![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 10, 2023, 5:55 PM IST
ಬೆಂಗಳೂರು: ಸೂಪರ್ ಸ್ಟಾರ್ ರಜಿನಿಕಾಂತ್ ʼಜೈಲರ್ʼ ಸಿನಿಮಾ ದೊಡ್ಡ ಹಿಟ್ ಆಗಿದೆ. ವರ್ಲ್ಡ್ ವೈಡ್ 600 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ್ದು, ಇನ್ನು ಕೂಡ ಸಿನಿಮಾ ಥಿಯೇಟರ್ ನಲ್ಲಿ ಪ್ರದರ್ಶನ ಕಾಣುತ್ತಿದೆ.
ʼಜೈಲರ್ʼ ಸಿನಿಮಾ ಯಶಸ್ಸಾದ ಖುಷಿಯಲ್ಲಿ ʼತಲೈವಾʼ ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿದ್ದರು. ಸಿನಿಮಾರಂಗಕ್ಕೆ ಬರುವ ಮುನ್ನ ರಜಿನಿಕಾಂತ್ ಬೆಂಗಳೂರಿನಲ್ಲಿ ಹತ್ತಾರು ವರ್ಷ ನೆಲೆಸಿದ್ದರು. ಬಸ್ ಕಂಡೆಕ್ಟರ್ ಬದುಕನ್ನು ಸಾಗಿಸುತ್ತಿದ್ದರು. ಜಯನಗರ ಡಿಪೋಗೆ ದಿಢೀರ್ ಭೇಟಿ ನೀಡಿದ್ದರು. ಆ ಬಳಿಕ ಅವರು ಚಾಮರಾಜಪೇಟೆಯ ರಾಯರ ಮಠಕ್ಕೆ ಭೇಟಿ ನೀಡಿದ್ದರು. ರಾಯರ ಮಠಕ್ಕೆ ಭೇಟಿ ನೀಡಿದ ಕ್ಷಣದ ವಿಡಿಯೋವೊಂದು ಈಗ ವೈರಲ್ ಆಗುತ್ತಿದೆ.
ರಾಯರ ಮಠಕ್ಕೆ ರಜಿನಿಕಾಂತ್ ಭೇಟಿ ನೀಡಿದ ವೇಳೆ ಮಂಗಳಾರತಿ ತಟ್ಟೆಗೆ ದಕ್ಷಿಣೆಯನ್ನು ಹಾಕಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಅಂದು ರಾಯರ ಮಠಕ್ಕೆ ಬಂದಾಗ ರಜಿನಿಕಾಂತ್ ಬಿಳಿ ಬಣ್ಣದ ಉದ್ದ ಕೈ ಅಂಗಿ ಹಾಗೈ ಬಿಳಿ ಪಂಚೆ ತೊಟ್ಟು ಬಂದಿದ್ದರು. ಸಾಮಾನ್ಯವಾಗಿ ನಾವು ಮಂಗಳಾರತಿ ತಟ್ಟೆಗೆ ಪ್ಯಾಂಟ್ ಅಥವಾ ಶರ್ಟ್ ಕಿಸೆಯಿಂದ ತೆಗೆದು ಹಣವನ್ನು ಹಾಕುತ್ತೇವೆ. ಆದರೆ ರಜಿನಿಕಾಂತ್ ಕಿಸೆಯಿಂದ ಹಣ ತೆಗೆಯದೆ ಶರ್ಟ್ ತೋಳಿನಲ್ಲಿ ಹಣವನ್ನಿಟ್ಟು ಅದನ್ನು ದಕ್ಷಿಣೆ ರೂಪದಲ್ಲಿ ಮಂಗಳಾರತಿ ತಟ್ಟೆಗೆ ಹಾಕಿದ್ದಾರೆ.
ʼತಲೈವಾʼ ಅವರು ಮಾತ್ರ ಇಂಥದ್ದನ್ನು ಮಾಡಬಲ್ಲರೆಂದು ಅವರ ಅಭಿಮಾನಿಗಳು ವಿಡಿಯೋವನ್ನು ಹಂಚಿಕೊಂಡು ಹೇಳುತ್ತಿದ್ದಾರೆ.
Only #Thalaivar can plan and do this way.. 👌 pic.twitter.com/8Ao70Sfc9T
— Ramesh Bala (@rameshlaus) September 9, 2023
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.