Amazon ಮತ್ತು ಕರ್ನಾಟಕ ಸರ್ಕಾರದ ನಡುವೆ ಒಪ್ಪಂದಕ್ಕೆ ಸಹಿ
ಉದ್ಯೋಗಾಸಕ್ತ ದಿವ್ಯಾಂಗರಿಗೆ ನೆರವಾಗಲು
Team Udayavani, Sep 7, 2023, 10:17 PM IST
ಬೆಂಗಳೂರು: ಉದ್ಯೋಗಾಸಕ್ತ ದಿವ್ಯಾಂಗರಿಗೆ ನೆರವಾಗುವ ಉದ್ದೇಶದಿಂದ ಅಮೆಜಾನ್ ಇಂಡಿಯಾವು ಕರ್ನಾಟಕ ಸರ್ಕಾರ, ಮಹಾರಾಷ್ಟ್ರ, ಗುಜರಾತ್, ತಮಿಳುನಾಡು ಮತ್ತು ಹರಿಯಾಣ ರಾಜ್ಯ ಸರ್ಕಾರಗಳೊಡನೆ ಒಪ್ಪಂದಕ್ಕೆ ಸಹಿ ಹಾಕಿದೆ.
ಅಮೆಜಾನ್ ಇಂಡಿಯಾದ ಆಪರೇಷನ್ಸ್ ಜಾಲದಾದ್ಯಂತ ಐದು ರಾಜ್ಯಗಳಲ್ಲಿ ಶ್ರವಣ ಸಮಸ್ಯೆಯುಳ್ಳ ಸಾವಿರಾರು ದಿವ್ಯಾಂಗ ಅಭ್ಯರ್ಥಿಗಳಿಗೆ ಕೌಶಲ್ಯ ಮತ್ತು ಉದ್ಯೋಗಾವಕಾಶಗಳನ್ನು ಪೂರೈಸಲಿದೆ. ರಾಜ್ಯ ಸರ್ಕಾರಗಳು ಮತ್ತು ಅಮೆಜಾನ್ ಇಂಡಿಯಾ ನಡುವಿನ ಒಪ್ಪಂದವು ದಿವ್ಯಾಂಗರಿಗೆ ಉದ್ಯೋಗ ಮತ್ತು ಕೌಶಲ್ಯದ ಅವಕಾಶಗಳಿಗೆ ಆದ್ಯತೆ ನೀಡುತ್ತದೆ ಮತ್ತು ಮುಖ್ಯವಾಹಿನಿ ಉದ್ಯೋಗ ಗಳಲ್ಲಿ ದಿವ್ಯಾಂಗರು ಪಾಲ್ಗೊಳ್ಳಲು ನೆರವಾಗುತ್ತದೆ. ಇದು ಪ್ರಧಾನಮಂತ್ರಿಯವರ ಆತ್ಮನಿರ್ಭರ ಭಾರತಕ್ಕೆ ಪೂರಕವಾಗಿದೆ ಎಂದು ಕಂಪೆನಿ ತಿಳಿಸಿದೆ.
ಅಮೆಜಾನ್ ನ ಕಾರ್ಯಾಚರಣೆ ಜಾಲ ಅಂದರೆ ಫುಲ್ ಫಿಲ್ ಮೆಂಟ್ ಸೆಂಟರ್ ಗಳು, ಸಾರ್ಟೇಷನ್ ಕೇಂದ್ರಗಳು ಮತ್ತು ಡೆಲಿವರಿ ಸ್ಟೇಷನ್ ಗಳಲ್ಲಿ ಸ್ಟೋವಿಂಗ್, ಪಿಕಿಂಗ್, ಪ್ಯಾಕಿಂಗ್ ಮತ್ತು ಸಾರ್ಟಿಂಗ್ ಮತ್ತಿತರೆ ಉದ್ಯೋಗಗಳನ್ನು ನೀಡಲಾಗುತ್ತದೆ.
ಅಮೆಜಾನ್ ನ ಪೀಪಲ್ ಎಕ್ಸ್ ಪೀರಿಯೆನ್ಸ್ ಅಂಡ್ ಟೆಕ್ನಾಲಜಿ(ಪಿ.ಎಕ್ಸ್.ಟಿ.)ಯ ಇಂಡಿಯಾ ಆಪರೇಷನ್ಸ್ ನಿರ್ದೇಶಕ ಲಿಜು ಥಾಮಸ್, ಮಾತಾಡಿ, ಕರ್ನಾಟಕ, ಹರಿಯಾಣ, ಮಹಾರಾಷ್ಟ್ರ, ಗುಜರಾತ್ ರಾಜ್ಯ ಸರ್ಕಾರಗಳ ನಿರಂತರ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸುತ್ತೇವೆ.. ಇದು ಅವಕಾಶ ವಂಚಿತರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲು ಪೂರಕವಾಗಿದೆ. ಶ್ರವಣ ಮತ್ತು ಮಾತಿನ ಸಮಸ್ಯೆಗಳುಳ್ಳ ಸಾವಿರಾರು ಸಿಬ್ಬಂದಿ ಅಮೆಜಾನ್ ಇಂಡಿಯಾದ ಕಾರ್ಯಾಚರಣೆ ಜಾಲದ ಭಾಗವಾಗಿ ಮೌಲ್ಯಯುತ ಪಾತ್ರ ವಹಿಸಿದ್ದಾರೆ ಎಂದರು.
ಕರ್ನಾಟಕ ಸರ್ಕಾರದ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕಿ ಕೆ.ಎಸ್. ಲತಾಕುಮಾರಿ ಮಾತನಾಡಿ,ಅಮೆಜಾನ್ ಇಂಡಿಯಾ ಶ್ರವಣ ಮತ್ತು ಮಾತಿನ ದೋಷವುಳ್ಳವರಿಗೆ ಬೆಂಬಲಿಸಲು ಹಲವಾರು ಮೂಲಸೌಕರ್ಯ ಸೌಲಭ್ಯಗಳನ್ನು ಅನುಷ್ಠಾನಗೊಳಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್ ರೈಲು?
Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ?
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.