Udupi ನಕಲಿ ಚಿನ್ನ ಅಡವಿಟ್ಟು 20 ಲಕ್ಷ ರೂ. ವಂಚನೆ; ದೂರು
Team Udayavani, Sep 10, 2023, 11:31 PM IST
ಉಡುಪಿ: ಆದರ್ಶ ಗ್ರಾಹಕರ ವಿವಿಧ್ದೋದ್ದೇಶ ಸಹಕಾರ ಸಂಘದಲ್ಲಿ ನಕಲಿ ಚಿನ್ನ ಅಡವಿಟ್ಟು ಗ್ರಾಹಕನೋರ್ವ 20.62 ರೂ. ವಂಚಿಸಿ ರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಬಗ್ಗೆ ಸಂಘದ ಕಾರ್ಯದರ್ಶಿ ಜಲೇಂದ್ರ ಕೋಟ್ಯಾನ್ ಪೊಲೀಸರಿಗೆ ದೂರು ನೀಡಿದ್ದು, ಸಂಘದ ಸದಸ್ಯ ಆಪಾದಿತ ಮಹಮ್ಮದ್ ರಿಯಾಜ್ ಹಲವು ಬಾರಿ ಚಿನ್ನ ಅಡವಿರಿಸಿ ಸಾಲ ಪಡೆದಿದ್ದರು. ಆದರೆ ಸೆ. 5ರಂದು ಕಾರಿನಲ್ಲಿ ಸೊಸೈಟಿಗೆ ತನ್ನ ಹೆಂಡತಿ ಹಾಗೂ ದಾವೂದ್ ಅಬೂಬಕ್ಕರ್ಎಂಬವರೊಂದಿಗೆ ಬಂದು 2 ನಕ್ಲೇಸ್ ತಂದು ಸಾಲ ಕೇಳಿದ್ದರು. ಈ ವೇಳೆ ಅನುಮಾನಗೊಂಡ ಜಲೇಂದ್ರ ಅವರು ಸಂಘದ ಸರಾಫರಾದ ಅಶೋಕ್ ಆಚಾರ್ಯ ಅವರಿಂದ ಚಿನ್ನ ಪರಿಶೀಲಿಸಿದಾಗ ಅದು ನಕಲಿ ಚಿನ್ನವೆಂದು ತಿಳಿಯಿತು.
ಈ ವೇಳೆ ಆಪಾದಿತರು ತಾವು ಬಂದ ಕಾರನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಈ ನಡುವೆ ಈ ಹಿಂದೆ ಅಡವಿರಿಸಿದ ಎಲ್ಲ ಚಿನ್ನಗಳನ್ನು ಪರಿಶೀಲಿಸಿದಾಗ ಅವುಗಳೂ ಸಹ ನಕಲಿ ಎಂದು ತಿಳಿದು ಬಂದಿದ್ದು, ಜು. 17ರಿಂದ ಸೆ. 2ರ ವರೆಗೆ ಹಂತ ಹಂತವಾಗಿ ಒಟ್ಟು 527.8 ಗ್ರಾಂ ನಕಲಿ ಚಿನ್ನವನ್ನು ಅಡವಿರಿಸಿ ಒಟ್ಟು 20,62,000 ರೂ. ಹಣವನ್ನು ಸಾಲವಾಗಿ ಪಡೆದು ಸಂಘಕ್ಕೆ ವಂಚಿಸಿರುವುದಾಗಿ ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.