![Bhadra Dam; the water leaking from the river sleeves gate stopped](https://www.udayavani.com/wp-content/uploads/2024/07/bhadra-1-415x229.jpg)
G-20: ಔತಣಕೂಟದಲ್ಲಿ ಮಿಂಚಿದ ಸ್ಟಾಲಿನ್, ಸುಖು, ಸೊರೇನ್
Team Udayavani, Sep 11, 2023, 12:27 AM IST
![STALIN BIDEN](https://www.udayavani.com/wp-content/uploads/2023/09/STALIN-BIDEN-620x372.jpg)
ಜಿ20 ದೇಶಗಳ ನಾಯಕರಿಗೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ರಾತ್ರಿ ಆಯೋಜಿಸಿದ್ದ ಔತಣಕೂಟದಲ್ಲಿ ಪ್ರತಿಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ಭಾಗವಹಿಸಿ ಗಮನ ಸೆಳೆದರು.
ಹಿಮಾಚಲ ಪ್ರದೇಶ ಸಿಎಂ ಸುಖ್ವೀಂದರ್ ಸಿಂಗ್ ಸುಖು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರು ಉಲ್ಲಸಿತರಾಗಿ ಓಡಾಡುತ್ತಿದ್ದರು. ಪುತ್ರ ಉದಯನಿಧಿ ಸ್ಟಾಲಿನ್ ಅವರ “ಸನಾತನ ಧರ್ಮ’ ವಿವಾದದ ನಡುವೆಯೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಉಪಸ್ಥಿತಿ ಔತಣಕೂಟದಲ್ಲಿ ಕಂಡುಬಂತು. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರೊಂದಿಗೆ ಹಸ್ತಲಾಘವ ಮಾಡಿದ ಸ್ಟಾಲಿನ್, ನಂತರ ಪ್ರಧಾನಿ ಮೋದಿ ಮತ್ತು ಉಪರಾಷ್ಟ್ರಪತಿ ಧನ್ಕರ್ರೊಂದಿಗೆ ಫೋಟೋಗೆ ಪೋಸ್ ನೀಡಿದರು.
ವಿಶೇಷವೆಂದರೆ, ಸ್ಟಾಲಿನ್ ಅವರು ಶನಿವಾರದ ಔತಣಕೂಟದಲ್ಲಿ ಪಾಲ್ಗೊಂಡ ದಕ್ಷಿಣ ಭಾರತದ ಏಕೈಕ ಸಿಎಂ ಆಗಿದ್ದರು. ಆಂಧ್ರಪ್ರದೇಶ ಸಿಎಂ ಜಗನ್ಮೋಹನ್ ರೆಡ್ಡಿ ಅವರು ವಿದೇಶದಲ್ಲಿದ್ದರೆ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಆಹ್ವಾನವಿದ್ದರೂ, ಅವರು ಭಾಗಿಯಾಗಿರಲಿಲ್ಲ. ಸಿದ್ದರಾಮಯ್ಯ ಮಾತ್ರವಲ್ಲದೇ, ಕಾಂಗ್ರೆಸ್ ಮುಖ್ಯಮಂತ್ರಿಗಳಾದ ಛತ್ತೀಸ್ಗಡದ ಭೂಪೇಶ್ ಬಘೇಲ್ ಮತ್ತು ರಾಜಸ್ಥಾನದ ಅಶೋಕ್ ಗೆಹ್ಲೋಟ್ ಅವರೂ ಈ ಹೈಪ್ರೊಫೈಲ್ ಔತಣಕೂಟಕ್ಕೆ ಬರಲು ನಿರಾಕರಿಸಿದ್ದರು.
ಆದರೆ, ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿರುವ ಮತ್ತು ಕೇಂದ್ರ ಸರಕಾರದ ನೆರವಿನ ಅಗತ್ಯ ಎದುರಿಸುತ್ತಿರುವ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವೀಂದರ್ ಅವರು ಔತಣಕೂಟದಲ್ಲಿ ಭಾಗಿಯಾಗಿದ್ದರು. ಸುಖು ಅವರನ್ನು ಆಲಿಂಗಿಸಿಕೊಂಡ ಕೆಲವು ಫೋಟೋಗಳನ್ನು ಸ್ವತಃ ಪ್ರಧಾನಿ ಮೋದಿಯವರೇ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು ವಿಶೇಷ.
ಟಾಪ್ ನ್ಯೂಸ್
![Bhadra Dam; the water leaking from the river sleeves gate stopped](https://www.udayavani.com/wp-content/uploads/2024/07/bhadra-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![rahul gandhi](https://www.udayavani.com/wp-content/uploads/2024/07/rahul-8-150x83.jpg)
LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ
![terror attack on Army camp in Jammu and Kashmir’s Rajouri](https://www.udayavani.com/wp-content/uploads/2024/07/rajuori-150x83.jpg)
Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ
![Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!](https://www.udayavani.com/wp-content/uploads/2024/07/himachala-150x91.jpg)
Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!
![NEET-UG Counselling: ನೀಟ್-ಯುಜಿ ಕೌನ್ಸೆಲಿಂಗ್ ಈ ಮಾಸಾಂತ್ಯಕ್ಕೆ ಆರಂಭ?](https://www.udayavani.com/wp-content/uploads/2024/07/neet-5-150x83.jpg)
NEET-UG Counselling: ನೀಟ್-ಯುಜಿ ಕೌನ್ಸೆಲಿಂಗ್ ಈ ಮಾಸಾಂತ್ಯಕ್ಕೆ ಆರಂಭ?
![Justin Bieber: ಅಂಬಾನಿ ಪುತ್ರನ “ಸಂಗೀತ್’ನಲ್ಲಿ ಮನಗೆದ್ದ ಜಸ್ಟೀನ್ ಕಾರ್ಯಕ್ರಮ](https://www.udayavani.com/wp-content/uploads/2024/07/ambani-1-150x90.jpg)
Justin Bieber: ಅಂಬಾನಿ ಪುತ್ರನ “ಸಂಗೀತ್’ನಲ್ಲಿ ಮನಗೆದ್ದ ಜಸ್ಟೀನ್ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
![BBMP: 17.56 ಕೋಟಿ ಬಾಡಿಗೆ ಬಾಕಿ; ಬ್ಯಾಂಕ್ಗೆ ಪಾಲಿಕೆ ಬೀಗ](https://www.udayavani.com/wp-content/uploads/2024/07/5-5-150x90.jpg)
BBMP: 17.56 ಕೋಟಿ ಬಾಡಿಗೆ ಬಾಕಿ; ಬ್ಯಾಂಕ್ಗೆ ಪಾಲಿಕೆ ಬೀಗ
![Bhadra Dam; the water leaking from the river sleeves gate stopped](https://www.udayavani.com/wp-content/uploads/2024/07/bhadra-1-150x83.jpg)
Bhadra Dam; ಕೊನೆಗೂ ನಿಂತಿತು ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರು
![Bengaluru: ಅನಧಿಕೃತ ಕೇಬಲ್ ತೆರವಿಗೆ ಬೆಸ್ಕಾಂನಿಂದ 2 ದಿನ ಗಡುವು](https://www.udayavani.com/wp-content/uploads/2024/07/4-5-150x90.jpg)
Bengaluru: ಅನಧಿಕೃತ ಕೇಬಲ್ ತೆರವಿಗೆ ಬೆಸ್ಕಾಂನಿಂದ 2 ದಿನ ಗಡುವು
![Drug sell: ದುಬೈನಿಂದಲೇ ಡ್ರಗ್ಸ್ ಮಾರಾಟ ದಂಧೆ; ತಾಯಿ-ಮಗಳ ವಿರುದ್ಧ ಬೆಂಗ್ಳೂರಲ್ಲಿ ಕೇಸ್](https://www.udayavani.com/wp-content/uploads/2024/07/3-6-150x90.jpg)
Drug sell: ದುಬೈನಿಂದಲೇ ಡ್ರಗ್ಸ್ ಮಾರಾಟ ದಂಧೆ; ತಾಯಿ-ಮಗಳ ವಿರುದ್ಧ ಬೆಂಗ್ಳೂರಲ್ಲಿ ಕೇಸ್
![Electric shock: ಮೊಬೈಲ್ ಚಾರ್ಜ್ಗೆ ಹಾಕುವಾಗ ವಿದ್ಯುತ್ ಶಾಕ್; ವಿದ್ಯಾರ್ಥಿ ಬಲಿ!](https://www.udayavani.com/wp-content/uploads/2024/07/2-5-150x90.jpg)
Electric shock: ಮೊಬೈಲ್ ಚಾರ್ಜ್ಗೆ ಹಾಕುವಾಗ ವಿದ್ಯುತ್ ಶಾಕ್; ವಿದ್ಯಾರ್ಥಿ ಬಲಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.