ್ಜಿ ವಜಾಗೊಳಿಸಿರುವುದಕ್ಕೆ ಸೂಕ್ತ ಕಾರಣಗಳನ್ನು ವಿವರವಾದ ಆದೇಶದಲ್ಲಿ ತಿಳಿಸಲಾಗುವುದು ಎಂದು ಹೇಳಿತು.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾಗಿ ವಿಧಾನಪರಿಷತ್‌ ಸದಸ್ಯರಾದ ಕೆ. ಗೋವಿಂದರಾಜ್‌, ನಸೀರ್‌ ಅಹ್ಮದ್‌, ಮುಖ್ಯ ಸಲಹೆಗಾರರನ್ನಾಗಿ ಸುನೀಲ್‌ ಕನಗೋಳ ಹಾಗೂ ಮಾಧ್ಯಮ ಸಲಹೆಗಾರರನ್ನಾಗಿ ಕೆ.ವಿ. ಪ್ರಭಾಕರ್‌ ಅವರನ್ನು ಸಂಪುಟ ದರ್ಜೆ ಸಚಿವ ಸ್ಥಾನಮಾನದೊಂದಿಗೆ ನೇಮಕ ಮಾಡಿರುವುದನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು.

ಮುಖ್ಯಮಂತ್ರಿಯವರ ವಿವಿಧ ಸಲಹೆಗಾರರನ್ನು ಸಂಪುಟ ದರ್ಜೆ ಸ್ಥಾನಮಾನ ನೀಡಿ ನೇಮಕ ಮಾಡಲಾಗಿದೆ. ಅವರಿಗೆ ನೀಡಲಾಗುವ ಸಂಬಳ, ಸಾರಿಗೆ, ವಸತಿ ಭತ್ಯೆ ಇತ್ಯಾದಿ ಖರ್ಚುಗಳು ರಾಜ್ಯದ ಬೊಕ್ಕಸದಿಂದ ವಿನಾ ಕಾರಣ ಭರಿಸುವಂತಾಗಿದೆ. ಇವೆಲ್ಲ ರಾಜಕೀಯ ನೇಮಕಾತಿ ಹಾಗೂ ಏಕಪಕ್ಷೀಯ ನಿರ್ಧಾರಗಳು.ಮುಖ್ಯಮಂತ್ರಿಗಳ ಕಚೇರಿ ಎಂಬುದು ಸಾರ್ವಜನಿಕ ಕಚೇರಿ. ಆದರೆ, ಇಲ್ಲೀಗ ಮುಖ್ಯಮಂತ್ರಿಗಳ ಬಂಧುಗಳು, ಅವರ ರಾಜಕೀಯ ಬೆಂಬಲಿಗರಿಗೆ ಆಸ್ಪದ ನೀಡಲಾಗಿದೆ. ಕಾನೂನಿನಲ್ಲಿ ಇಂತಹ ಹು¨ªೆಗಳನ್ನು ರೂಪಿಸಲು ಅವಕಾಶವಿಲ್ಲ. ಕಾನೂನಿನ ಗಂಭೀರ ಉಲ್ಲಂಘನೆಯಾಗಿದೆ. ಉತ್ತಮ ಆಡಳಿತ ನೀಡುವ ಮೂಲಭೂತ ಆಶಯಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ದೂರಿದ್ದರು.

ಟಾಪ್ ನ್ಯೂಸ್

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.