Brahmavara: “ಬೇಕರ್ಸ್ ಮೀಟ್’ ಉದ್ಘಾಟನೆ
ಗ್ರಾಹಕರ ಆರೋಗ್ಯದ ಬಗ್ಗೆಯೂ ಕಾಳಜಿ ಅಗತ್ಯ: ಡಾ| ಪ್ರೇಮಾನಂದ ಕೆ.
Team Udayavani, Sep 10, 2023, 11:39 PM IST
ಬ್ರಹ್ಮಾವರ: ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರು ಮತ್ತು ಮಾರಾಟಗಾರರ ಸಂಘ ಹಾಗೂ ಇಂಡಿಯನ್ ಬೇಕರಿ ಫೆಡರೇಶನ್ ಸಹಭಾಗಿತ್ವದಲ್ಲಿ ಸೆ. 10ರಂದು ಬ್ರಹ್ಮಾವರದ ಮದರ್ ಪ್ಯಾಲೇಸ್ ಸಭಾಂಗಣದಲ್ಲಿ ಜರಗಿದ “ಬೇಕರ್ಸ್ ಮೀಟ್’ ಆಹಾರೋ ದ್ಯಮಿಗಳ ಸಂಘಟನಾತ್ಮಕ ಕಾರ್ಯ ಕ್ರಮವನ್ನು ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗದ ಅಂಕಿತಾಧಿಕಾರಿ ಡಾ| ಪ್ರೇಮಾನಂದ ಕೆ. ಉದ್ಘಾಟಿಸಿದರು.
ಈ ಸಂದರ್ಭ ಅವರು ಮಾತನಾಡಿ, ಬೇಕರಿ ಉದ್ಯಮವನ್ನು ಮತ್ತಷ್ಟು ಪರಿಪಕ್ವಗೊಳಿಸುವ ನಿಟ್ಟಿನಲ್ಲಿ ಸರಕಾರ ಹೊಸ ಕಾನೂನು, ನಿಯಮಗಳನ್ನು ಜಾರಿಗೆ ತರುತ್ತಿದ್ದು ಅದನ್ನು ಪಾಲನೆ ಮಾಡುವುದು ಅನಿವಾರ್ಯವಾಗಿದೆ. ನಮ್ಮ ಆರೋಗ್ಯದ ಜತೆಗೆ, ಗ್ರಾಹಕರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ ಬೇಕರಿ ಉದ್ಯಮವನ್ನು ಲಾಭದಾಯಕವನ್ನಾಗಿಸಿಕೊಳ್ಳುವಂತೆ ಅವರು ಕರೆ ನೀಡಿದರು.
ಈ ವೇಳೆ ಮಾಹಿತಿ ಕಾರ್ಯಾಗಾರವೂ ನಡೆಯಿತು. ಸಮಾಜ ಸೇವಕ ವಿಶು ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ಅಶಕ್ತರಿಗೆ ಧನಸಹಾಯ. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.
ಇಂಡಿಯನ್ ಬೇಕರಿ ಫೆಡರೇಶನ್ ಅಧ್ಯಕ್ಷ ಪಿ. ಎನ್. ಶಂಕರನ್, ಕಾರ್ಯದರ್ಶಿ ಕೆ. ಆರ್. ಬಾಲನ್, ಸಂಚಾಲಕ ಬಾಲರಾಜ್ ಕೆ.ಆರ್., ಕೇರಳ ಬೇಕರಿ ಅಸೋಸಿಯೇಶನ್ ಅಧ್ಯಕ್ಷ ಕಿರಣ್, ಕೇಕ್ ತಯಾರಿಕೆಯಲ್ಲಿ ಗಿನ್ನೆಸ್ ದಾಖಲೆಗೈದ ರಂಜಿತ್, ಚಿಕ್ಕಮಗಳೂರು ಟೇಸ್ಟಿ ವರ್ಲ್ಡ್ ಫುಡ್ ಫ್ಯಾಕ್ಟರಿಯ ಆಡಳಿತ ನಿರ್ದೇಶಕ ಎಂ.ಎನ್. ಅರವಿಂದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಂಘದ ಅಧ್ಯಕ್ಷ ವಿಶ್ವನಾಥ್ ಕುಲಾಲ್, ಉಪಾಧ್ಯಕ್ಷರಾದ ಶ್ರೀಶನ್, ಹೆರಾಲ್ಡ್, ಪ್ರಧಾನ ಕಾರ್ಯದರ್ಶಿ ಸತ್ಯಪ್ರಸಾದ್ ಶೆಣೈ, ಕೋಶಾಧಿಕಾರಿ ಶಶಿಕಾಂತ್ ಜಿ. ನಾಯಕ್, ಉಡುಪಿ ಜಿಲ್ಲಾ ವರ್ತಕರ ಹಿತರಕ್ಷಣ ವೇದಿಕೆಯ ಅಧ್ಯಕ್ಷ ದಿವಾಕರ್ ಸನಿಲ್ ಉಪಸ್ಥಿತರಿದ್ದರು.
ಸಂಘದ ಗೌರವಾಧ್ಯಕ್ಷ ವಾಲ್ಟರ್ ಸಲ್ಡಾನ ಸ್ವಾಗತಿಸಿದರು. ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸಗಳ ತಯಾರಕರ ಮತ್ತು ಮಾರಾಟಗಾರರ ಸಹಕಾರ ಸಂಘದ ಅಧ್ಯಕ್ಷ ಶ್ರೀಧರ್ ಪಿ.ಎಸ್. ಪ್ರಸ್ತಾವನೆಗೈದರು. ನವೀನ್ ಶೆಟ್ಟಿ ವಂದಿಸಿ, ಚಂದ್ರಕಾಂತ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ
Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.