Kadda Chitra review; ಥ್ರಿಲ್ಲರ್‌ ಹಾದಿಯಲ್ಲಿ ಭಾವನೆಗಳ ಪಯಣ


Team Udayavani, Sep 9, 2023, 2:47 PM IST

kadda chitra review

ನಿಜಕ್ಕೂ ಆತ ಕೃತಿಚೌರ್ಯ ಮಾಡಿದ್ದಾನಾ ಅಥವಾ ಅದು ಸುಳ್ಳು ಆರೋಪನಾ, ಆ ಆರೋಪದ ಹಿಂದೆ ಬೇರೆ ಉದ್ದೇಶವಿದೆಯಾ… ಇಂತಹ ಪ್ರಶ್ನೆಗಳನ್ನು ಹುಟ್ಟುಹಾಕುತ್ತಾ ಮುಂದೆ ಸಾಗುವ ಸಿನಿಮಾ ಈ ವಾರ ತೆರೆಕಂಡಿರುವ “ಕದ್ದ ಚಿತ್ರ’.

ವಿಜಯ ರಾಘವೇಂದ್ರ ನಾಯಕರಾಗಿ ನಟಿಸಿರುವ ಈ ಸಿನಿಮಾ ಒಂದು ಸಸ್ಪೆನ್ಸ್‌-ಥ್ರಿಲ್ಲರ್‌ ಜಾನರ್‌ನಡಿ ಮೂಡಿಬಂದಿದೆ. ಪ್ರೇಕ್ಷಕರನ್ನು ಕುತೂಹಲದ ತುತ್ತತುದಿಗೆ ಕೊಂಡೊಯ್ಯಬೇಕೆಂಬುದು ಪರಮ ಉದ್ದೇಶ. ಅದೇ ಕಾರಣಕ್ಕಾಗಿ ಸಾಕಷ್ಟು ಟ್ವಿಸ್ಟ್‌-ಟರ್ನ್ಗಳೊಂದಿಗೆ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ.

ಚಿತ್ರದಲ್ಲಿ ನಾಯಕನ ಮೇಲೆ ಬರುವ ಆರೋಪ ಆತನ ಫ್ಯಾಮಿಲಿ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತದೆ, ಅದರಿಂದ ಆತ ಪಡುವ ಪಾಡೇನು ಎಂಬ ಅಂಶದ ಮೂಲಕ ಚಿತ್ರಕ್ಕೆ ಸೆಂಟಿಮೆಂಟ್‌ ಟಚ್‌ ಕೂಡಾ ಕೊಟ್ಟಿದ್ದಾರೆ. ಮೊದಲೇ ಹೇಳಿದಂತೆ ಆರಂಭದಲ್ಲಿ ಬರಹಗಾರನೊಬ್ಬನ ಬದುಕಿನ ಏಳು-ಬೀಳಿನ ಕಥೆಯಾಗಿ ತೆರೆದುಕೊಳ್ಳುವ ಸಿನಿಮಾ, ಮುಂದೆ ಸಾಗುತ್ತಾ ಹಲವು ಅಸ್ಪಷ್ಟ ಪ್ರಶ್ನೆಗಳನ್ನು ಪ್ರೇಕ್ಷಕರ ಮಡಿಲಿಗೆ ಹಾಕುತ್ತದೆ. ಈ ಹಂತದಲ್ಲಿ ಪ್ರೇಕ್ಷಕನ ತಲೆಗೆ ಹುಳ ಹೊಕ್ಕ ಅನುಭವ. ಆದರೆ, ನಿರ್ದೇಶಕರು ಮುಂದೆ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತಾ ಪ್ರೇಕ್ಷಕನನ್ನು ಸಮಾಧಾನಪಡಿಸಿ ಕಳುಹಿಸುತ್ತಾರೆ. ಆ ಮಟ್ಟಿಗೆ “ಕದ್ದ ಚಿತ್ರ’ ಒಂದೊಳ್ಳೆಯ ಪ್ರಯತ್ನ.

ಇಡೀ ಸಿನಿಮಾದ ಕಥೆ ನಿಂತಿರೋದು ದ್ವಿತೀಯಾರ್ಧದಲ್ಲಿ. ಇಲ್ಲಿ ಸಿನಿಮಾದ ಹಲವು ಆಯಾಮಗಳು ತೆರೆದುಕೊಳ್ಳುತ್ತಾ ಪ್ರೇಕ್ಷಕನ ಕುತೂಹಲಕ್ಕೆ ಉತ್ತರ ಸಿಗುತ್ತಾ ಹೋಗುತ್ತದೆ. ಕೆಲವೇ ಕೆಲವು ಪಾತ್ರಗಳ ಮೂಲಕ ಇಡೀ ಸಿನಿಮಾವನ್ನು ಕಟ್ಟಿಕೊಡಲಾಗಿದೆ. ಇಡೀ ಸಿನಿಮಾವನ್ನು ಹೆಗಲ ಮೇಲೆ ಹೊತ್ತು ಸಾಗಿರುವುದು ವಿಜಯ ರಾಘವೇಂದ್ರ. ಖುಷಿ, ದುಃಖ, ವೇದನೆ, ಸಿಟ್ಟು, ಪಶ್ಚಾತ್ತಾಪ.. ಹೀಗೆ ನಾನಾ ಭಾವನೆಗಳನ್ನು ಹೊತ್ತು ಸಾಗುವ ಪಾತ್ರದಲ್ಲಿ ವಿಜಯ ರಾಘವೇಂದ್ರ ಗಮನ ಸೆಳೆಯುತ್ತಾರೆ. ಉಳಿದಂತೆ ಚಿತ್ರದ ಸಂಗೀತ, ಛಾಯಾಗ್ರಹಣ ಕಥೆಯ ಆಶಯಕ್ಕೆ ತಕ್ಕುದಾಗಿದೆ.

ರವಿ ರೈ

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidlingu 2 Movie Review

Sidlingu 2 Review ಫ್ಯಾಮಿಲಿ ಡ್ರಾಮಾದಲ್ಲಿ ವಿಜಯ ಪ್ರಸಾದ

Raju James Bond Review

Raju James Bond Review: ಕಾಸಿಗಾಗಿ ಜೇಮ್ಸ್‌ ಜೂಟಾಟ

Bhuvanam Gaganam Review

Bhuvanam Gaganam Review: ಪ್ರೇಮದ ಹಾದಿಯಲ್ಲಿ ಸುಮ ಘಮ

Mr.Rani movie review: ನಾನು ಅವಳಲ್ಲ ಅವನು!

Mr.Rani movie review: ನಾನು ಅವಳಲ್ಲ ಅವನು!

Gajarama Movie Review

Gajarama Movie Review: ಪ್ರೀತಿ ಮಧುರ ತ್ಯಾಗ ಅಮರ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.